ಚೇತನ್‌ ವಿರುದ್ಧ ಶ್ರೀಧರ ವಿವಾದದ ಅಗ್ನಿ ಪ್ರಜ್ವಲ!

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!

ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.

Chetan kumar

ಬೆಂಗಳೂರು: ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.

https://imasdk.googleapis.com/js/core/bridge3.578.0_en.html#goog_518500679

ನಟ ಚೇತನ್ ಕುಮಾರ್ ಭಾನುವಾರ ಅಗ್ನಿ ಶ್ರೀಧರ್ ಹೇಳಿಕೆಯನ್ನು ಖಂಡಿಸಿದ್ದಾರೆ. ‘ಪ್ರತಿ ಊರಿಲ್ಲಿ ದ್ರಾವಿಡ ಪಡೆ ಆರಂಭಿಸಿ; ಬಜರಂಗದಳದ ಕಾರ್ಯಕರ್ತರನ್ನು ಬದಲಿಸಿ, ಇಲ್ಲವೇ ಬಾರಿಸಿ’ ಎಂದು ‘ಅಗ್ನಿ’ ಶ್ರೀಧರ್ ಹೇಳುತ್ತಾರೆ. ಶ್ರೀಧರ್ ಅವರು ನನಗೆ ಚಲನಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಆದರೆ, ಹಿಂಸಾಚಾರಕ್ಕೆ ಅವರ ಈ ಪ್ರಚೋದನೆಯನ್ನು ನಾನು ಬಲವಾಗಿ ವಿರೋಧಿಸುತ್ತೇನೆ ಎಂದಿದ್ದಾರೆ. 

ಭೂಗತ ಲೋಕದ (ಮಾಜಿ) ಡಾನ್‌ನಿಂದ ನಾವು ಎಂದಾದರೂ ಸಾಮಾಜಿಕ ಸದಾಚಾರ ಅಥವಾ ಅಹಿಂಸೆಯನ್ನು ನಿರೀಕ್ಷಿಸಬಹುದೇ? ಎಂದು ಚೇತನ್ ಪ್ರಶ್ನಿಸಿದ್ದಾರೆ.

ನಟ ಚೇತನ್ ಕುಮಾರ್ ಅವರು ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. 

‘ಸ್ವಾತಂತ್ರ್ಯ ಹೋರಾಟಗಾರರ ಚಿಂತನೆಗಳನ್ನು ನಿಜವಾಗಿ ಅರ್ಥಮಾಡಿಕೊಳ್ಳಲು ಭಗತ್ ಸಿಂಗ್ ಅವರ ‘ನಾನೇಕೆ ನಾಸ್ತಿಕ’ ಓದಲು ಪ್ರಿಯಾಂಕ್ ಖರ್ಗೆ ಚಕ್ರವರ್ತಿ ಸೂಲಿಬೆಲೆಗೆ ಹೇಳಿದರು. ಆದರೆ, ಇತ್ತೀಚೆಗೆ ಪ್ರಿಯಾಂಕ್ ಖರ್ಗೆ ಅವರು ‘ದೇವರ’ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಇದು ವಿಪರ್ಯಾಸ. ಬಹುಶಃ ಖರ್ಗೆ ಅವರು ಕೂಡ ಭಗತ್ ಸಿಂಗ್ ಅವರ ಕೃತಿಯನ್ನೂ ಓದಬೇಕು. ಬಿಜೆಪಿ ಮತ್ತು ಕಾಂಗ್ರೆಸ್ ಪಠ್ಯಪುಸ್ತಕಗಳು (ಹ್ಯುಮಾನಟೀಸ್ & ಸೋಶಲ್ ಸೈನ್ಸಸ್) ದೋಷಪೂರಿತವಾಗಿವೆ ಎಂದು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಗ್ನಿ ಶ್ರೀಧರ್ ಅವರು ತಮ್ಮ ಪ್ರಗತಿಪರ ಚಿಂತನೆಗೆ ಹೆಸರುವಾಸಿಯಾಗಿದ್ದಾರೆ. ಕರ್ನಾಟಕದಲ್ಲಿ ಆರ್‌ಎಸ್‌ಎಸ್ ವಿರುದ್ಧ ಜಾಗೃತಿ ಮೂಡಿಸಲು ಚುನಾವಣೆಗೂ ಮುನ್ನ ರಾಷ್ಟ್ರೀಯ ದ್ರಾವಿಡ ಸಂಘ (ಆರ್‌ಡಿಎಸ್) ಅನ್ನು ಪ್ರಾರಂಭಿಸಿದರು. 

ಜೈನ ಸಮುದಾಯದ ಕೆಲವು ಗೋಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕವೇ ವಾರ್ಷಿಕ 40 ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದಾರೆ  ಈ ಹಿಂದೆ ಅಗ್ನಿ ಶ್ರೀಧರ್ ಹೇಳಿಕೆ ನೀಡಿದ್ದರು.

ಗೋಮಾಂಸ ರಫ್ತು ಉದ್ಯಮದಲ್ಲಿ ಈ ಹಿಂದೆ ಮುಸ್ಲಿಂ ಸಮುದಾಯವು ದೊಡ್ಡ ಪಾಲನ್ನು ಹೊಂದಿತ್ತು. ಮುಸ್ಲಿಂರನ್ನು ಈ ಉದ್ಯಮದಿಂದ ಹೊರಗಿಡಲು ಆರ್‌ಎಸ್ಎಸ್ ಮತ್ತು ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿತು. ಈ ಹುನ್ನಾರದ ಹಿಂದೆ ಜೈನ ಸಮುದಾಯವಿದೆ ಎಂದು ದೂರಿದ್ದರು.

‘ಶ್ರೀಮಂತ ಮುಸ್ಲಿಮರು ಗೋಮಾಂಸ ತಿನ್ನುವುದಿಲ್ಲ. ಆದರೆ, ಗೋಹತ್ಯೆಯ ವಿಚಾರ ಮುನ್ನೆಲೆಗೆ ಬಂದಾಗಲೆಲ್ಲಾ ಗೋಮಾಂಸವು ಮುಸ್ಲಿಂ ಸಮುದಾಯದ ಆಹಾರ ಎಂದು ಬಿಂಬಿಸಲಾಗುತ್ತಿದೆ. ಆದರೆ, ದಲಿತರು ಮತ್ತು ಕ್ರಿಶ್ಚಿಯನ್ನರು ಗೋಮಾಂಸವನ್ನು ಹೆಚ್ಚಾಗಿ ತಿನ್ನುತ್ತಾರೆ. ಅದರ ಬಗ್ಗೆ ಚರ್ಚೆಗಳು ನಡೆಯುತ್ತಿಲ್ಲ ಎಂದು ಅವರು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *