ಶುಕ್ರವಾರ ಶಿರಸಿ ಸಿದ್ಧಾಪುರದಲ್ಲಿ ಶಿವಣ್ಣ ರೋಡ್‌ ಶೋ….

’45’ ಮನರಂಜನಾತ್ಮಕ ಸಿನಿಮಾ, ಇಂಟ್ರಸ್ಟಿಂಗ್ ವಿಷಯ ರಿವೀಲ್ ಮಾಡಿದ ಶಿವಣ್ಣ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ಪ್ರಾರಂಭವಾಯಿತು. ಚಿತ್ರರಂಗದ ಪ್ರಮುಖ ಕಲಾವಿದರು, ತಂತ್ರಜ್ಞರು, ಗಣ್ಯರು ಪಾಲ್ಗೊಂಡಿದ್ದ ಮುಹೂರ್ತದಲ್ಲಿ ಚಿತ್ರೀಕರಣದ ಮೊದಲ ಶಾಟ್‌ಗೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡಿದರು.

Raj B Shetty, Kaustubha Mani, Shivarajkumar, Arjun Janya and Ramesh Reddy

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ಪ್ರಾರಂಭವಾಯಿತು. ಚಿತ್ರರಂಗದ ಪ್ರಮುಖ ಕಲಾವಿದರು, ತಂತ್ರಜ್ಞರು, ಗಣ್ಯರು ಪಾಲ್ಗೊಂಡಿದ್ದ ಮುಹೂರ್ತದಲ್ಲಿ ಚಿತ್ರೀಕರಣದ ಮೊದಲ ಶಾಟ್‌ಗೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡಿದರು.

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ನಿರ್ಮಿಸಿದ್ದಾರೆ, 45 ಚಿತ್ರಕ್ಕೆ ಅರ್ಜುನ್ ಕಥೆ ಬರೆದಿದ್ದಾರೆ, ಅವರು ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ. ಕಮರ್ಷಿಯಲ್ ಎಂಟರ್‌ಟೈನರ್‌ ಸಿನಿಮಾ ಸತ್ಯ ಹೆಗಡೆ ಛಾಯಾಗ್ರಹಣ, ಎಂ ಪ್ರಕಾಶ್ ಸಂಕಲನ ಮತ್ತು ಅನಿಲ್ ಕುಮಾರ್ ಸಂಭಾಷಣೆಯನ್ನು ಬರೆಯಲಿದ್ದಾರೆ.

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಶಿವರಾಜ್‌ಕುಮಾರ್ , ಇದೊಂದು ಚಿಂತನೆಗೆ ಪ್ರೇರೇಪಿಸುವ ಮನರಂಜನಾ ಸಿನಿಮಾ ಎಂದಿದ್ದಾರೆ. “ಕಳೆದ ವರ್ಷದಿಂದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಅರ್ಜುನ್ ಜನ್ಯ ಕಥೆಯನ್ನು ಹೇಳಿದ್ದಲ್ಲದೆ ಸಿನಿಮಾದ ಅನಿಮೇಷನ್ ಕೂಡ ಪ್ರದರ್ಶಿಸಿದರು, ಇದರಿಂದ ನಾನು ತುಂಬಾ ಪ್ರೇರೇಪಿತನಾದೆ ಎಂದು ಹೇಳಿದ್ದಾರೆ.

ನಾನು 45 ಸಿನಿಮಾ ಬಗ್ಗೆ ಉತ್ಸುಕನಾಗಿದ್ದೇನೆ ಮತ್ತು ಕುತೂಹಲದಿಂದ ಇದ್ದೇನೆ ಎಂದು  ರಾಜ್ ಬಿ ಶೆಟ್ಟಿ   ಹೇಳಿದರು.  ಪ್ರತಿಷ್ಠಿತ ಕಲಾವಿದರು ಮತ್ತು ತಂತ್ರಜ್ಞರ ಜೊತೆಯಲ್ಲಿ ನಟಿಸಲು ನನಗೆ ಹೆಮ್ಮೆಯಾಗುತ್ತಿದೆ. ಈ ಚಿತ್ರದಲ್ಲಿ ನಾನು ಬೋಲ್ಡ್ ಹುಡುಗಿ ಪಾತ್ರವನ್ನು ನಿರ್ವಹಿಸುತ್ತಿರುವುದಕ್ಕೆ ಥ್ರಿಲ್ ಆಗಿದ್ದೇನೆ ಎಂದು ನಟಿ ಕೌಸ್ತುಭ ಮಣಿ ತಿಳಿಸಿದ್ದಾರೆ.

ಪ್ರಾಜೆಕ್ಟ್‌ಗೆ ಹಸಿರು ನಿಶಾನೆ ತೋರಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಅರ್ಜುನ್ ಜನ್ಯ ಅವರ ಕಥೆ ಮತ್ತು ಚಿತ್ರದ ಪರಿಕಲ್ಪನೆ ತೋರಿಸಲು ಅನಿಮೇಷನ್  ಬಳಸಿದ ರೀತಿಯಿಂದ ನಾನು ಪ್ರಭಾವಿತನಾಗಿದ್ದೇನೆ. ನಿರೀಕ್ಷೆಗೂ ಮೀರಿ ಚಿತ್ರ ಮೂಡಿಬರಲಿದೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.

ನಾವು ಈಗ ಚಿತ್ರೀಕರಣವನ್ನು ಪ್ರಾರಂಭಿಸುತ್ತಿದ್ದರೂ, ನಾವು ಸುಮಾರು ಒಂಬತ್ತು ತಿಂಗಳಿನಿಂದ ಪ್ರಿ-ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಅರ್ಜುನ್ ಜನ್ಯ ತಿಳಿಸಿದ್ದಾರೆ,  ಶಿವಣ್ಣನವರ ಪ್ರೋತ್ಸಾಹವೇ ನನಗೆ ಈ ಚಿತ್ರ ನಿರ್ದೇಶಿಸಲು ಕಾರಣವಾಯಿತು. ಈ ಪ್ರಾಜೆಕ್ಟ್  ಮೂಲಕ, ನಾನು ಆಳವಾದ ತಾತ್ವಿಕ ಪರಿಕಲ್ಪನೆಗಳನ್ನು ಸರಳವಾದ ಮತ್ತು ಸುಲಭವಾಗಿ ಪ್ರವೇಶಿಸಬಹುದಾದ ರೀತಿಯಲ್ಲಿ  ಸಿನಿಮಾ ತೋರಿಸುವ ಗುರಿ  ಹೊಂದಿದ್ದೇನೆ ಎಂದಿದ್ದಾರೆ.

ಬೆಂಗಳೂರು ಮತ್ತು ಮೈಸೂರಿ ಸ್ಥಳಗಳಲ್ಲಿ 80 ದಿನಗಳಲ್ಲಿ ಚಿತ್ರೀಕರಣವನ್ನು ನಿಗದಿಪಡಿಸಿದ್ದಾರೆ.  ಚಿತ್ರವು ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ತಯಾರಾಗಲಿದ್ದು,  ಸಿನಿಮಾವನ್ನು 2024 ರಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *