ಇಂದು ವಿಠ್ಠಲ್‌ ಭಂಡಾರಿ ಜನ್ಮದಿನ… ವಿಠ್ಠಲ್‌ ಸ್ಮರಣೆ

ಕಡಕೇರಿಯಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ವಿಠ್ಠಲ್‌ ಜನ್ಮ ದಿನಾಚರಣೆ ನಿಮಿತ್ತದ ಪುಟ್ಟ ಕಾರ್ಯಕ್ರಮದಲ್ಲಿ ವಿಠ್ಠಲ್ ಸಂಗಾತಿ‌ ಯಮುನಾ ಜೊತೆ ಪಾಲ್ಗೊಂಡಿದ್ದೆ.ವಿಠ್ಠಲ್‌ ಭಂಡಾರಿ ಬದುಕಿದ್ದಾಗ ನಿಮ್ಮ ಜನ್ಮ ದಿನ ಎಂದರೆ ಅದರಷ್ಟಕ್ಕೆ ಅದು ಬಂದು ಹೋಗುತ್ತೆ ಬಿಡಿ ಎನ್ನುತಿದ್ದರೇನೋ?

ಸಿದ್ಧಾಪುರದಲ್ಲಿ ಪ್ರಗತಿಪರವಾದ, ಜಾತ್ಯಾತೀತವಾದ ಯಾವುದೇ ಕಾರ್ಯಕ್ರಮವಾದರೂ ಅವರು ಇರುತಿದ್ದರು. ವಿಠ್ಠಲ್‌ ಮತ್ತು ನಮ್ಮ ನಡುವೆ ಒಂದು ಅಲಿಖಿತ ಒಪ್ಪಂದವಿತ್ತು. ನಮ್ಮ ಸಮೂಹದ ಕಾರ್ಯಕ್ರಮಗಳಲ್ಲಿ ಅವರಿರಬೇಕು, ಅವರ ಕೆಲವು ಕಾರ್ಯಕ್ರಮಗಳಲ್ಲಿ ನಾವಿರಬೇಕು, ಸುಮಾರು ಹತ್ತು ವರ್ಷಗಳ ಹಿಂದಿನ ಕತೆ ಆಗಷ್ಟೇ ಎಷ್ಟೋ ವರ್ಷಗಳ ನಂತರ ನಮ್ಮೂರಿಗೆ ಮರಳಿದ್ದ ನನಗೆ ಜೊತೆಗೆ ಆಪ್ತ-ಆತ್ಮೀಯನೆನಿಸಿ ಭಾಸ್ಕರ್‌,ನರೇಂದ್ರ ಇರುತಿದ್ದರು. ಭಂಡಾರಿ ಆಗಾಗ ಸಿಕ್ಕು ಮಿಂಚಂತೆ ಮಾಯವಾಗುವ ಸಖನಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳೂ ಸೇರಿ ಬಹುತೇಕ ನಮ್ಮ ಕಾರ್ಯಕ್ರಮಗಳಲ್ಲಿ ನಮಗೆ ಥಟ್ಟನೆ ಹೊಳೆಯುತಿದ್ದ ಹೆಸರುಗಳೇ ಡಾ. ವಿಠ್ಠಲ್‌ ಭಂಡಾರಿ,ಸುಬ್ರಾಯ ಮತ್ತೀಹಳ್ಳಿ ಉಳಿದಂತೆ ತಮ್ಮಣ್ಣ, ಎಂ.ಕೆ.ನಾಯ್ಕ, ರತ್ನಾಕರ ಸೇರಿದ ಕೆಲವು ಸರ್ಕಾರಿ ನೌಕರರು.‌

ಭಂಡಾರಿ ಮತ್ತು ಮತ್ತೀಹಳ್ಳಿ ಹೆಸರು ಬರೆದಿಟ್ಟು ಉಳಿದ ಹೆಸರುಗಳಿಗೆ ಹುಡುಕಾಡುತಿದ್ದ ಸಮಯದಲ್ಲಿ ನಾನ್‌ ಬರ್ತೆ ಬೇರೆ ಯಾರಾದ್ರೂ ಸಿಕ್ಕರೆ ಒಳ್ಳೆಯದು ಎನ್ನುತಿದ್ದ ಈ ಎರಡು ಹೆಸರುಗಳು ನಮ್ಮ ಆಹ್ವಾನಿತರ ಮೊದಲೆರಡು ಹೆಸರುಗಳಾಗಿರುತಿದ್ದವು. ಈಗಲೂ ಸುಬ್ರಾಯ ಮತ್ತೀಹಳ್ಳಿ ನಮಗೆ ಸಿಗುವ ಹಿರಿಯ ಮಿತ್ರ ಆದರೆ ವಿಠ್ಠಲ್‌ ಭಂಡಾರಿ ಹುಡುಕುವುದೆಲ್ಲಿ?

ಇಂಥ ಅನೇಕ ನೆನಪುಗಳು ನಮ್ಮ ನಡುವಿನ ವಿಠ್ಠಲ್‌ ರ ಅನುಪಸ್ಥಿತಿಯನ್ನು ಮತ್ತೆ ಮತ್ತೆ ನೆನಪಿಸುತ್ತವೆ.

ಗ್ರಹಣ, ವೈಜ್ಞಾನಿಕ, ವೈಚಾರಿಕ ವಿಷಯಗಳ ಚರ್ಚೆ, ಕಾರ್ಯಕ್ರಮ, ಚಟುವಟಿಕೆ ಏನಿದ್ದರೂ ವಿಠ್ಠಲ್‌ ರ ಕರೆ ತಪ್ಪದೇ ನಮಗೆ ಬರುತಿತ್ತು. ಹಲವು ಕೆಲಸ, ಕೆಲವು ಮಿತಿಗಳ ನಡುವೆ ಸದಾ ಪಾದರಸದಂತೆ ಕ್ರೀಯಾಶೀಲವಾಗಿರುತಿದ್ದ ವಿಠ್ಠಲ್‌ ಕಲಿಯುವುದು, ಕಲಿಸುವುದರಲ್ಲಿ ನಿಸ್ಸೀಮ, ಓದು, ಸಂಘಟನೆ, ಸಂಶೋಧನೆಗಳ ನಡುವೆ ಪ್ರವಾಸ, ವಿಹಾರ ಸಂಘಟನೆಯ ಕೆಲಸಕ್ಕಾಗಿ ಅಲೆಯುವ ವಿಠ್ಠಲ್‌ ಸಲಹೆ ಕೊಡುವಾಗ ಕೂಡಾ ಹೀಗಾದರೆ, ಹೀಗಿದ್ದರೆ ಉತ್ತಮ ಎನ್ನುವ ಸಲಹೆ ಕೊಡುತಿದ್ದರೇ ವಿನ: ಇದೇ ಎಂದು ಯಾರೊಂದಿಗೂ ಹಠಕ್ಕೆ ಬೀಳುತ್ತಿರಲಿಲ್ಲ.

ಸಂಪಾದನೆ ಆಸೆಗಾಗಿ ಏನನ್ನೂ ಮಾಡದ ವಿಠ್ಠಲ್‌ ಸಿದ್ಧಾಂತ, ಬದ್ಧತೆಗಾಗಿ ಸದಾ, ಮಿಡಿಯುತಿದ್ದ ಜೀವ. ಒಮ್ಮೆ ಒಂದು ದೊಡ್ಡ ಕಾರ್ಯಕ್ರಮಕ್ಕೆ ವಿಶೇಶ ಅತಿಥಿಯನ್ನಾಗಿ ಕರೆದಿದ್ದಾಗ ಗೌರವಧನವೆಂದು ಎರಡೂವರೆ ಸಾವಿರ ರೂಪಾಯಿ ಕವರ್‌ ನಲ್ಲಿ ಇಟ್ಟು ಕೊಟ್ಟಿದ್ದೆವು.

ಮನೆಗೆ ಹೋಗಿ ಪಟ್ಟಣ ತೆರೆದ ವಿಠ್ಠಲ್‌ ಮರಳಿ ಪೋನಾಯಿಸಿ ಇಷ್ಟು ದೊಡ್ಡ ಗೌರವ ಧನ ನಾನು ಈವರೆಗೆ ಪಡೆದೇ ಇಲ್ಲ, ನಿಮ್ಮ ಕವರ್‌ ಜೊತೆಗಿನ ಹಣವನ್ನು ಹಾಗೇ ಎತ್ತಿಟ್ಟಿದ್ದೇನಿ ಈಹಣವನ್ನು ನೀವು ಮಾಡುವ ಒಳ್ಳೆಯ ಕೆಲಸಕ್ಕೆ ಬಳಸಿ ಎಂದು ನಮ್ಮನ್ನು ದಂಗು ಬಡಿಸಿದ್ದರು. ಇಂಥ ಅನೇಕ ನೆನಪುಗಳನ್ನು ಬಿಟ್ಟು ಹೋದ ಹಿರಿಯ ಸಂಗಾತಿ ವಿಠ್ಠಲ್‌ ಈಗಿದ್ದರೂ ಅಷ್ಟೇ ಚುರುಕಾಗಿ ಮುಂದುವರಿಯುತಿದ್ದರು. ಸಂವಿಧಾನದ ಓದುಕಾರ್ಯಕ್ರಮ, ಪುಸ್ತಕ ಪ್ರಕಟಣೆ,ತಿಂಗಳ ಚಿತ್ರ, ಸಹಯಾನ,ಪ್ರೀತಿಪದಗಳ ಪಯಣ, ಬರವಣಿಗೆ, ಭಾಷಣ ಹೀಗೆ ಎಲ್ಲವನ್ನೂ ತನ್ನ ಕರ್ತವ್ಯ ಎನ್ನುವಷ್ಟು ಪ್ರಾಮಾಣಿಕವಾಗಿ ನಿಭಾಯಿಸುತಿದ್ದ ವಿಠ್ಠಲ್‌ ಉತ್ತರ ಕನ್ನಡ ರಾಜ್ಯಕ್ಕೆ ಮಾಣಿಕ್ಯವಾಗಿದ್ದವರು ಈಗ ಅವರಿಲ್ಲ ಎನ್ನುವುದು ನಾವೆಲ್ಲಾ ಅರಗಿಸಿಕೊಳ್ಳಲು ಕಷ್ಟದ ಕೆಲಸ. – ಕನ್ನೇಶ್.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *