ಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.

Congress_BJP_Leaders1

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ, 46,163 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರನ್ನು ಸೋಲಿಸಿದ್ದಾರೆ. ಉಳಿದಂತೆ ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರು 1, 22, 392 ಮತಗಳ ಅಂತರದಿಂದ ಸಮೀಪದ ಜೆಡಿಎಸ್ ಅಭ್ಯರ್ಥಿ ಬಿ ನಾಗರಾಜು ಅವರನ್ನು ಸೋಲಿಸಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಆರ್. ಅಶೋಕ ಠೇವಣಿ ಕಳೆದುಕೊಂಡಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್, 53, 953 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ಮಣಿಸಿದ್ದಾರೆ.  ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ನಾಯಕ ಸಿಎನ್ ಅಶ್ವತ್ಥ ನಾರಾಯಣ 41, 302 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅನೂಫ್ ಐಯ್ಯಂಗಾರ್ ಅವರನ್ನು ಸೋಲಿಸಿದ್ದಾರೆ. 

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ 34,289 ಮತಗಳ ಅಂತರದಿಂದ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಎದುರು ಸೋಲೊಪ್ಪಿಕೊಂಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಜೆ. ಸಿ. ಮಾಧುಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಬಿ. ಸುರೇಶ್ ಬಾಬು ಎದುರು 10.642 ಮತಗಳ ಅಂತರಿಂದ ಸೋತಿದ್ದಾರೆ.

ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ, 13, 640 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಣಿಕಾಂತ್ ರಾಥೋಡ್ ಅವರನ್ನು ಸೋಲಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರನ್ನು 10, 642 ಮತಗಳ ಅಂತರದಿಂದ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಸೋಲಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ 5,926 ಮತಗಳ ಅಂತರದಿಂದ ಸಿ.ಟಿ. ರವಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್. ಡಿ. ತಮ್ಮಯ್ಯ ಸೋಲಿನ ರುಚಿ ತೋರಿಸಿದ್ದಾರೆ. 

ಹೊಳೆ ನರಸೀಪುರದಲ್ಲಿ ಜೆಡಿಎಸ್ ನ ಹೆಚ್ ಡಿ ರೇವಣ್ಣ 3,152 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಸ್ ಪಟೇಲ್ ಅವರನ್ನು ಮಣಿಸಿದ್ದಾರೆ. ಕೊರಟಗೆರೆಯಲ್ಲಿ ಡಾ. ಜಿ. ಪರಮೇಶ್ವರ್ ತನ್ನ ಸಮೀಪದ ಜೆಡಿಎಸ್ ಅಭ್ಯರ್ಥಿ ಪಿ.ಆರ್. ಸುಧಾಕರ್ ಲಾಲ್ ಅವರನ್ನು 14, 347 ಮತಗಳ ಅಂತರದಿಂದ ಮಣಿಸಿದ್ದಾರೆ.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು 10,715 ಮತಗಳ ಅಂತರದಿಂದ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ ಸೋಲಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರನ್ನು 12,241 ಮತಗಳ ಅಂತರದಿಂದ ಬಿಜೆಪಿಯ ಆರಗ ಜ್ಞಾನೇಂದ್ರ ಸೋಲಿಸಿದ್ದಾರೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *