ಭೀಮಣ್ಣ ನಾಯ್ಕರಿಗೆ ಅದ್ಧೂರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ

ರಾಜ್ಯ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ೫ ಜನ ಶಾಸಕರಿದ್ದ ಬಿ.ಜೆ.ಪಿ. ಈ ಬಾರಿ ಕೇವಲ ಎರಡು ಕ್ಷೇತ್ರಗಳನ್ನು ಮಾತ್ರ ಉಳಿಸಿಕೊಂಡಿದೆ. ಒಂದೇ ಸ್ಥಾನ ಗಳಿಸಿದ್ದ ಕಾಂಗ್ರೆಸ್‌ ಈ ಬಾರಿ ನಾಲ್ಕು ಕ್ಷೇತ್ರ ಗಳಿಸಿ ದಿಗ್ವಿಜಯ ಸಾಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಈ ಬಾರಿ ಶಿರಸಿ ಕ್ಷೇತ್ರ ಹಲವು ಕೋನಗಳಿಂದ ಜನಮನ ಸೆಳೆದಿತ್ತು. ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಿರಂತರವಾಗಿ ಜಯಗಳಿಸಿದ್ದ ಶಿರಸಿ ಕ್ಷೇತ್ರದಲ್ಲಿ ಈ ಬಾರಿ ವಿಶ್ವೇಶ್ವರ ಹೆಗಡೆಯವರನ್ನು ಸೋಲಿಸಿದ ಉದ್ಯಮಿ ಭೀಮಣ್ಣ ನಾಯ್ಕ ಈ ಹಿಂದೆ ಮೂರು ಬಾರಿ ಇದೇ ಕ್ಷೇತ್ರದಲ್ಲಿ ಸೋಲು ಕಂಡಿದ್ದರು.

ಬದಲಾದ ಪರಿಸ್ಥಿತಿಯಲ್ಲಿ ಸೋಲಿಲ್ಲದ ಸರದಾರ ವಿಶ್ವೇಶ್ವರ ಹೆಗಡೆಯವರನ್ನು ಮೊಟ್ಟಮೊದಲಿಗೆ ಸೋಲಿಸಿದ ಭೀಮಣ್ಣ ನಾಯ್ಕರನ್ನು ಕ್ಷೇತ್ರದ ಜನತೆ ಸ್ವಾಗತಿಸಿದ್ದು ವಿಭಿನ್ನವಾಗಿತ್ತು. ಕುಮಟಾದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಿ ಕುಮಟಾದಿಂದ ಹೊರಟ ಭೀಮಣ್ಣ ತಮ್ಮ ಕ್ಷೇತ್ರ ಶಿರಸಿ-ಸಿದ್ಧಾಪುರಕ್ಕೆ ಬರುವಷ್ಟರಲ್ಲಿ ಸಂಜೆಯಾಗತೊಡಗಿತ್ತು. ಸ್ವಾತಂತ್ರ್ಯ ದೊರೆತ ನಂತರ ಮೊಟ್ಟಮೊದಲ ಬಾರಿಗೆ  ಹಿಂದುಳಿದ ವರ್ಗಗಳ ಮೊದಲ ಶಾಸಕನಾಗಿ ಜಯಗಳಿಸಿದ ಭೀಮಣ್ಣ ನಾಯ್ಕರನ್ನು ಸಿದ್ಧಾಪುರದಲ್ಲಿ ಹಸಿರುಹಾಸಿನ ಸ್ವಾಗತ ಕೋರಲಾಯಿತು.

ಸಿದ್ಧಾಪುರ ತಾಲೂಕಿನ ಗಡಿಗಳಿಂದ ಪ್ರಾರಂಭವಾಗಿ ತಾಲೂಕು ಕೇಂದ್ರದ ವರೆಗೆ ಅನೇಕ ಕಡೆ ಭೀಮಣ್ಣ ನಾಯ್ಕರನ್ನು ಸ್ವಾಗತಿಸಲಾಯಿತು.ಸಿದ್ಧಾಪುರ ನಗರ ಪ್ರವೇಶಿಸುತ್ತಲೇ ಸಾವಿರಾರು ಜನರು ಸೇರಿ ರೋಡ್‌ ಶೋ ನಡೆಸುವ ಮೂಲಕ ಮತದಾರರಿಗೆ ಧನ್ಯವಾದ ತಿಳಿಸಿದರು.


ತಮ್ಮ ಹೊಸ ಶಾಸಕ ಭೀಮಣ್ಣ ನಾಯ್ಕರನ್ನು ಅಭಿನಂದಿಸುವ ಭರದಲ್ಲಿ  ಅಭಿಮಾನಿಗಳು ಬೇರೆ ಯಾವ ಲಕ್ಷವೂ ಇಲ್ಲದೆ ಕುಣಿದುಕುಪ್ಪಳಿಸಿದರು. ನೂತನ ಶಾಸಕ ಭೀಮಣ್ಣ ನಾಯ್ಕರನ್ನು ಸುತ್ತುವರಿದ ಜನರು ಮಾಧ್ಯಮಗಳಿಗೆ ಶಾಸಕರು ಪ್ರತಿಕ್ರೀಯಿಸಲೂ ಅವಕಾಶ ನೀಡಲಿಲ್ಲ. ಅನೇಕ ಸೋಲುಗಳ ನಂತರ ಗೆಲುವು ಸಾಧಿಸಿದ ಭೀಮಣ್ಣ ನಾಯ್ಕ ಸೋಲರಿಯದ ವಿಶ್ವೇಶ್ವರ ಹೆಗಡೆಯವರನ್ನು ಸೋಲಿಸಿದ್ದು ಈ ಅಭಿಮಾನದ ಹಿಂದಿನ ಗುಟ್ಟು ಎನ್ನುವಂತಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *