ದೇವಿಮನೆ ಘಟ್ಟದಲ್ಲಿ ದೊರೆತ ಅಪರಿಚಿತ ಶವದ ಹಿಂದೆ ದೊಡ್ಡ ಕೊಲೆ ಕತೆ! ಒಟ್ಟೂ ೫ ಜನ ಆರೆಸ್ಟ್‌!!

ಈ ವಾರದ ಪ್ರಾರಂಭದಲ್ಲಿ ಕುಮಟಾ ದೇವಿಮನೆ ಘಟ್ಟದ ಬಳಿ ಪತ್ತೆಯಾಗಿದ್ದ ಅಪರಿಚಿತ ಮಹಿಳಾ ಶವ ಯಲ್ಲವ್ವ ಯಾನೆ ತನುಜಾ ದೊಡ್ಮನಿ ಎಂದು ಖಾತ್ರಿಯಾಗಿದ್ದು ಇದೊಂದು ಕೊಲೆ ಪ್ರಕರಣ ಎನ್ನುವುದನ್ನು ಕುಮಟಾ ಪೊಲೀಸರು ಪತ್ತೆ ಮಾಡಿದ್ದಾರೆ.

೨೬ ವರ್ಷದ ಶಿಗ್ಗಾಂವ ನ ತನುಜಾ ಶವ ದೇವಿಮನೆ ಘಟ್ಟದ ಬಳಿ ಪತ್ತೆಯಾಗುತ್ತಲೇ ಪೊಲೀಸರು ಸಾರ್ವಜನಿಕ ಪ್ರಕಟಣೆ ನೀಡಿದ್ದರು. ಈ ಘಟನೆಯನ್ನು ಕೆದಕುತ್ತಾ ಹೋದ ಉತ್ತರ ಕನ್ನಡ ಪೊಲೀಸರಿಗೆ ಈ ಶವದ ಹಿಂದೆ ಇರುವ ಸಂಘಟಿತ ಕೊಲೆಯ ರಹಸ್ಯ ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ಉತ್ತರ ಕನ್ನಡ ಮತ್ತು ಗದಗದ ತಲಾ ಒಬ್ಬರು ಹಾಗೂ ಶಿಗ್ಗಾಂವನ ಮೂವರನ್ನು ಬಂಧಿಸಲಾಗಿದೆ. ಗದಗದ ಒಬ್ಬ ವ್ಯಕ್ತಿ ಮತ್ತು ಮುಂಡಗೋಡಿನ ಇಂದೂರಿನ ಒಬ್ಬ ವ್ಯಕ್ತಿ ಈ ಕೊಲೆಗೆ ಸಹಕರಿಸಿದ ಬಗ್ಗೆ ಆರೋಪ ಮಾಡಲಾಗಿದ್ದು ಇಂದೂರಿನ ಅಮಿತ್‌ ಗೋಖಲೆ ಎನ್ನುವ ವ್ಯಕ್ತಿ ಮಹಿಳೆಯ ಶವ ಸಾಗಿಸಲು ಇತರ ಆರೋಪಿಗಳಿಗೆ ಸಹಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಶವ- ಸಾಗಾಟ, ಕೊಲೆ ಷಡ್ಯಂತ್ರಕ್ಕೆ ಬಳಸಿದ ಕ್ರೂಸರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಲ್ಲವ್ವ ಯಾನೆ ತನುಜಾ ಎನ್ನುವ ವಿವಾಹಿತ ಮಹಿಳೆಗೆ ಇಬ್ಬರು ಮಕ್ಕಳಿದ್ದು ಅವರ ಕುಟುಂಬಸ್ಥರೇ ವ್ಯೂಹ ರಚಿಸಿ ಊಟದಲ್ಲಿ ನಿದ್ರೆಗುಳಿಗೆ ಹಾಕಿ ನಂತರ ಕೊಲೆ ಮಾಡಿ ಅನ್ಯರ ನೆರವು ಪಡೆದು ಶವವನ್ನು ಕುಮಟಾ ಪೊಲೀಸ್‌ ಠಾಣಾ ವ್ಯಾಪ್ತಿಯ ದೇವಿಮನೆ ಘಟ್ಟದ ಬಳಿ ಎಸೆದು ಪರಾರಿಯಾಗಿದ್ದರು. ಈ ಕೊಲೆ ಪ್ರಕರಣದ ಬಾಧಿತರಾದ ಲೋಹಿತ್‌ ದೊಡ್ಮನಿಯ ಮನೆಯವರೇ ಈ ಕೊಲೆ ಆರೋಪಿಗಳಾಗಿದ್ದು ಗಂಡ ಮತ್ತು ಮಕ್ಕಳಿಗೆ ತಿಳಿಯದಂತೆ ಗುಪ್ತವಾಗಿ ಈ ಕೊಲೆ ಷಡ್ಯಂತ್ರ ಮಾಡಿರುವ ಹಿನ್ನೆಲೆಯಲ್ಲಿ ಲೋಹಿತ್‌ ನ ಅಮ್ಮ, ಚಿಕ್ಕಮ್ಮ ಮತ್ತು ಅಣ್ಣನನ್ನು ಬಂಧಿಸಲಾಗಿದೆ. ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುತ್ತಾಳೆ ಎನ್ನುವ ಶೀಲ ಸಂಬಂಧಿ ಆಕ್ಷೇಪದ ಹಿನ್ನೆಲೆಯಲ್ಲಿ ವ್ಯವಸ್ಥಿತವಾಗಿ ಈ ಕೊಲೆ ಮಾಡಲಾಗಿದೆ ಎಂದು ತನಿಖೆಯಿಂದ ಧೃಢಪಟ್ಟಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *