ಕ್ರಿಕೆಟ್ ತರಭೇತಿ ಶಿಬಿರ ಉದ್ಘಾಟನೆ

.ಡಾಲ್ಫಿನ್ ಕ್ರಿಕೆಟ್ ಕ್ಲಬ್ ಹಾಗೂ ಸಿದ್ದಾಪುರ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕ್ರಿಕೆಟ್ ತರಬೇತಿ ಶಿಬಿರ ಉದ್ಘಾಟನೆ…..ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ…..

ಸಿದ್ದಾಪುರ .. ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ದೇಹವು ಉತ್ತಮ ವ್ಯಾಯಾಮದ ಜೊತೆಗೆ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಇದು ಮನುಷ್ಯನನ್ನು ಆತ್ಮವಿಶ್ವಾಸ ಮತ್ತು ಪ್ರಗತಿಪರರನ್ನಾಗಿ ಮಾಡುತ್ತದೆ ಎಂದು ಸಿದ್ದಾಪುರ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ ವಿನಾಯಕ ಎಸ.ಶೇಟ್ ಹಾಗೂ ಉದ್ಯಮಿ ಸದಾಶಿವ ಬಿ. ನಾಯ್ಕ್ ಅಭಿಪ್ರಾಯಪಟ್ಟರು. ಅವರು ಸಿದ್ದಾಪುರದ ತಾಲೂಕ ಕ್ರೀಡಾಂಗಣದಲ್ಲಿ ತಾರೀಖಿನಂದು ನಡೆದ ಡಾಲ್ಫಿನ್ ಕ್ರಿಕೆಟ್ ಕ್ಲಬ್ ಹಾಗೂ ಸಿದ್ದಾಪುರ ಸ್ಪೋರ್ಟ್ಸ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಬೇಸಿಗೆ ಕ್ರಿಕೆಟ್ ಶಿಬಿರವನ್ನು ಜಂಟಿಯಾಗಿ ಉದ್ಘಾಟಿಸಿ ಮಾತನಾಡಿದರು.

ಸಿದ್ದಾಪುರದ ಸಮಾನ ಮನಸ್ಕರು ಸೇರಿ ಸ್ಪೋರ್ಟ್ಸ್ ಅಕಾಡೆಮಿಯನ್ನು ಪ್ರಾರಂಭಿಸಿದ್ದು ಎಂಟು ವಿವಿಧ ಕ್ರೀಡಾ ತರಬೇತಿ ಶಿಬಿರವನ್ನು ಏರ್ಪಡಿಸಿದ್ದೇವೆ.ಇದರ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದರು. ಮುಖ್ಯ ಅತಿಥಿ ಉದ್ಯಮಿ, ಸ್ಪೋರ್ಟ್ಸ್ ಅಕಾಡೆಮಿಯ ಕೋಶಾಧ್ಯಕ್ಷ ಸುದರ್ಶನ್ ಪಿಳ್ಳೆ ಮಾತನಾಡಿ ಎಲ್ಲರ ಸಹಕಾರದಿಂದ ನೂತನವಾಗಿ ಕ್ರಿಕೆಟ್ ಶಿಬಿರವನ್ನು ಏರ್ಪಡಿಸಿದ್ದು ಇದಕ್ಕೆ ಎಲ್ಲರೂ ಭಾಗಿಯಾಗಿ ಉತ್ತಮ ತರಬೇತಿ ಪಡೆದು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಜಿಲ್ಲಾ, ರಾಜ್ಯ,ರಾಷ್ಟ್ರಮಟ್ಟದವರೆಗೂ ಬೆಳೆಯಲಿ ಎಂದು ಶುಭ ಹಾರೈಸಿದರು.

ರಾಜ್ಯಮಟ್ಟದ ಕ್ರಿಕೆಟ್ ತರಬೇತುದಾರ, ಅಕಾಡೆಮಿಯ ನಿರ್ದೇಶಕ ಡೊಮಿನಿಕ್ ಫರ್ನಾಂಡಿಸ್ ಮಾತನಾಡಿ ಈ ಕ್ರಿಕೆಟ್ ಶಿಬಿರ ಸಿದ್ದಾಪುರದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಪ್ರಾರಂಭಿಸಿದ್ದು ಎಲ್ಲಾ ಪಾಲಕರು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸದ ಜೊತೆಗೆ ರಜಾ ದಿನಗಳಲ್ಲಿ ಕ್ರಿಕೆಟ್ ಶಿಬಿರಕ್ಕೆ ಪಾಲ್ಗೊಂಡು ಉತ್ತಮ ಕ್ರೀಡಾಪಟುವಾಗಿ ಆಗಲು ತಮ್ಮೆಲ್ಲರ ಸಹಕಾರ ಅತ್ಯವಶ್ಯ ಎಂದರು.ಡಾಲ್ಫಿನ್ ಕ್ರಿಕೆಟ್ ಕ್ಲಬ್ ನಿರ್ದೇಶಕ ರಘುವೀರ್ ನಾಯಕ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ ಮೇ ತಿಂಗಳು ಸಂಪೂರ್ಣ ತರಬೇತಿ ನೀಡಲಾಗುವುದು ಹಾಗೂ ಶಿಬಿರದ ಕುರಿತು ವಿವರಿಸಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಅಕಡೆಮಿಯ ಕಾರ್ಯದರ್ಶಿ ನಂದನ್ ಬೋರ್ಕರ್,ಪ್ರಶಾಂತ್ ಡಿ.ಶೇಟ,
ದರ್ಶನ್ ಡಿ ರೇವಣಕರ್, ನಾಗೇಶ ಶಾಮೈನ, ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *