ಮೊದಲ ಸಭೆಗೆಬಂದ ಅಭಿಮಾನಿಗಳ ನಡುವೆ ಭೀಮಣ್ಣರಿಗೆ ನೆರವಾದ ದೇವರಾಜ್!

ಕನಕದಾಸ ಗಲ್ಲಿ, ಅಮೀನಾ ಸರ್ಕಲ್‌ ಗಳಲ್ಲಿ ರಸ್ತೆ ಬಂದ್‌ ಮಾಡಲಾಗಿದೆ….

ಹಾಳದಕಟ್ಟಾದಲ್ಲಿ ಕುಡಿಯುವ ನೀರಿಲ್ಲ ಪ.ಪಂ. ನನಗೆ ಒಂದು ಕೊಡ ನೀರೂ ಕೊಟ್ಟಿಲ್ಲ.

ಹೆಸ್ಕಾಂ ಲೈನ್‌ ಗೆ ತಾಕುವ ಗಿಡ ಕತ್ತರಿಸಿಲ್ಲ, ಬಹಳಷ್ಟು ಪಂಚಾಯತ್‌ ಗಳ ವ್ಯಾಪ್ತಿಯಲ್ಲಿ ನೀರಿನ ವ್ಯವಸ್ಥೆ ಇಲ್ಲ.

ತಾಲೂಕಾ ಪಂಚಾಯತ್‌ ಇ.ಓ.ಕಾರ್ಯನಿರ್ವಹಣೆ ಸರಿ ಇಲ್ಲ……

ಹೀಗೆ ಸಭಿಕರಿಂದ ಅಹವಾಲುಗಳ ಸರಪಳಿ ಹರಿದು ಬಂದಿದ್ದು ಯಾವುದೇ ಜನಸ್ಫಂದನ ಕಾರ್ಯಕ್ರಮದಲ್ಲಲ್ಲ ಬದಲಾಗಿ ನೂತನ ಶಾಸಕ ಭೀಮಣ್ಣ ನಾಯ್ಕರ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆಯ ಮೊದಲ ಸಭೆಯಲ್ಲಿ.!

ಸಿದ್ದಾಪುರ ತಹಸಿಲ್ಧಾರ ಕಛೇರಿಯ ಸಭಾಭವನದಲ್ಲಿ ನೂತನ ಶಾಸಕ ಭೀಮಣ್ಣ ನಾಯ್ಕರ ಅಧ್ಯಕ್ಷತೆಯಲ್ಲಿ ಮೊಟ್ಟ ಮೊದಲ ಪ್ರಗತಿಪರಿಶೀಲನಾ ಸಭೆ ನಡೆಯಿತು.

ನಿಯಮ, ರಿವಾಜುಗಳಂತೆ ತಾಲೂಕಿನ ಬಹುತೇಕ ಎಲ್ಲಾ ಹಿರಿಯ ಅಧಿಕಾರಿಗಳು ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾಜರಿದ್ದರು.

ನೂತನ ಶಾಸಕ ಭೀಮಣ್ಣ ನಾಯ್ಕರನ್ನು ಅಭಿನಂದಿಸಲು ಬಂದಿದ್ದ ತಾಲೂಕಿನ ಕಾಂಗ್ರೆಸ್‌ ಕಾರ್ಯಕರ್ತರ ದಂಡು ಶಾಸಕರೊಟ್ಟಿಗೆ ಪ್ರಗತಿಪರಿಶೀಲನಾ ಸಭೆಗೂ ದಾಂಗುಡಿ ಇಟ್ಟಿತ್ತು. ತಮ್ಮ ನೆಚ್ಚಿನ ಶಾಸಕರು ಹೇಗೆ ಸಭೆ ನಡೆಸುತ್ತಾರೆ ಎನ್ನುವ ಕುತೂಹಲದಿಂದ ಬಂದಿದ್ದರೋ!?

ಅಥವಾ ಕಾಂಗ್ರೆಸ್‌ ಪಕ್ಷದ ಲಾಗಾಯ್ತಿನ ನಡವಳಿಕೆಯಂತೆ ನೂತನ ಶಾಸಕರ ಕಾಂಗ್ರೆಸ್‌ ಕಾರ್ಯಕರ್ತರ ಪಡೆ ಸಭೆಗೆ ಆಗಮಿಸಿತ್ತೋ? ಒಟ್ಟೂ ಈ ಪ್ರಗತಿಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳೊಂದಿಗಿನ ಶಾಸಕರ ಚರ್ಚೆ ಬದಲಾಗಿ ಕಾರ್ಯಕರ್ತರ ಅಹವಾಲು ಸ್ವೀಕಾರ ಸಭೆಯಂತೆ ಈ ಸಂದರ್ಭ ಭಾಸವಾಯಿತು.

ಶಾಸಕರ ಸಭೆ ಸಮನ್ವಯ ಮಾಡುತಿದ್ದ ಸಹಾಯಕ ಕಮೀಷನರ್‌ ದೇವರಾಜ್‌ ಆರ್.ವಿವಿಧ ಇಲಾಖೆಗಳ ಅಧಿಕಾರಿಗಳಿಂದ ವರದಿ ಕೇಳುತಿದ್ದರೆ… ಕಾರ್ಯಕರ್ತರು, ಮುಖಂಡರು ತಮ್ಮ ಕುಂದು-ಕೊರತೆ, ಸಮಸ್ಯೆಗಳನ್ನು ಕೇಳಲು ಶುರು ಹಚ್ಚಿಕೊಂಡರು.

ಈ ಸಂದರ್ಭವನ್ನು ಜಾಣತನದಿಂದ ನಿಭಾಯಿಸಿದ ಎ.ಸಿ. ದೇವರಾಜ್‌ ಶಾಸಕರ ಅಭಿಮಾನಿ ದೇವರುಗಳನ್ನು ನಿಯಂತ್ರಿಸಿ ಪ್ರಗತಿಪರಿಶೀಲನೆಯ ಸಮನ್ವಯ ನಡೆಸಿದರು.

ಪ.ಪಂ. ಸೇರಿದಂತೆ ತಾಲೂಕಿನ ನೀರಿನ ಸಮಸ್ಯೆಯ ಬಗ್ಗೆ ಎರಡು ದಿವಸದೊಳಗೆ ಸಂಪೂರ್ಣ ಮಾಹಿತಿ ನೀಡಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಸೇರಿದಂತೆ ವಿವಿಧ ಇಲಾಖೆಗಳಿಂದ ಆಗಬೇಕಾದ ಕೆಲಸಗಳನ್ನು ಶೀಘ್ರವಾಗಿ ಪೂರೈಸುವಂತೆ ಶಾಸಕ ಭೀಮಣ್ಣ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *