karnataka kunabi -“ಇವರನ್ನು ಎಸ್ ಟಿ ಸಮುದಾಯ ಸೇರಿಸಬೇಕಿತ್ತು. ಹಾಗೆ ಸೇರಿದ್ದರೆ ಇವರಿಗೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂ ಮಂಜೂರಾತಿ ಅವಕಾಶ ಇತ್ತು”

ಕುಣುಬಿ ಸಮುದಾಯ ವಾಸಿಸುವ ಆಂಬಾರಗುಡ್ಡ ಕೆಳಗಿನ ದುರ್ಗಮ ರಸ್ತೆ ಸಂಪರ್ಕ ಹೊಂದಿರುವ ಆವಿಗೆ ಕೇರಿಗೆ ಹೋಗುವ ಹೊತ್ತಿಗೆ ರಾತ್ರಿಯಾಗಿತ್ತು.

ಅವರು ಕಾಯುತ್ತಲೆ ಇದ್ದರು. ಒಂದಿಷ್ಟು ಹೊತ್ತು ಮಾತುಕತೆ ನಡೆಸಿದಾಗ ” ಜೈವಿಕ ವೈವಿಧ್ಯ ವಲಯ ಘೋಷಣೆ ಹಿನ್ನೆಲೆಯಲ್ಲಿ ತಮ್ಮ ಪಾರಂಪರಿಕ ಹಕ್ಕಿನ ಜತೆ ಕಂದಾಯ ಭೂಮಿಯನ್ನೂ ಅರಣ್ಯ ವೆಂದು ಘೋಷಣೆ ಮಾಡಿರುವ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. ಮತದಾನ ಬಹಿಷ್ಕಾರ ನಿರ್ಧಾರ ತಿಳಿಸಿ ಜತೆ ಆಗಬೇಕು ಎಂದು ಕೋರಿದರು.

ಅವರಿಗೇ ಈ ಅನಂತ ಹೆಗಡೆ ಆಸಿಸರ ಬಗ್ಗೆ ಎಲ್ಲಾ ಗೊತ್ತಿಲ್ಲಾ. ಆ ಯಪ್ಪ ಅಂಬಾರಗುಡ್ಡ ತಪ್ಪಲಿನ 3850 ಎಕರೆ ಮಾತ್ರವಲ್ಲ ಶಿವಮೊಗ್ಗ ಜಿಲ್ಲೆಯಲ್ಲಿ 1.50 ಲಕ್ಷ ಏಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆ ಹಸ್ತಾಂತರ ಮಾಡುವ ಮಲೆನಾಡಿನ ರೈತರಿಗೇ ಮರಣ ಶಾಸನವಾಗಿಸಿದ ನೀತಿ ಬಗ್ಗೆ ಗೊತ್ತಿಲ್ಲ. ಅಲ್ಲಿ ಹೆಚ್ಚಿನವರು ದೀವರು, ಕುಣುಬೀ, ಹಸಲರು, ಜೈನ ಸಮುದಾಯದವರು ಹೆಚ್ಚು ವಾಸಿಸುತಾ ಇದ್ದಾರೆ ಏನ್ನುವ ಸಾಮಾಜಿಕ ಅಂಕಿ ಅಂಶವೂ ಗೊತ್ತಿದ್ದಂತೆ ಇಲ್ಲ.

ಅವರ ಮಾತು ನೆಲದ ಮಕ್ಕಳ ನೋವಿನ ಮಾತಾಗಿತ್ತು.
ಎಲ್ಲವನ್ನೂ ಆಲಿಸಿಕೊಂಡು ಬರುವಾಗ ಜತೆ ಇದ್ದ ಶಿಷ್ಯರು ಕುಣುಬೀ ಸಮುದಾಯದವರ ಬದುಕು ಹಿನ್ನೆಲೆ ಬಗ್ಗೆ ವಿಚಾರಿಸಿ ತಿಳಿದುಕೊಂಡರು. “ಇವರನ್ನು ಎಸ್ ಟಿ ಸಮುದಾಯ ಸೇರಿಸಬೇಕಿತ್ತು. ಹಾಗೆ ಸೇರಿದ್ದರೆ ಇವರಿಗೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂ ಮಂಜೂರಾತಿ ಅವಕಾಶ ಇತ್ತು” ಎನ್ನುವ ಮಾತುಗಳೆಲ್ಲ ನಮ್ಮ ನಡುವೆ ಚರ್ಚೆ ಆಯ್ತು.

ಹಾಗೆ ನಡೆದು ಬರುವಾಗ ಮತ್ತು ಕಾರಿನಲ್ಲಿ ಜತೆ ಇದ್ದ ಶಿಷ್ಯರಿಗೆ ದೇಶದ ಸಂವಿಧಾನ ಮತ್ತು ಅಂಬೇಡ್ಕರ್, ಜೈನ ಮತ್ತು ಬೌದ್ಧ ಧರ್ಮಗಳ ಬಗ್ಗೆ ಮಾತುಕತೆ ನಡೆಸಿದೆವು.

ಅಂಬೇಡ್ಕರ ಹುಟ್ಟಿದ ದಿನದಂದು ಪುಟ್ಟ ಪಾಠ ಮತ್ತು ಸಂವಾದ ನಡೆದು ಹೋಯಿತು.

ಇಷ್ಟು ಈ ಕ್ಷಣದ ಮಾತು.

ಜಿ. ಟಿ ತುಮರಿ.
ವಿತ್ Ganesh Jaki, Madhukar Devadiga Chethan Jain , Bhaskar Sagar ಪ್ರಶಾಂತ ಬಯನೇಮನೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *