ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ: ನೀವಿನ್ನೂ ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆಗಳನ್ನು ಅನುಸರಿಸಿ… 

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ. 

Aadhar-PAN linking (file pic)

ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ. 

ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು,  ಐಟಿಆರ್ ಎಸ್ ನ್ನು ಸಲ್ಲಿಸುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಲ್ಲ. ಆದರೆ ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರೆಸುವುದಿಲ್ಲ ಎಂಬುದು ಗಮನಾರ್ಗ ವಿಷಯವಾಗಿದೆ. 

ಹಲವರು ಈಗಾಗಲೇ ಜೋಡಣೆ ಮಾಡುತ್ತಿದ್ದು ಇನ್ನೂ ಕೆಲವರು ಜೋಡಣೆಯಾಗಿದೆಯೇ ಇಲ್ಲವೇ ಎಂಬುದನ್ನು ಮರೆತಿದ್ದಾರೆ. ಆಧಾರ್-ಪ್ಯಾನ್ ಜೋಡಣೆಯಾಗಿದೆಯೇ ಇಲ್ಲವೇ? ಎಂಬುದನ್ನು ತಿಳಿಯುವುದಕ್ಕೆ ಆನ್ ಲೈನ್ ಹಾಗೂ ಆಫ್ ಲೈನ್ ಗಳಲ್ಲಿ ಅವಕಾಶವಿದೆ.

ಆನ್ ಲೈನ್ ನಲ್ಲಿ ಪರಿಶೀಲಿಸುವುದು ಹೇಗೆ? 

  1. ಆದಾಯ ತೆರಿಗೆ ಇ-ಫೈಲಿಂಗ್ ವೆಬ್ ಸೈಟ್ (https://onlineservices.tin.egov-nsdl.com/etaxnew/tdsnontds.jsp) ಗೆ ಭೇಟಿ ನೀಡಿ, ಆಧಾರ್ ಸ್ಟೇಟಸ್ ಎಂಬ ಆಯ್ಕೆ ಪರಿಶೀಲಿಸಿ. 
  2. ಪ್ಯಾನ್- ಆಧಾರ್ ನಂಬರ್ ನಮೂದಿಸಿ 
  3. ಅಲ್ಲಿ View Link Aadhaar Status ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿದರೆ, ಮುಂದಿನ ಪರದೆಯಲ್ಲಿ ಸ್ಟೇಟಸ್ ಪ್ರಕಟವಾಗಲಿದೆ. 

ಒಂದು ವೇಳೆ ಜೋಡಣೆಯಾಗದೇ ಇದ್ದಲ್ಲಿ ಏನು ಮಾಡಬೇಕು? 

ಪರಿಶೀಲನೆ ವೇಳೆ ಜೋಡಣೆಯಾಗದೇ ಇರುವುದು ಕಂಡುಬಂದಲ್ಲಿ ಈ ಕ್ರಮಗಳನ್ನು ಅನುಸರಿಸಬಹುದಾಗಿದೆ. 

ಗ್ರಾಹಕರು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್ ಸಟ್ ಮೂಲಕ ಆಧಾರ್-ಪ್ಯಾನ್ ಜೋಡಣೆ ಮಾಡಬಹುದಾಗಿದೆ. ಇನ್ನು ಇದಕ್ಕೂ ಮುನ್ನ ದಂಡ ಪಾವತಿಸಬೇಕಿರುವುದರಿಂದ  ಗ್ರಾಹಕರು ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಲಿಮಿಟೆಡ್ (NSDL) ಪೋರ್ಟಲ್ ಗೆ ಭೇಟಿ ನೀಡಿಬೇಕಾಗುತ್ತದೆ. ಮತ್ತು ಚಲನ್ ಸಂಖ್ಯೆ. ITNS 280 ರ ಅಡಿಯಲ್ಲಿ  ಮೇಜರ್ ಹೆಡ್ 0021 (ಕಂಪನಿಗಳನ್ನು ಹೊರತುಪಡಿಸಿ ಆದಾಯ ತೆರಿಗೆ) ಮತ್ತು ಮೈನರ್ ಹೆಡ್ 500 (ಇತರ ರಸೀದಿಗಳು) ನೊಂದಿಗೆ ದಂಡವನ್ನು ಪಾವತಿ ಮಾಡಬೇಕಾಗುತ್ತದೆ. 

ಪ್ರಕ್ರಿಯೆಗಳ ವಿವರ

  1. ಆಧಾರ್-ಪ್ಯಾನ್ ಜೋಡಣೆಗೆ ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್ ಸೈಟ್ ಗೆ ಭೇಟಿ ನೀಡಿ, ಅಲ್ಲಿ ದಂಡ ಪಾವತಿಯನ್ನು ಕೇಳಲಾಗುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ, ಗ್ರಾಹಕರಿಗೆ ಎನ್ಎಸ್ ಡಿಎಲ್ ವೆಬ್ ಸೈಟ್ ಕಾಣಿಸುತ್ತದೆ. 
  2. ಪ್ಯಾನ್-ಆಧಾರ್ ಲಿಂಕ್ ವಿನಂತಿಯನ್ನು ಸಲ್ಲಿಸಲು ಅಲ್ಲಿರುವ ಆಯ್ಕೆಗಳ ಪೈಕಿ ಚಲನ್ ನಂ.ITNS 280 ಅಡಿಯಲ್ಲಿ ಮುಂದುವರೆಯಿರಿ. 
  3. ಅಲ್ಲಿ (tax applicable) ಅನ್ವಯವಾಗುವ ತೆರಿಗೆಯನ್ನು ಆಯ್ಕೆ ಮಾಡಿ. ನಂತರ ಒಂದೇ ಚಲನ್‌ನಲ್ಲಿ ಮೇಜರ್ ಹೆಡ್ 0021 (ಕಂಪನಿಗಳನ್ನು ಹೊರತುಪಡಿಸಿ ಆದಾಯ ತೆರಿಗೆ) ಮತ್ತು ಮೈನರ್ ಹೆಡ್ 500 (ಇತರ ರಶೀದಿಗಳು) ಅಡಿಯಲ್ಲಿ ದಂಡ ಪಾವತಿ ಮಾಡಿ 
  4.  ಪೇಮೆಂಟ್ ಮೋಡ್ ನ್ನು ಆಯ್ಕೆ ಮಾಡಿ ವಿವರ ಸಲ್ಲಿಸಿ
  5. ಪ್ಯಾನ್, ವಿಳಾಸ, ಮೌಲ್ಯಮಾಪನ ವರ್ಷವನ್ನು ನಮೂದಿಸಿ 
  6.  ಕ್ಯಾಪ್ಚಾ ನಮೂದಿಸಿ ಪಾವತಿ ಮಾಡಿ. 

ದಂಡ ಪಾವತಿ ಮಾಡಿದ ಬಳಿಕ 4-5 ದಿನಗಳಲ್ಲಿ ಪ್ಯಾನ್- ಆಧಾರ್ ಜೋಡಣೆಗೆ ಮನವಿ ಸಲ್ಲಿಸಿ

ದಂಡ ಪಾವತಿಸಿದ 4-5 ದಿನಗಳ ಬಳಿಕ ಜೋಡಣೆಗೆ ಮಾಡಬೇಕಾದ ಪ್ರಕ್ರಿಯೆ ಹೀಗಿದೆ

  1. ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ ಗೆ ಹೋಗಿ 
  2. ಮುಖ್ಯ ಪುಟದ (home page) ನ ಎಡ ಭಾಗದಲ್ಲಿನ ಕ್ವಿಕ್ ಲಿಂಕ್ಸ್ (Quick Links) ಅಡಿಯಲ್ಲಿ ಕಾಣುವ ಲಿಂಕ್ ಆಧಾರ್ ನ್ನು ಆಯ್ಕೆ ಮಾಡಿ. 
  3. ನಂತರ ಪ್ಯಾನ್ ಹಾಗೂ ಆಧಾರ್ ನಂಬರ್ ನಮೂಬಿಸಿ ವ್ಯಾಲಿಡೇಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ 
  4. ನಿಮ್ಮ ಪಾವತಿ ವಿವರಗಳನ್ನು ದೃಢೀಪಡಿಸಲಾಗಿದೆ ಎಂಬ ಸಂದೇಶ ಪರದೆ ಮೇಲೆ ಕಾಣಿಸುತ್ತದೆ. ಮುಂದುವರೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ 
  5. ವೆಬ್ ಸೈಟ್ ನಲ್ಲಿ ಕೆಳಲಾಗುವ ವಿವರಗಳನ್ನು ನೀಡಿ, ಲಿಂಕ್ ಆಧಾರ್ ಆಯ್ಕೆಯನ್ನು ಕ್ಲಿಕ್ ಮಾಡಿ.
  6. ಮೊಬೈಲ್ ನಂಬರ್ ಗೆ ಬಂದಿರುವ ಒಟಿಪಿಯನ್ನು ನಮೂದಿಸಿ
  7. ಪ್ಯಾನ್- ಆಧಾರ್ ಜೋಡಣೆಗೆ ಮನವಿ ಸಲ್ಲಿಕೆ ಯಶಸ್ವಿಯಾಗುತ್ತದೆ.

ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್ ಕೇಂದ್ರಕ್ಕೆ ಭೇಟಿ ನೀಡಿ ನಿರ್ದಿಷ್ಟ ಫಾರ್ಮ್ ತುಂಬಿ, ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ ಫೋಟೋಕಾಪಿಗಳನ್ನು ಸಲ್ಲಿಕೆ ಮಾಡುವ ಮೂಲಕವೂ ಆಧಾರ್-ಪ್ಯಾನ್ ಜೋಡಣೆ ಮಾಡಬಹುದಾಗಿದೆ.  (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *