ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರ
ತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು.


ನಂತರ ನಡೆದ ಧರ್ಮಸಭೆ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿ ಮಾನವ ಜೀವನದ ಮುಖ್ಯ ಉದ್ದೇಶ ಮುಕ್ತಿ ಪಡೆಯುವುದಾಗಿದೆ. ಮುಕ್ತಿ ಪಡೆಯುವುದಕ್ಕೆ ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮಾತ್ರ ಸಾಧ್ಯ
ಕರ್ಮ, ಭಕ್ತಿ ಹಾಗೂ ಯೋಗ ಮಾರ್ಗದ ಕುರಿತು ವಿವರವಾಗಿ ತಿಳಿಸಿದ ಶ್ರೀಗಳು ಮಠದ ಸೇವೆ ಮಾಡಬೇಕು. ಉಪಾಸನೆ ಮಾಡಬೇಕು. ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ನಮ್ಮಲ್ಲಿರುವ ದೋಷಗಳನ್ನು ಹಾಗೂ ರಾಕ್ಷಸಿಗುಣಗಳನ್ನು ಹೋಗಲಾಡಿಸುವುದಕ್ಕೆ ನಮ್ಮೊಳಗಿನ ದೈವತ್ವವನ್ನು ಅರಿತುಕೊಳ್ಳಲು ಸಹಾಯ ಮಾಡುವ ಶಿಕ್ಷಣವನ್ನು ನಾವು ಅಳವಡಿಸಿಕೊಳ್ಳಬೇಕು. ಅಂತಹ ವ್ಯಕ್ತಿ ಮಾತ್ರ ಸಮಾಜವನ್ನು ಅರ್ಥಮಾಡಿಕೊಂಡು ಸೇವೆ ಮಾಡಲು ಸಮರ್ಥನಾಗುತ್ತಾನೆ.
ತಾಯಂದಿರು ಎಚ್ಚರವಹಿಸಿ ಮಕ್ಕಳಿಗೆ ಶಿಕ್ಷಣ ಹಾಗೂ ಸಂಸ್ಕಾರವನ್ನು ಕಲಿಸಬೇಕು. ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ದೊರಕಿದಾಗ ಮಾತ್ರ ಮಕ್ಕಳು ಸತ್ಪçಜೆಗಳಾಗಲು ಸಾಧ್ಯ ಎಂದು ಹೇಳಿದರು.

ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಮಿರ್ಜಾನ ಶಾಖಾಮಠದ ಶ್ರೀ ನಿಶ್ಚಲಾನಂದ ಶ್ರೀಗಳು ಸಾನಿಧ್ಯವಹಿಸಿದ್ದರು.
ಶತಚಂಡಿ ಯಾಗ ಸಮಿತಿ ಅಧ್ಯಕ್ಷ ಎನ್.ಎಲ್.ಗೌಡ ಕಿಲವಳ್ಳಿ ಅಧ್ಯಕ್ಷತೆವಹಿಸಿದ್ದರು.
ವಿ.ದತ್ತಮೂರ್ತಿ ಭಟ್ಟ ಶಿವಮೊಗ್ಗ, ಸತ್ಯನಾರಾಯಣ ಪಟಗಾರ, ನಿವೃತ್ತ ಇಂಜಿನಿಯರ್ ಆರ್.ಎನ್.ಪಟಗಾರ,ಸೀತಾರಾಮ ಗೌಡ ಕುಳಿಕಟ್ಟು ಉಪಸ್ಥಿತರಿದ್ದರು.


ಬೆಳಗ್ಗೆ ವೇ.ವೆಂಕಟ್ರಮಣ ಕೃಷ್ಣ ಭಟ್ಟ ಹಾಗೂ ವೇ.ಮಂಜುನಾಥ ಗ.ಭಟ್ಟ ಇವರ ಮಾರ್ಗದರ್ಶನದಲ್ಲಿ ದೇವಿ ಸಪ್ತಸತಿ ಪಾರಾಯಣ, ಶತಚಂಡಿ ಯಾಗ, ಪೂರ್ಣಾಹುತಿ ಜರುಗಿತು.
ಸ್ವಾಗತ: ಸಿದ್ದಾಪುರ ತಾಲೂಕಿಗೆ ಆಗಮಿಸಿದ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ. ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಪೂರ್ಣಕುಂಬದೊಂದಿಗೆ ಸ್ವಾಗತಿಸಿ ಬೈಕ್ ರ‍್ಯಾಲಿ, ವಾಧ್ಯ, ಡೊಳ್ಳು ಕುಣಿತದೊಂದಿಗೆ ಮೆರವಣಿಗೆಯ ಮೂಲಕ ಕಿಲವಳ್ಳಿ ಊರಿಗೆ ಸ್ವಾಗತಿಸಲಾಯಿತು. ನಂತರ ಗುರು ಪಾದುಕಾ ಪೂಜೆ, ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.
ನಾಲ್ಕು ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳ ದರ್ಶನ ಪಡೆದು ಪ್ರಸಾದ ಭೋಜನ ಸ್ವೀಕರಿಸಿದರು.
ತೇಜಸ್ವಿನಿ ಹಾಗೂ ಪ್ರಣತಿ ಪ್ರಾರ್ಥನೆ ಹಾಡಿದರು. ವಿ.ಆರ್.ಗೌಡ ಸ್ವಾಗತಿಸಿದರು. ಮೋಹನ ಗೌಡ ಪ್ರಾಸ್ತಾವಿಕ ಮಾತನಾಡಿದರು.ಆರ್.ಬಿ.ಗೌಡ ವಂದಿಸಿದರು. ವಿಷ್ಣು ಪಟಗಾರ ಕಾರ್ಯಕ್ರಮ ನಿರ್ವಹಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *