ಉ.ಕ.ದಲ್ಲಿ ಈಗ ಉಚ್ಛಾಟನಾ ಪರ್ವ!

ನಿರೀಕ್ಷೆಯಂತೆ ಉತ್ತರ ಕರ್ನಾಟಕ, ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಬಿ.ಜೆ.ಪಿ. ಸೋತಿದೆ.

ಜಾದಳದ ಅಥವಾ ಇತರ ಜಾತ್ಯಾತೀತ ಪಕ್ಷಗಳ ಮತಗಳನ್ನು ಕಾಂಗ್ರೆಸ್‌ ಕ್ರೋಢೀಕರಿಸಿದ್ದರಿಂದ ಬಿ.ಜೆ.ಪಿ. ಹೀನಾಯವಾಗಿ ಸೋತಿದೆ ಎಂದು ಬಿ.ಜೆ.ಪಿ. ಆತ್ಮಾವಲೋಕನ ಮಾಡಿಕೊಳ್ಳತೊಡಗಿದೆ.

ವಾಸ್ತವವೆಂದರೆ ಬಿ.ಜೆ.ಪಿ. ಸೋಲಿನಲ್ಲಿ ಹಿಂದೂ ಎಂದುಕೊಂಡು ಕಾರ್ಯಾಚರಿಸುವ ಹಿಂದುತ್ವ ವಾದದ ವೈದಿಕತೆಯಿಂದ ಬಿ.ಜೆ.ಪಿ. ಸೋತಿದೆ.

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ,ಹಳೆಮೈಸೂರು ಭಾಗಗಳಲ್ಲಿ ಬಿ.ಜೆ.ಪಿ. ಆಡಳಿತದಲ್ಲಿ ಭಜರಂಗಿಗಳ ಉಪಟಳ ಹೆಚ್ಚಿತ್ತು. ದೇಶಪ್ರೇಮ, ರಾಷ್ಟ್ರೀಯತೆ,ಹಿಂದುತ್ವ ಎನ್ನುವ ಪರಿವಾರಿಗಳು ರಾಜ್ಯದ ಕಾನೂನು ಸುವ್ಯವಸ್ಥೆಗೆ ಭಂಗ ತರುತಿದ್ದರೆ ಬಿ.ಜೆ.ಪಿ ಆಡಳಿತದು ದ್ದಕ್ಕೂ ಆಡಳಿತಶಾಹಿ ಬ್ರಷ್ಟವಾಗಿ ರಾಜ್ಯದೆಲ್ಲೆಡೆ ಸ್ವಜನಪಕ್ಷಪಾತ ವಿಪರೀತವಾಗಿ ಈ ಅಸಹ್ಯಗಳನ್ನು ಮರೆಮಾಚಲು ಹಿಂದುತ್ವ, ದೇಶಪ್ರೇಮ, ರಾಷ್ಟ್ರೀಯತೆ ಎಂದು ಪ್ರಚಾರ, ಪ್ರಸಾರ ಮಾಡಿಬಿಟ್ಟರೆ ಕನ್ನಡಿಗರು ಬಿ.ಜೆ.ಪಿ. ಕೈ ಹಿಡಿಯುತ್ತಾರೆ ಎಂದು ಗುಜರಾತಿಗಳು ಭ್ರಮಿಸಿದ್ದ ಕಪಟತನ ಕನ್ನಡಿಗರಿಗೆ ಅರ್ಥವಾಯಿತು.

ಜಾತ್ಯಾತೀತ ಜನತಾದಳ ಅಸ್ಥಿತ್ವಕ್ಕಾಗಿ ಬಿ.ಜೆ.ಪಿ. ಬೆಂಬಲಿಸಿದರೂ ಅದು ಅಹಿಂದ ಗಳಿಗೆ ಆಗುವ ಹಾನಿ, ಅವಮಾನ ಎನ್ನುವ ಸತ್ಯವನ್ನು ಮತದಾರರಿಗೆ ತಿಳಿಸುವಲ್ಲಿ ಕಾಂಗ್ರೆಸ್‌ ಗೆದ್ದಿತು. ಜೊತೆಗೆ ಬಿ.ಜೆ.ಪಿ.ಯ ಸುಳ್ಳು,ಕೋಮುವಾದದ ತಂತ್ರಗಳಿಂದ ನಾವೇನಾದರೂ ಯಾಮಾರಿದರೆ ಈ ದೇಶಕ್ಕೆ ಭವಿಷ್ಯವಿಲ್ಲ ಎಂದು ಅರಿತ ಅಹಿಂದ್‌ ಸಮೂದಾಯ ಜಾಗೃತವಾಗುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಗತಿಪರ ಮನಸ್ಸುಗಳು ದುಡಿದವು.

ಮಾರಿಕೊಂಡ ಮಾಧ್ಯಮಗಳು ಮೋದಿ, ಹಿಂದುತ್ವ, ರಾಷ್ಟ್ರೀಯತೆ, ದೇಶದ ಸುರಕ್ಷತೆ ಎನ್ನುವ ಶಬ್ಧಗಳು ಮಲಿನವಾಗಿವೆಎಂದರಿತ ಜಾಗೃತ ಕನ್ನಡ ಮನಸ್ಸುಗಳು ಮಾಧ್ಯಮ, ಸಾಮಾಜಿಕ ಮಾಧ್ಯಮಗಳ ಮೂಲಕ ಪರ್ಯಾಯ ಶಕ್ತಿಗಳಾಗಿ ದುಡಿದವು ಇದರ ಪರಿಣಾಮ ಕಾಂಗ್ರೆಸ್‌ ಗೆ ೧೩೫ ಸಂಖ್ಯೆಗಳು ದೊರೆತು ಮೋದಿ-ಷಾ ಕನ್ನಡಿಗರನ್ನು ಕಂಡರೆ ಹೆದರುವಂತಾಯಿತು.

ಇದೇ ಮೋದಿ-ಷಾ, ಮಾಧ್ಯಮಗಳನ್ನು ಹತ್ತು ವರ್ಷಗಳ ಹಿಂದೆ ನಂಬುತಿದ್ದ ಜನರು ೨೦೨೩ ರಲ್ಲಿ ಈ ಪರಿವಾರದ ಆಶಾಢಭೂತಿತನದ ವಿರುದ್ಧ ಜಾಗೃತರಾದರು. ಇಷ್ಟೆಲ್ಲಾ ಆದ ಮೇಲೆ ವರುಣಾದಲ್ಲಿ ಸೋತ ಸೋಮಣ್ಣ ತನ್ನ ಸೋಲಿನ ಹಿಂದೆ ಬಿ.ಜೆ.ಪಿ. ಯ ಷಡ್ಯಂತ್ರವಿದೆ ಎಂದು ಶಪಿಸತೊಡಗಿದ್ದಾರೆ.

ಸ್ವಜನ ಪಕ್ಷಪಾತ,ಕೋಮುವಾದಿ ನೀತಿಗಳಿಂದ ಜೀವಮಾನದಲ್ಲಿ ಮೊದಲ ಬಾರಿ ಸೋತ ಮಾಜಿ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಪಕ್ಷ, ಕಾಂಗ್ರೆಸ್‌ ಸೇರಿದಂತೆ ಇಡೀ ರಾಜ್ಯದ ಜನರನ್ನು ಅವಮಾನಿಸತೊಡಗಿದರು!.

ತೇಜಸ್ವಿ ಸೂರ್ಯ, ಪ್ರತಾಪಸಿಂಹ, ಚಕ್ರವರ್ತಿ ಸೂಲಿಬೆಲೆ ಮಹೇಶ್‌ ಹೆಗಡೆಗಳೆಲ್ಲಾ ಮತಿವಿಕಲರಂತೆ ವರ್ತಿಸತೊಡಗಿದರು. ಇಂಥ ಮರೆಯದ ಏಟು ಕೊಟ್ಟ ಕನ್ನಡಿಗರು ದೇಶದ ದಕ್ಷಿಣ ಭಾರತೀಯರು ಉತ್ತರ ಭಾರತೀಯರಂತೆ ಸಮೂಹಸನ್ನಿಗೊಳಗಾಗದ ಪ್ರಜ್ಞಾವಂತರು ಎನ್ನುವುದನ್ನು ನಿರೂಪಿಸಿದರು.

ಈ ಫಲಿತಾಂಶ, ಬದಲಾವಣೆ ಕನಿಷ್ಟ ೫ ವರ್ಷಗಳ ಹಿಂದೇ ಆಗಿದ್ದರೆ……

ಸಿ.ಟಿ. ರವಿಯಂಥವರು ರಾಷ್ಟ್ರಮಟ್ಟದಲ್ಲಿ ಕನ್ನಡಿಗರ ಮಾನ ಕಳೆಯುವಂತೆ ಆಗುತ್ತಿರಲಿಲ್ಲ.

ಈಗ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಬಿ.ಜೆ.ಪಿ. ರಾಜ್ಯ ಕಾರ್ಯಕಾರಿ ಸಮೀತಿ ಸದಸ್ಯ ಕೆ.ಜಿ. ನಾಯ್ಕ ಸೇರಿದಂತೆ ಅವರ ಬಣದ ಕೆಲವರನ್ನು ಉಚ್ಛಾಟಿಸುವಂತೆ ಪಕ್ಷದ ಜಿಲ್ಲಾ ಘಟಕಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಾ ಮಂಡಳಗಳ ಮೂಲಕ ದೂರು ನೀಡಿದ್ದಾರೆ.

ಕುಮಟಾದಲ್ಲಿ ಪಕ್ಷದ್ರೋಹಿಗಳನ್ನು ಉಚ್ಛಾಟಿಸುವಂತೆ ಮತದಾನದ ಮೊದಲೇ ತಲೆಮರೆಸಿಕೊಂಡ ಕುಮಟಾ ಕ್ಷೇತ್ರದ ಆಮದು ಅಭ್ಯರ್ಥಿ ನಿವೇದಿತ್‌ ಆಳ್ವ ದೂರು ನೀಡಿದ್ದಾರೆ.

ಇದೇ ಸ್ಥಿತಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ,ಯಲ್ಲಾಪುರ, ಕಾರವಾರ ಸೇರಿದಂತೆ ಕನಿಷ್ಟ ೫೦ ಕ್ಷೇತ್ರಗಳಲ್ಲಿದೆ.

ಕಾಂಗ್ರೆಸ್‌ ನ ಗೆಲುವು ಕೊಟ್ಟ ಹೊಡೆತದಿಂದ ಚೇತರಿಸಿಕೊಳ್ಳಲು ಸಾಧ್ಯವಿಲ್ಲದ ಬಿ.ಜೆ.ಪಿ., ಜೆ.ಡಿ.ಎಸ್.‌ ಗಳು ರಾಜ್ಯದಲ್ಲಿ ಅನ್ಯರನ್ನು ಟೀಕಿಸುವ ನೈತಿಕತೆ, ಯೋಗ್ಯತೆ ಕಳೆದುಕೊಂಡಿವೆ. ಕರ್ನಾಟಕ ಕೊಟ್ಟ ಈ ಮೆಸೆಜ್‌ (ಸಂದೇಶ) ಭಾರತದ ಇತರ ಭಾಗಗಳ ಜನರು, ವಿಶೇಶವಾಗಿ ಉತ್ತರ ಭಾರತೀಯರಿಗೆ ಅರ್ಥವಾದರೆ ಶ್ರೀಮಂತ ಅದಾನಿ.ಅಂಬಾನಿಗಳ ಸೇವೆಯ ಜೊತೆಗೆ ಶ್ರೀಮಂತ ಮೇಲ್ವರ್ಗವೇ ಭಾರತ ಎಂದುಕೊಂಡಿರುವ ಮತಾಂಧ ಬಿ.ಜೆ.ಪಿ. ಆರೆಸ್ಸೆಸ್‌ ಗಳ ಭ್ರಮೆ ಕಳಚಿ ಮತಾಂಧ ಸೋಗಲಾಡಿ ಹಗಲುದರೋಡೆಕೋರ ಸಂಘಿಗಳಿಂದ ಭಾರತಮಾತೆಯನ್ನು ಪಾರು ಮಾಡಬಹುದು.

ಕಾಂಗ್ರೆಸ್‌ ಗ್ಯಾರಂಟಿಗಳ ಜೊತೆಗೆ ಜನಸಾಮಾನ್ಯ ಬಹುಜನರನ್ನು ಬಲಗೊಳಿಸುವತ್ತ ಕೂಡಾ ಕಾರ್ಯಪ್ರವ್ರತ್ತವಾಗಲು ಇದೇ ಸಕಾಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *