ನಟ ಸುದೀಪ್‌ & ಬ್ರಾಹ್ಮಣರ ವಿರುದ್ಧ ಮಾತನಾಡಿದರೆ…ರಾಜಣ್ಣ!

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ

ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

K N Rajanna

ದಾವಣಗೆರೆ: ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ರಾಜನಹಳ್ಳಿ‌ ವಾಲ್ಮೀಕಿ ಪೀಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾರನ್ನೂ ಮೇಲ್ವರ್ಗದವರೆಂದು ಕರೆಯಬಾರದು, ಹಾಗೆ ಕರೆದರೆ ನಾವು ಕೆಳವರ್ಗದವರು ಎಂದಾಗುತ್ತದೆ. ನಾವೇನು ಕೆಳವರ್ಗದವರಾ ಎಂಬಿತ್ಯಾದಿ ವ್ಯಾಖ್ಯಾನಗಳನ್ನು ಮಾಡಿದ ಅವರು ಈಗಿನ ಸಾಮಾಜಿಕ ಸ್ಥಿತಿಗತಿಗಳನ್ನು ವಿವರಿಸುತ್ತಾ ಮೇಲಿನ ಮಾತನ್ನು ಹೇಳಿದರು.

https://imasdk.googleapis.com/js/core/bridge3.578.0_en.html#goog_1395883958

ಬ್ರಾಹ್ಮಣರು ಈಗ ಹೋಮ ಹವನ ಕಡಿಮೆ ಮಾಡಿದ್ದಾರೆ. ಆದರೆ ನಾವೇ ಶೂದ್ರರೇ ಹೆಚ್ಚು ಹೋಮ, ಹವನ ಮಾಡುತ್ತಿದ್ದೇವೆ. . ಅವರು ಒಂದು ರೂಪಾಯಿ ಖರ್ಚು ಮಾಡಿ ಹೂವ, ಊದುಬತ್ತಿ ತರಲ್ಲ, ಬೇರೆಯವರು ತಂದಿದ್ದರಲ್ಲಿ ಪೂಜೆ ಮಾಡ್ತಾರೆ, ಹೀಗೆ ಹೇಳಿದರೆ ನಾನು ಬ್ರಾಹ್ಮಣರ ವಿರೋಧಿ ಅಂತ ಅಲ್ಲ, ಇದು ನಾನು ಹೇಳಿದ್ದಲ್ಲ ನನ್ನ ಸ್ನೇಹಿತರು ಹೇಳಿದ್ದು ಎಂದರು.

ನಾಯಕ ಸಮುದಾಯವರು ಈಗ ಡಿಸಿಎಂ ಆಗಬೇಕು ಮುಂದೆ ಸಿಎಂ ಆಗಬೇಕು. ನಾಯಕ ಸಮುದಾಯದಲ್ಲಿ ಸಿಎಂ ಆಗೋ ಅರ್ಹತೆ ಇರೋದು ಸತೀಶ್ ಜಾರಕಿಹೊಳಿಗೆ ಇದೆ. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯ ವ್ಯಕ್ತಿ ಸಿಎಂ ಆಗಬೇಕು ಎಂದು ರಾಜಣ್ಣ ಹೇಳಿದರು.

ಕಿಚ್ಚ ಸುದೀಪ್ ಅವರು ನನ್ನ ವಿರುದ್ಧವೇ ಭಾಷಣ ಮಾಡಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರೆ ಸುಮ್ಮನಾಗಬಹುದಿತ್ತು, ಆದರೆ ಪರಿಶಿಷ್ಠ ಪಂಗಡಕ್ಕೆ ಮೀಸಲಾದ ಕ್ಷೇತ್ರದಲ್ಲಿಯೂ ಅವರು ಪ್ರಚಾರ ಮಾಡಿದ್ದು ನೋವಾಗಿದೆ. ಒಂದೇ ಸಮುದಾಯದ ಇಬ್ಬರು ಸ್ಪರ್ಧೆ ಮಾಡಿದಾಗ ಒಬ್ಬರ ಪರವಾಗಿ ನಿಂತು ಪ್ರಚಾರ ಮಾಡಿದರು. ಇದರಿಂದ ನಮಗೆಲ್ಲಾ ಬೇಸರವಾಗಿದೆ” ಎಂದರು.

ಕೆಎನ್ ರಾಜಣ್ಣ ಮತ್ತು ಸುದೀಪ್ ಒಂದೇ ಸಮುದಾಯದವಾಗಿದ್ದು, ತಮ್ಮ ಕ್ಷೇತ್ರದಲ್ಲಿ ತಮ್ಮ ವಿರುದ್ಧವೇ ಸುದೀಪ್ ಪ್ರಚಾರ ಮಾಡಿದ್ದು ಸಚಿವ ಕೆ.ಎನ್. ರಾಜಣ್ಣ ಅವರ ಬೇಸರಕ್ಕೆ ಕಾರಣವಾಗಿದೆ. “ಇಬ್ಬರೂ ಅಭ್ಯರ್ಥಿಗಳು ಒಂದೇ ಸಮುದಾಯದವರು ಸ್ಪರ್ಧೆ ಮಾಡಿದಾಗ, ನಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದಕ್ಕೆ ಬೇಸರವಾಗಿದೆ. ಇನ್ನು ಮುಂದೆ ಅರ್ಥ ಮಾಡಿಕೊಂಡು ಮುಂದುವರೆಯಲಿ” ಎಂದು ಸಲಹೆ ನೀಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *