ಕಾಂಗ್ರೆಸ್‌ ನ ಪ್ರಮುಖ ನಾಯಕ ಇನ್ನಿಲ್ಲ….

ಬೆಳಗಾವಿ: ಕಾಂಗ್ರೆಸ್​ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ

ಹಿರಿಯ ಕಾಂಗ್ರೆಸ್‌  ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.

D B Inamdar

ಬೆಂಗಳೂರು: ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇನಾಂದಾರ್, ಚಿಕಿತ್ಸೆ ಫಲಿಸದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

74 ವರ್ಷದ ಇನಾಂದಾರ್ ಅವರು, ಲಂಗ್ಸ್​ ಮತ್ತು ಲಿವರ್​​ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಮಾತ್ರವಲ್ಲ, ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್​ನ ಖಾಯಂ ಸದಸ್ಯರಾಗಿದ್ದರು.

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈ ಬಾರಿಯೂ ಚುನಾವಣೆಯಲ್ಲೂ ಇನಾಂದಾರ್​ ಕಿತ್ತೂರು ಕ್ಷೇತ್ರ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಅನಾರೋಗ್ಯದ ಕಾರಣ ಇನಾಂದಾರ್​​ಗೆ ಟಿಕೆಟ್ ನೀಡಲು ಕಾಂಗ್ರೆಸ್​ ನಿರಾಕರಿಸಿತ್ತು. ಇನಾಂದಾರ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇನಾಮ್ದಾರ್‌ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಂದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *