ಆಧಾರ್‌-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ

ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

PAN-Aadhar linking

ನವದೆಹಲಿ: ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ, ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು.

2023ರ ಜುಲೈ 1 ರಿಂದ, ಲಿಂಕ್ ಮಾಡದ ಪಾನ್ ಸಂಖ್ಯೆಗೆ ಪರಿಣಾಮ ಎದುರಿಸಬೇಕಾಗಿದ್ದು ಅವು ನಿಷ್ಕ್ರಿಯಗೊಳ್ಳುತ್ತವೆ. ಒಂದು ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸಿದ ನಂತರ ನಿಗದಿತ ಪ್ರಾಧಿಕಾರಕ್ಕೆ ಆಧಾರ್ ಗೆ ಮಾಹಿತಿ ನೀಡಿದಾಗ, 30 ದಿನಗಳಲ್ಲಿ ಪ್ಯಾನ್ ನ್ನು ಮತ್ತೆ ಕಾರ್ಯಗತಗೊಳಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.

ಹಿಂದಿನ ಗಡುವು ಮಾರ್ಚ್ 31 ರಂದು ಎಂದು ತಿಳಿಸಲಾಗಿತ್ತು. ಆಧಾರ್-ಪ್ಯಾನ್ ಲಿಂಕ್ ಮಾಡಲು ವ್ಯಕ್ತಿಗಳು ತಮ್ಮ ಆಧಾರ್ ನ್ನು ಯಾವುದೇ ಪರಿಣಾಮಗಳನ್ನು ಎದುರಿಸದೆ ನಿಗದಿತ ಪ್ರಾಧಿಕಾರಕ್ಕೆ ಜೂನ್ 30ರ ರವರೆಗೆ ತಿಳಿಸಬಹುದು ಎಂದು ಅದು ಹೇಳಿದೆ.

ಆದಾಯ ತೆರಿಗೆ ಕಾಯಿದೆ, 1961 ರ ನಿಬಂಧನೆಗಳ ಅಡಿಯಲ್ಲಿ, ಜುಲೈ 1, 2017 ರಂತೆ PAN ನ್ನು ನಿಗದಿಪಡಿಸಿದ ಮತ್ತು ಆಧಾರ್ ಸಂಖ್ಯೆಯನ್ನು ಪಡೆಯಲು ಅರ್ಹರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮಾರ್ಚ್ 31 ರಂದು ಅಥವಾ ಮೊದಲು ನಿಗದಿತ ಪ್ರಾಧಿಕಾರಕ್ಕೆ ತನ್ನ ಆಧಾರ್ ನ್ನು ತಿಳಿಸಬೇಕಾಗುತ್ತದೆ.

ಜುಲೈ 1, 2023 ರಿಂದ, ಅಗತ್ಯವಿರುವಂತೆ ತಮ್ಮ ಆಧಾರ್ ನ್ನು ತಿಳಿಸಲು ವಿಫಲರಾದ ತೆರಿಗೆದಾರರ PAN ನಿಷ್ಕ್ರಿಯಗೊಳ್ಳುತ್ತದೆ. ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಈಗಾಗಲೇ ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *