ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!

ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ!

ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

ishad mango

ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

https://imasdk.googleapis.com/js/core/bridge3.578.0_en.html#goog_2026330032

ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ ಮನ್ನಣೆಯೊಂದಿಗೆ ಇಶಾಡು ಮಾವು ಕೂಡ ತನ್ನ ಪ್ರಯಾಣವನ್ನು ಆರಂಭಿಸಿದೆ.

ಹುಳಿಯನ್ನು ತಿರಸ್ಕರಿಸಿ ಸಿಹಿಯ ತಿರುಳನ್ನಷ್ಟೇ ಕವಚದೊಳಗೆ ತುಂಬಿಕೊಂಡಿರುವ ಅಂಕೋಲಾ ಇಶಾಡು ಹಣ್ಣಿನ ಸವಿಯನ್ನು ತಿಂದೇ ಅನುಭವಿಸಬೇಕು. ಹಸಿರು–ಹಳದಿ ಮಿಶ್ರಿತ ಬಣ್ಣ ಹೊದ್ದುಕೊಂಡ ಈ ಹಣ್ಣುಗಳನ್ನು ಹಾಲಕ್ಕಿ ಮಹಿಳೆಯರು ಬಿದಿರು ಬುಟ್ಟಿಯಲ್ಲಿಟ್ಟು ಮಾರುತ್ತಾರೆ.

ಐಷಾರಾಮಿ ಕಾರುಗಳಲ್ಲಿ ಹೆದ್ದಾರಿಯಲ್ಲಿ ಹೋಗುವವರೂ ಇಶಾಡಿನ ಸುವಾಸನೆಗೆ ಮಾರುಹೋಗಿ, ಬ್ರೇಕ್ ಹಾಕಿ, ಇಡೀ ಬುಟ್ಟಿಯ ಹಣ್ಣನ್ನು ಖರೀದಿಸಿ ಕಾರಿನಲ್ಲಿ ತುಂಬಿಕೊಂಡು ಹೋಗುವುದೂ ಉಂಟು.

ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ವಿಶೇಷತೆಯನ್ನು ಈ ಹಣ್ಣು ಜಗತ್ತಿಗೆ ವಿಸ್ತರಿಸಲಿದೆ. ಮರಕ್ಕೆ ಮಾನ್ಯತೆ ದೊರೆತಿರುವುದರಿಂದ ಮರಗಳನ್ನು ನೋಡುವ ರೀತಿ ಬದಲಾಗಲಿದೆ. ನಿರ್ಮಾಣದ ನೆಪದಲ್ಲಿ ಬರಿದಾಗುತ್ತಿರುವ ಕರಾವಳಿಯನ್ನು ಪರಿಸರಸ್ನೇಹಿಯಾಗಿ ಕಾಣಲು ಇದೊಂದು ಒಳ್ಳೆಯ ಅಸ್ತ್ರ ಆಗಬೇಕಿದೆ.

ಹಣ್ಣನ್ನು ಈ ಹಿಂದೆ ಡಬ್ಬಿಯಲ್ಲಿಟ್ಟು ರಫ್ತು ಮಾಡಲಾಗಿತ್ತು. ಹಣ್ಣಿಗೆ ಜಿಐ ಟ್ಯಾಗ್ ಲಭ್ಯವಾಗಿರುವ ಹಿನ್ನೆಲೆಯಲ್ಲಿ ವೈಭವ ಮರುಕಳಿಸುವ ಭರವಸೆಗಳಿವೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸತೀಶ್ ಕುಮಾರ್ ಅವರು ಹೇಳಿದ್ದಾರೆ.

ಅಂಕೋಲಾದ ಮಾತಾ ತೋಟಗಾರ್ಸ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ (ಎಂಟಿಎಫ್‌ಪಿಸಿ) ಲಿಮಿಟೆಡ್ 2022ರ ಮಾರ್ಚ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿತ್ತು. ಚೆನ್ನೈನಲ್ಲಿರುವ ಜಿಯೋ ಇಂಡಿಕೇಟರ್ ಸ್ಪೆಸೀಸ್’ನ ನಿರ್ದೇಶಾನಲಯಕ್ಕೂ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿತ್ತು. ಅವರು ಮತ್ತಷ್ಟು ದಾಖಲೆಗಳ ನೀಡುವಂತೆ ಸೂಚಿಸಿದ್ದರು. ದಾಖಲೆಗಳ ನೀಡಿದ ಬಳಿಕ ಅಂತಿಮವಾಗಿ ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಎಂಟಿಎಫ್‌ಪಿಸಿ ನಿರ್ದೇಶಕ ಮಾಧವ ಇಂದ್ರಗೌಡ ಮಾತನಾಡಿ, ಕಳೆದ 400 ವರ್ಷಗಳಿಂದ ಈ ಮಾವಿನ ತಳಿಯನ್ನು ಬೆಳೆಯಲಾಗುತ್ತಿದೆ. ಇದೀಗ ಹಣ್ಣಿಗೆ ಜಿಐ ಟ್ಯಾಗ್ ದೊರೆತಿದ್ದು, 300 ರೈತರ ಸಂಘಟನೆಯಾದ ಎಂಟಿಎಫ್‌ಪಿಸಿ ಈ ಸಸಿಗಳನ್ನು ಪ್ರಚಾರ ಮಾಡಲು ಮತ್ತು ಈ ವಿಶೇಷ ಮಾವಿನ ಕೃಷಿಯನ್ನು ಪ್ರೋತ್ಸಾಹಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಏನಿದು ಜಿಯೋ ಟ್ಯಾಗ್?
ದೇಶದ ಉತ್ಪನ್ನಗಳಿಗೆ ಜಾಗತಿಕ ಮನ್ನಣೆ ನೀಡಿ, ಅದರ ಮೌಲ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಒಂದು ಭಾಗ ಈ ಪ್ರಮಾಣಪತ್ರವನ್ನು ನೀಡುತ್ತದೆ.

ಪ್ರಮಾಣಪತ್ರ ನೀಡುವುದಕ್ಕೂ ಪೂರ್ವದಲ್ಲಿ ಸಾಕಷ್ಟು ಹಿನ್ನೆಲೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಇದೂವರೆಗೆ ಕರ್ನಾಟಕದ ಕೆಲವೇ ಉತ್ಪನ್ನಗಳಿಗೆ ಮಾತ್ರ ಈ ಮಾನ್ಯತೆ ಲಭಿಸಿದೆ. ಶಿರಸಿಯ ಅಡಕೆಗೆ, ಸಾಗರದಲ್ಲಿ ಅಪ್ಪೆಮಿಡಿಗೆ ಜಿಯೋ ಟ್ಯಾಗಿಂಗ್ ಲಭ್ಯವಾಗಿದೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *