ಮತ್ತೊಂದು ಪರೇಶ್‌ ಮೇಸ್ತಾ…… ಲಾಭಕ್ಕೆ ಪ್ರಯತ್ನಿಸಿತೆ ಬಿ.ಜೆ.ಪಿ.?

ಭಟ್ಕಳ: ಯುವತಿಗೆ ಕಿರುಕುಳ, ಗುಂಪು ಘರ್ಷಣೆ, ಉದ್ವಿಗ್ನತೆ!

ನಿರ್ದಿಷ್ಟ ಸಮುದಾಯದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಟ್ಕಳದ ರಂಜಾನ್ ಮಾರ್ಕೆಟ್ ನಲ್ಲಿ ಗುರುವಾರ ತಡರಾತ್ರಿ ಎರಡು ಗುಂಪು ನಡುವೆ ಘರ್ಷಣೆ ನಡೆದು, ಉದ್ವಿಗ್ನತೆ ಉಂಟಾಗಿತ್ತು.

ಭಟ್ಕಳ: ನಿರ್ದಿಷ್ಟ ಸಮುದಾಯದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಟ್ಕಳದ ರಂಜಾನ್ ಮಾರ್ಕೆಟ್ ನಲ್ಲಿ ಗುರುವಾರ ತಡರಾತ್ರಿ ಎರಡು ಗುಂಪು ನಡುವೆ ಘರ್ಷಣೆ ನಡೆದು, ಉದ್ವಿಗ್ನತೆ ಉಂಟಾಗಿತ್ತು.

ಕಾರ್ಯಪ್ರವೃತ್ತರಾದ ಪೊಲೀಸರು ಭಟ್ಕಳ ಹದ್ಲೂರಿನ ಆಟೋರಿಕ್ಷಾ ಚಾಲಕ ಚಂದ್ರ ಸೋಮಯ್ಯಗೌಡ (28), ಸುಲ್ತಾನ್ ಸ್ಟ್ರೀಟ್‌ನ ಜವಳಿ ಅಂಗಡಿ ನೌಕರ ರವೀಂದ್ರ ಶಂಕರ ನಾಯಕ್, ಮೊಹಮ್ಮದ್ ಮೀರಾನ್ ಮೊಹಮ್ಮದ್ ಇಮ್ರಾನ್ ಶೇಖ್ (35) ಹದೀನ್ ಸರ್ಪನಕಟ್ಟೆಯ ಆಟೋರಿಕ್ಷಾ ಚಾಲಕ ನಾಯಕ್ (32) ಮತ್ತಿತರರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಗಲಭೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜನರ ಗುಂಪೊಂದು ಯುವತಿಗೆ ಕಿರುಕುಳ ನೀಡಿದ್ದರಿಂದ ಗಲಾಟೆ ಉಂಟಾಯಿತು. ಈ ಮಧ್ಯೆ ಮತ್ತೊಂದು ಗುಂಪು ಘಟನಾ ಸ್ಥಳಕ್ಕೆ ಧಾವಿಸಿ, ಯುವತಿಗೆ ಕಿರುಕುಳ ನೀಡಿದವರನ್ನು ಪೊಲೀಸರಿಗೆ ಒಪ್ಪಿಸಲು ಮುಂದಾದವರನ್ನು ಥಳಿಸಲು ಆರಂಭಿಸಿತು. ಆದರೆ ಮಧ್ಯಪ್ರವೇಶಿಸಿದ ಕೆಲವರು ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಪೊಲೀಸರಿಗೆ ಹಸ್ತಾಂತರಿಸಬಾರದು ಎಂದು ಬಯಸಿತು.

ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಗ್ವಾದ ನಡೆಸುತ್ತಿದ್ದ ಗುಂಪುಗಳನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೆ ಕೆಲವರು ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದ್ದರಿಂದ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕೆಲಕಾಲ ಪರಿಸ್ಥಿತಿ ಉದ್ವಿಗ್ನವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಎರಡು ಪ್ರಮುಖ ರಾಜಕೀಯ ಪಕ್ಷಗಳು ಕೋಮು ಬಣ್ಣ ಬಳಿದಿವೆ. ಆದರೆ, ಇದು ಪೂರ್ವ ಯೋಜಿತ ಎಂದು ಕೆಲವು ನಿವಾಸಿಗಳು ಹೇಳಿದ್ದಾರೆ. ಆದರೆ, ಯುವತಿಯಿಂದ ಯಾವುದೇ ದೂರು ದಾಖಲಾಗಿಲ್ಲ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *