ರಾಹುಲ್‌ ದೇವಳದ ಒಳಗೆ ಹೋಗದಿರುವುದೇ ತಪ್ಪು!

ಮೀನು‌ ಮುಟ್ಟಿರುವ ಕಾರಣಕ್ಕೆ ದೇವಸ್ಥಾನದೊಳಗೆ ಪ್ರವೇಶ ಮಾಡುವುದಿಲ್ಲ ಎನ್ನುವ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ವರು ಮಾತ್ರವಲ್ಲ ನಮ್ಮ ಜಾತ್ಯತೀತ, ಪ್ರಗತಿಪರ, ಪುರೋಗಾಮಿ ಸಮುದಾಯ ಕೂಡಾ ಕೊಂಡಾಡತೊಡಗಿದೆ.

‘ ಬಿಜೆಪಿಯವರ ಬಾಯಿಮುಚ್ಚಿಸಿದ ಇದೊಂದು ಅದ್ಭುತ ಕಾರ್ಯತಂತ್ರ’ ಎಂದೆಲ್ಲ ವ್ಯಾಖ್ಯಾನಿಸಲಾಗುತ್ತಿದೆ.

ಇದು ನಮ್ಮ ಮೆದುಳಿಗೆ ಮೆತ್ತಿಕೊಂಡಿರುವ ಮಡಿ-ಮೈಲಿಗೆಯ ಮೆದು ಹಿಂದುತ್ವಕ್ಕೆ ಸಾಕ್ಷಿ.

ಇದರಿಂದ ನಮ್ಮನ್ನು

ನಾವೇ ಹೇಗೆ ತುಚ್ಚೀಕರಿಸಿಕೊಳ್ಳುತ್ತಿದ್ದೇವೆ, ನಮ್ಮ ಆಚಾರ-ವಿಚಾರ, ಸಂಸ್ಕೃತಿ-ಸಂಪ್ರದಾಯದ ಬಗ್ಗೆ ಎಂತಹ ಕೀಳರಿಮೆ ಬೆಳೆಸಿಕೊಂಡಿದ್ದೇವೆ ಎನ್ನುವುದು ಜಾಹೀರಾಗಿದೆ.

ಯಾರೋ ವೈದಿಕರು ಸ್ಥಾಪಿಸಿದ ದೇವಸ್ಥಾನವಾಗಿದ್ದರೆ ಬೇರೆ ಮಾತು, ಉಚ್ಚಿಲದ ಮಹಾಲಕ್ಷ್ಮಿ ದೇವಸ್ಥಾನ ಜಾತಿ‌ ಕಾರಣಕ್ಕೆ ಪ್ರವೇಶ ಇಲ್ಲದ ಮೊಗವೀರ ಬಂಧುಗಳು ಕಟ್ಟಿರುವ ದೇವಸ್ಥಾನ. ಅಲ್ಲಿನ ಮಹಾಲಕ್ಷ್ಮಿಯ ಕೊರಳಲ್ಲಿ ಚಿನ್ನದ ಬೂತಾಯಿ- ಬಂಗುಡೆಯ‌ ಸರಗಳಿವೆ. ಮೀನು-ಮಾಂಸ ತಿಂದು ಪ್ರವೇಶ ಮಾಡಬಾರದೆಂದು ಅಲ್ಲಿ ನಿಷೇಧವೂ ಇಲ್ಲ.

ಹೀಗಿರುವಾಗ ರಾಹುಲ್ ಅವರನ್ನು ಸುತ್ತುವರಿದಿದ್ದ ನಾಯಕರಲ್ಲಿ ಯಾರಾದರೂ ಬುದ್ದಿವಂತರಿದ್ದಿದ್ದರೆ ಕನಿಷ್ಠ ದೇವಸ್ಥಾನದ ಮುಖ್ಯಸ್ಥರನ್ನು ‘ ‘ಮೀನು ಮುಟ್ಟಿದವರು ಒಳಗೆ ಪ್ರವೇಶಿಸಬಹುದಾ?’ ಎಂದಾದರೂ ಕೇಳಬಹುದಿತ್ತು.

ರಾಹುಲ್ ಗಾಂಧಿಯವರ ಸುತ್ತ ಇದ್ದ ಇಂತಹ ಮನಸ್ಸುಗಳೇ ಕಳೆದ ಲೋಕಸಭಾ ಚುನಾವಣೆಯ ಕಾಲದಲ್ಲಿ ಅವರಿಗೆ ಜನಿವಾರ ಹಾಕಿಸಿ ಗೋತ್ರ ಹೇಳಿಸಿದ್ದು. ಇದೇ ಮನಸ್ಸುಗಳು ಮೀನು ತಿಂದು ದೇವಸ್ಥಾನಕ್ಕೆ ಹೋಗುವುದು ತಪ್ಪು ಎಂದು ವಾದಿಸುವುದು.

ಓರ್ವ ಮೊಗವೀರ ಮಹಿಳೆಯಿಂದ ಮೀನುಡುಗೊರೆ ಮಾಡಿಸಿ ವೃತ್ತಿಗೌರವವನ್ನು ಎತ್ತಿಹಿಡಿಯುವಂತೆ ಮಾಡಿದ ಶೂದ್ರ ಮನಸ್ಸು, ಮೀನು‌ಮುಟ್ಟಿದವರು ದೇವಸ್ಥಾನದೊಳಗೆ ಪ್ರವೇಶದ ಪ್ರಶ್ನೆ ಎದುರಾದಾಗ‌ ದಿಡೀರನೇ ವೈದಿಕ‌ಮನಸ್ಸಾಗಿ ಪರಿವರ್ತನೆಯಾಗಿದ್ದರಲ್ಲಿಯೇ ಈ ಕಾಲದ ದುರಂತ ಇದೆ.

ನಮ್ಮ ಮಲಿನಗೊಂಡ ಮೆದುಳು ತೊಳೆಯಲು ಸಮುದ್ರದ ನೀರು‌ಕೂಡಾ ಕಮ್ಮಿಯಾದರೂ ಆಶ್ಚರ್ಯ ಇಲ್ಲ.

ನಮ್ಮ ಕುಟುಂಬದ ದೈವಕ್ಕೆ ವರ್ಷಕ್ಕೊಮ್ಮೆ ನಡೆಯುವ ಪೂಜೆಗೆ ಒಂದು ಕ್ವಾರ್ಟರ್ ಸಾರಾಯಿ‌ಮತ್ತು ಚಕ್ಕುಲಿ‌ ಕೊಡಲೇಬೇಕು. ಹಿಂದೆ ನಮ್ಮ‌ ಅಮ್ಮ ಈಗ ನಮ್ಮ‌ಅಕ್ಕ‌ಅದನ್ನು ಕೊಟ್ಟು ಕೈಮುಗಿದು ಬರ್ತಾರೆ.‌ ಹೀಗಾಗಿ ನಾವೆಲ್ಲ ಸುಖ-ಸಂತೋಷದಿಂದ ಇದ್ದೇವೆ.

ಉಳಿದದ್ದನ್ನು (ದಿನೇಶ್‌ ಅಮೀನ್‌ ಮಟ್ಟು)

Naveen Soorinje ಬರೆದಿದ್ದಾರೆ ಓದಿ:

“ಮೀನು ಹಿಡಿಯುವವರಿಗೆ ದೇವಸ್ಥಾನ ಪ್ರವೇಶ ಇಲ್ಲ” ಎಂಬ ಸಾಮಾಜಿಕ ಬಹಿಷ್ಕಾರವನ್ನು ಪ್ರತಿಭಟಿಸಿ, ಮೊಗವೀರರೇ ನಿರ್ಮಿಸಿದ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದೊಳಗೆ ಮೀನು ಹಿಡಿದೆನೆಂಬ ಕಾರಣಕ್ಕೆ ರಾಹುಲ್ ಗಾಂಧಿ ಖುದ್ದು ಪ್ರವೇಶ ನಿರಾಕರಿಸಿದ್ದು ಅಪಾಯಕಾರಿ ಮೂರ್ಖತನದ ನಡೆ‌.

ನಾನು ಮೀನು ಮುಟ್ಟಿರುವುದರಿಂದ ಉಚ್ಚಿಲ ದೇವಸ್ಥಾನದೊಳಗೆ ಹೋಗುವುದಿಲ್ಲ ಎಂದು ರಾಹುಲ್ ಗಾಂಧಿಯವರು ದೇವಸ್ಥಾನ ಪ್ರವೇಶ ನಿರಾಕರಿಸಿರುವ ನಡೆಯನ್ನು ಹೊಗಳಲಾಗುತ್ತಿದೆ. “ಮೀನು ತಿಂದು ದೇವಸ್ಥಾನದೊಳಗೆ ಹೋದ್ರೆ ತಪ್ಪೇನು ? ಮೀನು ತಿಂದು ಬರಬೇಡಿ ಎಂದು ದೇವರು ಹೇಳಿದ್ದಾನಾ ? ಎಂದು ಕೇಳಿದ್ದ ಸಿದ್ದರಾಮಯ್ಯನವರು ರಾಹುಲ್ ಗಾಂಧಿಯಿಂದ ಕಲಿಯಬೇಕಿದೆ” ಎಂದು ಚರ್ಚೆಗಳು ನಡೆಯುತ್ತಿದೆ. ಬೇರೆ ದೇವಸ್ಥಾನಗಳ ಕತೆ ಪಕ್ಕಕ್ಕಿಡೋಣಾ. ರಾಹುಲ್ ಗಾಂಧಿ ತಾನು ಮೀನು ಮುಟ್ಟಿದ್ದೇನೆ ಎಂಬ ಕಾರಣಕ್ಕಾಗಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದೊಳಗೆ ಪ್ರವೇಶವನ್ನು ತಾನೇ ಖುದ್ದು ನಿರಾಕರಿಸಿದ್ದು ದೇವಸ್ಥಾನದ ಸಾಂಸ್ಕೃತಿಕ, ಸಾಮಾಜಿಕ ಹಿನ್ನಲೆ ತಿಳಿಯದಿರುವ ಮೂಢತನವಷ್ಟೆ.

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನವೇ ಮೀನು ಹಿಡಿಯುವ ಮೊಗವೀರರದ್ದು. ಈ ದೇವಸ್ಥಾನದ ಪ್ರತೀ ಕಲ್ಲು ಕಲ್ಲಿನಲ್ಲೂ ಮೊಗವೀರರ ಕಡಲುಪ್ಪಿನ ಬೆವರ ಪರಿಮಳವಿದೆ. ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿರುವ ಪ್ರತೀ ನೋಟು, ನಾಣ್ಯದಲ್ಲೂ ಕಡಲಲ್ಲಿರುವ ಅಷ್ಟೂ ಮೀನುಗಳ ಘಮವಿದೆ. ಉಚ್ಚಿಲ ಮಹಾಲಕ್ಷ್ಮಿ ದೇವಿಗೆ ಪ್ರೀಯವಾಗಿರುವ ಕಾಪು ಮಲ್ಲಿಗೆಯಂತೂ ಮೀನಿನದ್ದೇ ಕಂಪು ಸೂಸುತ್ತದೆ. ಇದ್ಯಾವುದೂ ಕೂಡಾ ಹಸಿ ಮೀನಿನ ಪರಿಮಳ ಬಂದಿಲ್ಲ ಎಂದಾದರೆ ಉಚ್ಚಿಲ ಮಹಾಲಕ್ಷ್ಮಿ ದೇವಿಯು ಮೊಗವೀರರಲ್ಲಿ ಮುನಿಸಿದ್ದಾಳೆ ಎಂದರ್ಥ. ಯಾಕೆಂದರೆ ಮೊಗವೀರರು ಒಳ್ಳೆ ಮೀನುಗಾರಿಕೆ, ಮೀನಿನ ಉತ್ತಮ ವ್ಯಾಪಾರ, ಮೀನಿನ ದೋಣಿಗಳ ಸಂಪತ್ತಿಗಾಗಿ ಹೊತ್ತುಕೊಂಡ ಹರಕೆಗಳು ಫಲಿಸಿದರೆ ಮೀನು ಹಿಡಿದ, ಮೀನು ಮಾರಿದ ಕೈಯ್ಯಲ್ಲೇ ಹರಕೆ ತೀರಿಸುತ್ತಾರೆ. ಕಾಣಿಕೆ ಡಬ್ಬಿಯಲ್ಲಿ, ಮಲ್ಲಿಗೆಯಲ್ಲಿ ಮೀನಿನ ಘಮಲು ಇಲ್ಲವೆಂದರೆ ಮೊಗವೀರರ ಮೀನು ಉಧ್ಯಮ ಕ್ಷೀಣಿಸಿದೆ ಎಂದರ್ಥ. ಇಂತಹ ದೇವಿಗೆ ಮೀನು ಹಿಡಿದ ಕೈಯ್ಯಲ್ಲಿ ರಾಹುಲ್ ಗಾಂಧಿ ನಮಿಸಿದ್ದರೆ ಉಚ್ಚಿಲ ಮಹಾಲಕ್ಷ್ಮಿ ದೇವಿಗೆ ಅದೆಷ್ಟು ಖುಷಿಯಾಗುತ್ತಿತ್ತು…

ಮೀನು ತಿಂದು ದೇವಸ್ಥಾನಕ್ಕೆ ಹೋಗಬಾರದು ಎಂಬ ನಿಯಮ ಮೀನೇ ಮುಖ್ಯ ಆಹಾರವಾಗಿರುವ ಕರಾವಳಿಯಲ್ಲಿ ಇಲ್ಲ. ಧರ್ಮಸ್ಥಳಕ್ಕೆ ಮೀನು ತಿಂದು ಸಿದ್ದರಾಮಯ್ಯ ಹೋದಾಗ ಖುದ್ದು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯೇ ಸುದ್ದಿಗೋಷ್ಠಿ ನಡೆಸಿ “ಮೀನು ತಿಂದು ಬರಬಾರದು ಎಂಬ ನಿಯಮ ಧರ್ಮಸ್ಥಳ ದೇವಸ್ಥಾನದಲ್ಲಿ ಇಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು. ಮೀನು ತಿಂದು ದೇವಸ್ಥಾನಕ್ಕೆ ಹೋಗಬಾರದು ಎಂಬುದು ಕೋಮುವಾದಿ ವೈದಿಕರ ಹೊಸ ಪಿತೂರಿಯಷ್ಟೆ. ಈಗ ಮೀನು ಹಿಡಿದವರೂ ದೇವಸ್ಥಾನಕ್ಕೆ ಹೋಗಬಾರದು ಎಂಬ ನರೇಟಿವ್ ಅನ್ನು ಸೃಷ್ಟಿಸುವುದು ಅದಕ್ಕಿಂತಲೂ ಅಪಾಯಕಾರಿ ನಡೆ. ಕುರಿ ತಿಂದು ದೇವಸ್ಥಾನಕ್ಕೆ ಹೋಗಬಾರದು ಎನ್ನುವ ಮಡಿವಂತಿಕೆಯ ಮುಂದುವರಿದ ಭಾಗವಾಗಿ ಕುರಿ ಸಾಕುವವರು/ಮುಟ್ಟಿದವರು ದೇವಸ್ಥಾನಕ್ಕೆ ಬರಬಾರದು ಎಂಬ ನಿಯಮ ಸೃಷ್ಟಿಸಬಹುದು. ಒಟ್ಟಾರೆ ಕಾರ್ಮಿಕ ಶೂದ್ರರನ್ನು ಬಹಿಷ್ಕರಿಸುವ ವ್ಯವಸ್ಥಿತ ಪಿತೂರಿಗೆ ಇಂತಹ ಅತಿ ಬುದ್ದಿವಂತಿಕೆಯ ನಡೆಗಳು ನೀರೆರೆಯುತ್ತದೆ.

ಮೀನು ಹಿಡಿದವರು ದೇವಸ್ಥಾನ ಪ್ರವೇಶಿಸಬಾರದು ಎಂಬ ಸಾಮಾಜಿಕ ಬಹಿಷ್ಕಾರವನ್ನು ಪ್ರತಿಭಟಿಸಿಯೇ ಮೊಗವೀರರು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನವನ್ನು 1957 ರಲ್ಲಿ ಸ್ಥಾಪಿಸಿದರು. ಬಾರ್ಕೂರು ದೇವಳದಲ್ಲಿ ಪ್ರವೇಶವಿಲ್ಲದ ಕಾರಣ ತಣ್ಣನೆಯ ಧಾರ್ಮಿಕ ಬಂಡಾಯವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದ ಮೊಗವೀರರಿಗೆ ಅನುಕೂಲವಾಗುವಂತೆ ಮೊಗವೀರರು ಉಚ್ಚಿಲದಲ್ಲಿ ಸುಮಾರು 18 ಎಕರೆ ಭೂಮಿಯನ್ನು ಖರೀದಿಸಿ ಭವ್ಯವಾದ ದೇವಸ್ಥಾನ ನಿರ್ಮಿಸಿದರು. ಇಂತಹ ಬಂಡಾಯದ, ಕ್ರಾಂತಿಯ ಐತಿಹಾಸಿಕ, ಮೀನು ಹಿಡಿವವರ ಅಧಿದೇವತೆ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ “ಮೀನು ಹಿಡಿದೆನೆಂದು” ಪ್ರವೇಶಿಸದಿರುವ ರಾಹುಲ್ ಗಾಂಧಿ ನಿರ್ಧಾರ ಅಪಾಯಕಾರಿ ಮೂಢತನ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *