ಶ್ರೀ ರಾಮತಾರಕ ಜಪಯಜ್ಞ ಪೂರ್ವತಯಾರಿ


ಸಿದ್ದಾಪುರ
ತಾಲೂಕಿನ ಶಿರಳಗಿಯ ಶ್ರೀ ಚೈತನ್ಯ ರಾಜಾರಾಮ ಕ್ಷೇತ್ರದಲ್ಲಿ ಮಾ.೩೦ರಂದು ಲೋಕಕಲ್ಯಾಣಾರ್ಥವಾಗಿ ಜರುಗಲಿರುವ ತ್ರಯೋದಶ ಕೋಟಿ ಶ್ರೀರಾಮತಾರಕಮಂತ್ರ ಜಪ ಯಜ್ಞದ ಮಂಗಲೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ, ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತಂತೆ ಪೂರ್ವಭಾವಿ ಸಭೆ ಶ್ರೀ ಚೈತನ್ಯ ರಾಜಾರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಉಪಸ್ಥಿತಿಯಲ್ಲಿ ನಡೆಯಿತು.


ಶ್ರೀಗಳು ಈ ಸಂದರ್ಭದಲ್ಲಿ ಮಾತನಾಡಿ ನ.೧ರಿಂದ ತ್ರಯೋದಶ ಕೋಟಿ ಶ್ರೀರಾಮತಾರಕಮಂತ್ರ ಜಪಯಜ್ಞವನ್ನು ಆರಂಭಿಸಿದ್ದು ಎಲ್ಲರ ಸಹಕಾರದೊಂದಿಗೆ ೨೪ಕೋಟಿಗೂ ಹೆಚ್ಚು ಶ್ರೀರಾಮತಾರಕಮಂತ್ರ ಜಪವಾಗಿದೆ. ಈ ಜಪಯಜ್ಞದ ಮಂಗಲೋತ್ಸವದ ಕುರಿತಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಎಲ್ಲರೂ ಸ್ವಯಂಸ್ಪೂರ್ತಿಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ೧೩ಕುಂಡಗಳಲ್ಲಿ ಶ್ರೀರಾಮತಾರಕ ಹವನ, ಶ್ರೀರಾಮ ಪರಿವಾರಕ್ಕೆ ವಿಶೇಷ ಪೂಜೆ ನಡೆಯಲಿದ್ದು ಹೋಮಕುಂಡದ ನಿರ್ಮಾಣ ಕಾರ್ಯ ನಡೆದಿದೆ. ೨೫ಕ್ಕೂ ಹೆಚ್ಚು ಋತ್ವಿಜರು ಮತ್ತು ಸಹಾಯಕರು ಪಾಲ್ಗೊಳ್ಳಲಿದ್ದಾರೆ. ಮಾ.೩೦ರ ಬೆಳಗ್ಗೆ ೮ರಿಂದ ಹವನ ನಂತರದಲ್ಲಿ ಪೂರ್ಣಾಹುತಿ ನಡೆಯಲಿದೆ. ನಂತರ ಧಾರ್ಮಿಕ ಸಭೆ ನಡೆಯಲಿದ್ದು ನರಹರಿ ಹೆಗಡೆ ಶಿರಳಗಿ ಅವರ ನೇತೃತ್ವದಲ್ಲಿ ಸತ್ಸಂಗ ಸಭೆ ನಡೆಯಲಿದ್ದು ಸಮಿತಿಯ ಗೌರವಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಿದ್ದಾರೆ. ಈ ಸಂದರ್ಭದಲ್ಲಿ ಎರಡು ಧಾರ್ಮಿಕ ಗ್ರಂಥಗಳ ಬಿಡುಗಡೆ ನಡೆಯುವದು. ಭಜನೆ ಕಾರ್ಯಕ್ರಮದ ಸಿದ್ಧತೆ ನಡೆದಿದೆ. ಮಹಾ ಪ್ರಸಾದ, ಪ್ರಸಾದ ೧೫೦೦ ಮಂದಿಗೆ ಭೋಜನ ತಯ್ಯಾರಿ, ಊಟ. ಸಾಂಸ್ಕೃತಿಕ ಕಾರ್ಯಕ್ರಮದ ಸಿದ್ಧತೆಯಾಗಿದೆ. ವಾಹನ ನಿಲುಗಡೆ, ಕುಡಿಯುವ ನೀರು ಇನ್ನಿತರ ವ್ಯವಸ್ಥೆಯಾಗಿದೆ. ಹೋಮ ನಡೆಯುವ, ಸಭಾಕಾರ್ಯಕ್ರಮ ಮತ್ತು ಭೋಜನ ಸ್ಥಳಗಳಲ್ಲಿ ಪೆಂಡಾಲ್ ಹಾಕಲಾಗುತ್ತಿದೆ. ಮಹನೀಯರು, ಮಾತೆಯರು ತಾವೇ ಮುಂದಾಗಿ ವಿವಿಧ ಕಾರ್ಯಗಳನ್ನು ನಿರ್ವಹಿಸುತ್ತಿರುವದು ಸಂತೋಷ ತಂದಿದೆ ಎಂದರು.


ಸಭೆಯಲ್ಲಿ ವಿವಿಧ ಸಮಿತಿಗಳ ಪ್ರಮುಖರಾದ ಡಾ| ಕೆ.ವಿ.ಶಿವರಾಂ ಶಿರಸಿ,ಬಾಲಕೃಷ್ಣ ಕಾರಂತ ಶಿರಸಿ, ಶ್ರೀಕಾಂತ ಹೆಗಡೆ ಶಿರಸಿ,ಶೇಷಗಿರಿ ಭಟ್, ಶಿರಳಗಿ,ಆನಂದ ನಾಯ್ಕ ಹೊಸೂರು, ವೇ| ಶೇಷಗಿರಿ ಭಟ್ ಗುಂಜಗೋಡ, ವೇ|ಶ್ರೀಧರ ಭಟ್ಟ, ಶ್ರೀಧರ ಟಿ.ಭಟ್ ಶಿರಳಗಿ,ಸೋಮಶೇಖರ ಗೌಡರ್,ಶ್ರೀಕಾಂತ ಭಟ್ ಕೊಳಗಿ, ಸುಧೀರ ಬೆಂಗ್ರೆ ಮುಂತಾದವರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *