ಯುಗಾದಿ ಮುಗಿದರೂ ಕಹಿ ಮಾಸಿಲ್ಲ! ಶಿರಸಿ-ಸಿದ್ಧಾಪುರದಲ್ಲಿ ಪ್ರಾರಂಭವಾಗಿದೆ ಹೆಗಡೆ-ಭಟ್‌ ಬೇಡ, ಬಿ.ಜೆ.ಪಿ. ಬೇಕು ಅಭಿಯಾನ!

ಈ ವರ್ಷವೂ ಶಿರಸಿ-ಸಿದ್ಧಾಪುರಗಳಲ್ಲಿ ಅದ್ಧೂರಿ ಯುಗಾದಿ ಕಾರ್ಯಕ್ರಮ ನಡೆದಿದೆ. ವಿಶೇಶವೆಂದರೆ ಯುಗಾದಿ ಹೆಸರಿನಲ್ಲಿ ಮತಾಂಧ ಪರಿವಾರದ ಭಾಷಣಕಾರರನ್ನು ಕರೆಸಿ ವೈದಿಕ ಆಚಾರ, ವಿಚಾರಗಳನ್ನು ವೈಭವೀಕರಿಸಿ ಬಹುಸಂಖ್ಯಾತ ಹಿಂದುಳಿದವರನ್ನು ಕುರಿ ಮಾಡುವ ಉದ್ದೇಶದಲ್ಲೂ ಅಧಿಕಾರದಾಹಿ ಪರಿವಾರ ಯಶಸ್ವಿಯಾಗಿದೆ.

ಆದರೆ ಸಿದ್ಧಾಪುರದ ಯುಗಾದಿ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಬಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ವೇದಿಕೆಗೆ ಕರೆಯಬಾರದೆನ್ನುವ ವಿಚಾರದಲ್ಲಿ ಆದ ಪ್ರಹಸನ ಮಾತ್ರ ಯುಗಾದಿ ಉತ್ಸವದ ಸಭಾ ಕಾರ್ಯಕ್ರಮಕ್ಕೆ ಬಂದವರಿಗೆ ಪುಕ್ಕಟ್ಟೆ ಮನೋರಂಜನೆ ನೀಡಿದೆ.

ಪೂಜೆ ಮಾಡುವ ವೈದಿಕರು ಮಾತ್ರ ಪಕ್ಕಾ ಹಿಂದೂಗಳು ಎಂದು ಬಿ.ಜೆ.ಪಿ.ಪರವಾಗಿನ ಸಂಘದ ಸತ್ಯವನ್ನು ಅರಚಿದ ಚೈತ್ರಾ ಕುಂದಾಪುರ ಪರೋಕ್ಷವಾಗಿ ಬಹುಸಂಖ್ಯಾತರು ಅನ್ಯ ಧರ್ಮಗಳ ವ್ಯಾಪಾರಿಗಳ ಜೊತೆ ವ್ಯಾಪಾರ, ವ್ಯವಹಾರ ಮಾಡದೆ ಮೇಲ್ವರ್ಗದ ವ್ಯಾಪಾರಿಗಳನ್ನು ಕೊಬ್ಬಿಸಿ ಎಂದಿದ್ದು ಹಿಂದೂ ಹೆಸರಿನಲ್ಲಿ ವೈದಿಕರ ಗುಲಾಮರಾಗಿರುವವರಿಗೆ ಅರ್ಥವಾಯತೋ ಗೊತ್ತಿಲ್ಲ. ಆದರೆ ಯುಗಾದಿ ಉತ್ಸವವನ್ನು ಬಿ.ಜೆ.ಪಿ. ಕಾರ್ಯಕ್ರಮ ಮಾಡುವ ತಂತ್ರಿಗಳ ನಡುವೆ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ವೇದಿಕೆಗೆ ಕರೆಯುವ ವಿಚಾರದಲ್ಲಿ ಗೊಂದಲವೇರ್ಪಟ್ಟಿದ್ದು ಬಿ.ಜೆ.ಪಿ. ಒಡಕನ್ನು ಪ್ರತಿಬಿಂಬಿಸುವಂತಿತ್ತು.

ಯುಗಾದಿ ಉತ್ಸವದ ಪೂರ್ವತಯಾರಿ ಸಭೆಯಲ್ಲಿ ರಾಜಕಾರಣಿಗಳಿಗೆ ವೇದಿಕೆಯಲ್ಲಿ ಜಾಗವಿಲ್ಲ ಎಂದು ನಿರ್ಣಯಿಸಲಾಗಿತ್ತು. ಈ ಸಭಾ ನಡವಳಿಕೆಯಂತೆ ಯುಗಾದಿ ಉತ್ಸವದಲ್ಲಿ ಸ್ವಾಮಿಗಳು,ಪ್ರಮುಖ ವಕ್ತಾರರು ಮಾತನಾಡಬೇಕಿತ್ತು. ಆದರೆ ದುಷ್ಟರೂ,ಬ್ರಷ್ಟರಾದ ಕೆಲವು ಸಂಘನಿಷ್ಟ ಅನಿಷ್ಟ ಗಳು ಉಳಿದವರಿಗೆಲ್ಲಾ ಶೋಭಾ ಯಾತ್ರೆಗೆ ಆಮಂತ್ರಿಸಿ, ಗುಟ್ಟಾಗಿ ಬಿ.ಜೆ.ಪಿ. ನಾಯಕರಿಗೆ ವೇದಿಕೆಗೆ ಬರಲು ತಿಳಿಸಿದ್ದರು. ಈ ಸಂಘಿ ಉದ್ಯಮಿಗಳ ಕಳ್ಳಾಟದಂತೆಯೇ ಜೆ.ಡಿ.ಎಸ್.‌, ಕಾಂಗ್ರೆಸ್‌ ಹಾಗೂ ಇತರ ಕೆಲವು ಪ್ರಮುಖರು ಶೋಭಾಯಾತ್ರೆಗೆ ಬಂದು ಮರಳಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದ ವೇಳೆಗೆ ಇಬ್ಬರು ಬಿ.ಜೆ.ಪಿ. ಮುಖಂಡರು ಬಿಟ್ಟರೆ ಬೇರೆ ಯಾರೂ ಉಪಸ್ಥಿತರಿರಲಿಲ್ಲ. ಈ ಬಗ್ಗೆ ತಕರಾರು ತೆಗೆದ ಸಂಘಟಕರು ಸ್ವಾಮಿ, ವಕ್ತಾರರು ಬಿಟ್ಟರೆ ಬೇರೆ ಯಾರೂ ವೇದಿಕೆಗೆ ಬರುವಂತಿಲ್ಲ ಎಂದು ಪಟ್ಟು ಹಿಡಿದರು. ನಂತರ ಆನಂದ ನಾಯ್ಕ ಮತ್ತು ಡಾ. ವೈದ್ಯರ ಸಂಧಾನದ ನಂತರ ಎಲ್ಲರನ್ನೂ ವೇದಿಕೆಗೆ ಕರೆಯುವುದೆಂದು ತೀರ್ಮಾನಿಸಿದಾಗ ರಹಸ್ಯ ಅರಿತಿದ್ದ ಬಿ.ಜೆ.ಪಿ. ಮುಖಂಡರು ಬಿಟ್ಟರೆ ಬೇರೆ ಯಾರೂ ಬರಲೇ ಇಲ್ಲ. ಯಾಕೆಂದರೆ ಇತರರೆಲ್ಲಾ ಶೋಭಾಯಾತ್ರೆ ಮುಗಿಸಿ ಮರಳಿದ್ದರು.

ಈ ಪ್ರಹಸನದಿಂದಾಗಿ ಸಭಾ ಕಾರ್ಯಕ್ರಮ ವಿಳಂಬವಾಗಿ ಪ್ರಾರಂಭವಾಗಿ ವಕ್ತಾರೆ ಮುಸ್ಲಿಂ ವಿರೋಧದ ಮಾತನಾಡಿ ಸಂಘಿಶನಿ ಕಲ್ಲಡ್ಕ ಭಟ್ಟನ ತೊಡೆಏರಿ ಹೋಗುವ ಕಾರಣಕ್ಕೆ ಶಿರಸಿಗೆ ಧಾವಿಸಿದ್ದರಿಂದ ಯುಗಾದಿ ಉತ್ಸವ ಸಪ್ಪೆಯಾಗಿ ಮುಗಿದುಹೋಯಿತು. ಶಿರಸಿಯಲ್ಲಿ ಕೂಡಾ ಸಂಘಿ ಅಜೆಂಡಾದ (ಅಲ್ಲಿ ಕಲ್ಲಡ್ಕ ಭಟ್ಟ ಮುಖ್ಯ ವಕ್ತಾರ) ಯುಗಾದಿ ಕಾರ್ಯಕ್ರಮದಲ್ಲಿ ಗುಟ್ಟಾಗಿ ಬಿ.ಜೆ.ಪಿ. ಪ್ರಚಾರ ಮಾಡುವ ಕೆಲಸ ನಡೆದ ಬಗ್ಗೆ ಆಕ್ಷೇಪಗಳೆದ್ದಿವೆಯಂತೆ!

ಹಿಂದೂ, ಹಿಂದುತ್ವದ ಹೆಸರಲ್ಲಿ ಬಹುಸಂಖ್ಯಾತ ಹಿಂದುಳಿದವರ ಶೋಷಣೆ ಮಾಡುವ ಬಿ.ಜೆ.ಪಿ.ಯ ಸಂಘಿ ಅಜೆಂಡಾಕ್ಕೆ ವಿರೋಧ ವ್ಯಕ್ತವಾಗುತ್ತಿರುವುದು ಬಿ.ಜೆ.ಪಿ. ಬೇಕು ಭಟ್ಟ,ಹೆಗಡೆ ಬೇಡ ಎನ್ನುವ ಹಿಂದುಳಿದವರ ಬಣದ ಕೂಗು ವಿಧಾನಸೌಧ ಮುಟ್ಟಿರುವುದು ಈ ಬಾರಿ ಶಿರಸಿ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಹೊಸಮುಖ, ಹೊಸಚಿಂತನೆ ಬರುವ ಸಾಧ್ಯತೆ ಹೆಚ್ಚಿರುವ ಲಕ್ಷಣ ಎನ್ನಲಾಗುತ್ತಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *