ಭೀಮಣ್ಣ ನಾಯ್ಕರಿಗೆ ಅದ್ಧೂರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ

ರಾಜ್ಯ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ೫ ಜನ ಶಾಸಕರಿದ್ದ ಬಿ.ಜೆ.ಪಿ. ಈ ಬಾರಿ ಕೇವಲ ಎರಡು ಕ್ಷೇತ್ರಗಳನ್ನು ಮಾತ್ರ ಉಳಿಸಿಕೊಂಡಿದೆ. ಒಂದೇ ಸ್ಥಾನ ಗಳಿಸಿದ್ದ ಕಾಂಗ್ರೆಸ್‌ ಈ ಬಾರಿ ನಾಲ್ಕು ಕ್ಷೇತ್ರ ಗಳಿಸಿ ದಿಗ್ವಿಜಯ ಸಾಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಈ ಬಾರಿ ಶಿರಸಿ ಕ್ಷೇತ್ರ ಹಲವು ಕೋನಗಳಿಂದ ಜನಮನ ಸೆಳೆದಿತ್ತು. ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಿರಂತರವಾಗಿ ಜಯಗಳಿಸಿದ್ದ ಶಿರಸಿ ಕ್ಷೇತ್ರದಲ್ಲಿ ಈ ಬಾರಿ ವಿಶ್ವೇಶ್ವರ ಹೆಗಡೆಯವರನ್ನು ಸೋಲಿಸಿದ ಉದ್ಯಮಿ ಭೀಮಣ್ಣ ನಾಯ್ಕ ಈ ಹಿಂದೆ ಮೂರು ಬಾರಿ ಇದೇ ಕ್ಷೇತ್ರದಲ್ಲಿ ಸೋಲು ಕಂಡಿದ್ದರು.

ಬದಲಾದ ಪರಿಸ್ಥಿತಿಯಲ್ಲಿ ಸೋಲಿಲ್ಲದ ಸರದಾರ ವಿಶ್ವೇಶ್ವರ ಹೆಗಡೆಯವರನ್ನು ಮೊಟ್ಟಮೊದಲಿಗೆ ಸೋಲಿಸಿದ ಭೀಮಣ್ಣ ನಾಯ್ಕರನ್ನು ಕ್ಷೇತ್ರದ ಜನತೆ ಸ್ವಾಗತಿಸಿದ್ದು ವಿಭಿನ್ನವಾಗಿತ್ತು. ಕುಮಟಾದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಿ ಕುಮಟಾದಿಂದ ಹೊರಟ ಭೀಮಣ್ಣ ತಮ್ಮ ಕ್ಷೇತ್ರ ಶಿರಸಿ-ಸಿದ್ಧಾಪುರಕ್ಕೆ ಬರುವಷ್ಟರಲ್ಲಿ ಸಂಜೆಯಾಗತೊಡಗಿತ್ತು. ಸ್ವಾತಂತ್ರ್ಯ ದೊರೆತ ನಂತರ ಮೊಟ್ಟಮೊದಲ ಬಾರಿಗೆ  ಹಿಂದುಳಿದ ವರ್ಗಗಳ ಮೊದಲ ಶಾಸಕನಾಗಿ ಜಯಗಳಿಸಿದ ಭೀಮಣ್ಣ ನಾಯ್ಕರನ್ನು ಸಿದ್ಧಾಪುರದಲ್ಲಿ ಹಸಿರುಹಾಸಿನ ಸ್ವಾಗತ ಕೋರಲಾಯಿತು.

ಸಿದ್ಧಾಪುರ ತಾಲೂಕಿನ ಗಡಿಗಳಿಂದ ಪ್ರಾರಂಭವಾಗಿ ತಾಲೂಕು ಕೇಂದ್ರದ ವರೆಗೆ ಅನೇಕ ಕಡೆ ಭೀಮಣ್ಣ ನಾಯ್ಕರನ್ನು ಸ್ವಾಗತಿಸಲಾಯಿತು.ಸಿದ್ಧಾಪುರ ನಗರ ಪ್ರವೇಶಿಸುತ್ತಲೇ ಸಾವಿರಾರು ಜನರು ಸೇರಿ ರೋಡ್‌ ಶೋ ನಡೆಸುವ ಮೂಲಕ ಮತದಾರರಿಗೆ ಧನ್ಯವಾದ ತಿಳಿಸಿದರು.


ತಮ್ಮ ಹೊಸ ಶಾಸಕ ಭೀಮಣ್ಣ ನಾಯ್ಕರನ್ನು ಅಭಿನಂದಿಸುವ ಭರದಲ್ಲಿ  ಅಭಿಮಾನಿಗಳು ಬೇರೆ ಯಾವ ಲಕ್ಷವೂ ಇಲ್ಲದೆ ಕುಣಿದುಕುಪ್ಪಳಿಸಿದರು. ನೂತನ ಶಾಸಕ ಭೀಮಣ್ಣ ನಾಯ್ಕರನ್ನು ಸುತ್ತುವರಿದ ಜನರು ಮಾಧ್ಯಮಗಳಿಗೆ ಶಾಸಕರು ಪ್ರತಿಕ್ರೀಯಿಸಲೂ ಅವಕಾಶ ನೀಡಲಿಲ್ಲ. ಅನೇಕ ಸೋಲುಗಳ ನಂತರ ಗೆಲುವು ಸಾಧಿಸಿದ ಭೀಮಣ್ಣ ನಾಯ್ಕ ಸೋಲರಿಯದ ವಿಶ್ವೇಶ್ವರ ಹೆಗಡೆಯವರನ್ನು ಸೋಲಿಸಿದ್ದು ಈ ಅಭಿಮಾನದ ಹಿಂದಿನ ಗುಟ್ಟು ಎನ್ನುವಂತಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *