ಸ್ಕರ್ಟ್‌ ಬದಲು ಪ್ಯಾಂಟ್‌ ಅಥವಾ ಚೂಡಿ ವಿದ್ಯಾರ್ಥಿನಿಯರಿಗೆ ಶೇಫ್!

ಸ್ಕರ್ಟ್‌ ಬದಲಿಗೆ, ಕರ್ನಾಟಕದ ವಿದ್ಯಾರ್ಥಿಗಳಿಗೆ ಸಮವಸ್ತ್ರವಾಗಿ ಚೂಡಿದಾರ್ ಅಥವಾ ಪ್ಯಾಂಟ್ಸ್ ಗೆ KSCPCR ಶಿಫಾರಸು!

ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್‌ನಿಂದ ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ.

ಬೆಂಗಳೂರು: ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್‌ನಿಂದ ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ.

ಕಲಬುರಗಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸ್ಕರ್ಟ್ ಧರಿಸುವ ಹುಡುಗಿಯರು ಎದುರಿಸುತ್ತಿರುವ ಅನಾನುಕೂಲತೆಗಳ ಕುರಿತು ಆಯೋಗಕ್ಕೆ ಪತ್ರ ಬರೆದ ನಂತರ ಶಿಫಾರಸು ಮಾಡಲಾಗಿದೆ.

ಮೇ 15ರಂದು ಬರೆದ ಪತ್ರದಲ್ಲಿ ಹುಡುಗಿಯರು ನಾಚಿಕೆ ಸ್ವಭಾವದರಾಗಿದ್ದು ಪ್ರಯಾಣಿಸುವಾಗ, ಜನನಿಬಿಡ ಪ್ರದೇಶಗಳಲ್ಲಿ ತಿರುಗಾಡುವಾಗ, ಸೈಕ್ಲಿಂಗ್ ಅಥವಾ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಸ್ಕರ್ಟ್ ಧರಿಸುವುದು ಒಂದು ಅಡಚಣೆಯಾಗಿದೆ. ಇನ್ನು ಪತ್ರದಲ್ಲಿ ಲೈಂಗಿಕ ಕಿರುಕುಳದ ವರದಿಗಳಿವೆ ಎಂದು ಸೇರಿಸಲಾಗಿದೆ. ಹುಡುಗಿಯರು ಸಾಮಾನ್ಯವಾಗಿ ಸ್ಕರ್ಟ್‌ಗಳನ್ನು ಧರಿಸುವುದರಿಂದ ಮುಜುಗರ ವ್ಯಕ್ತಪಡಿಸುತ್ತಾರೆ ಎಂದು ಉಲ್ಲೇಖಿಸಿ, ಅವರ ಸಮವಸ್ತ್ರವನ್ನು ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಸೂಚಿಸಿದೆ.

ಮೇ 17ರಂದು ಕೆಎಸ್‌ಪಿಸಿಆರ್‌ಸಿ ಅಧ್ಯಕ್ಷರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯ ಈ ಶಿಫಾರಸನ್ನು ಎತ್ತಿ ತೋರಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯವೂ ವ್ಯಕ್ತವಾಗಿದ್ದು, ಇಲಾಖೆ ನಿಯಮಾನುಸಾರ ಸಮವಸ್ತ್ರ ವಿನ್ಯಾಸ ಬದಲಾವಣೆಗೆ ಅವಕಾಶವಿದ್ದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಹಾಗೂ ಅವರ ಸುರಕ್ಷತೆಗೆ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಇದು ನಾವು ಮಾಡಿರುವ ಶಿಫಾರಸ್ಸು, ಇದನ್ನು ಶಿಕ್ಷಣ ಇಲಾಖೆಯೇ ನಿರ್ಧರಿಸಬೇಕು. ಅಧಿಕಾರಿಗಳಿಂದ ಶಿಫಾರಸ್ಸುಗಳು ಬಂದಿರುವುದು ಮಾತ್ರವಲ್ಲ, ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳೊಂದಿಗೆ ಸಂವಾದ ನಡೆಸಿದ್ದೇವೆ. ಆಟವಾಡುವಾಗ ಸ್ಕರ್ಟ್ ಧರಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಶಾಲೆಗೆ ಸೈಕಲ್ ನಲ್ಲಿ ಹೋಗುವಾಗ ಸಮವಸ್ತ್ರ-ಚೂರಿದಾರ್ ಅಥವಾ ಪ್ಯಾಂಟ್-ಬದಲಾವಣೆಯು ಅವರ ಮನಸ್ಸಿನಿಂದ ಈ ಚಿಂತೆಯನ್ನು ದೂರ ಮಾಡುತ್ತದೆ ಎಂದು ಕೆಎಸ್‌ಪಿಸಿಆರ್‌ಸಿ ಅಧ್ಯಕ್ಷ ಕೆ ನಾಗಣ್ಣ ಗೌಡ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *