ಮಾವಿನಗುಂಡಿ ಪ್ರಕರಣ- ಅಮಾಯಕರ ತಲೆದಂಡ!

ರಾಜಕೀಯ ಸಮಯಸಾಧಕರಾದ ಗೋಪ್ರೇಮಿಗಳ ಹಫ್ತಾ ವಸೂಲಿಗೆ ಲಾಭ ತರುವ ಏಕೈಕ ಉದ್ದೇಶದಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯಿದೆಗಳನ್ನು ಕಸದ ಬುಟ್ಟಿಗೆ ಎಸೆಯಲು ಹೊಸ ಸರ್ಕಾರ ತೀರ್ಮಾನ ಕೈಗೊಂಡಿದೆ.

ಈ ತೀರ್ಮಾನದ ನಂತರ ಸರ್ಕಾರದ ವಿರುದ್ಧ ಸಾರ್ವಜನಿಕರನ್ನು ಉತ್ತೇಜಿಸುವ ಸಂಘಿ ನಾಟಕ ತೆರೆಮರೆಯಲ್ಲಿ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಹಫ್ತಾ ವಸೂಲಿಯ ರುಚಿ ಕಂಡಿರುವ ಸಂಘಿದಳವೊಂದು ಹಿಂದಿನ ಸರ್ಕಾರದ ಅವಧಿಯಲ್ಲಿ ಜಾನುವಾರು ಸಾಗಾಟಕ್ಕೆ ಬೆಲೆ ನಿಗದಿಪಡಿಸಿಕೊಂಡಿತ್ತಂತೆ! ಹೀಗೆ ಹಫ್ತಾ ನೀಡದ ರೈತರು, ಜಾನುವಾರು ವ್ಯಾಪಾರಿಗಳಿಗೆ ತೊಂದರೆ ಮಾಡುವ ಲಾಭದ ವ್ಯವಹಾರ ನಡೆಸುವ ಮತಾಂಧ ಸಂಘಿಗಳು ಈಗ ಕೆಲಸವಿಲ್ಲದ ಮಂಗಗಳಾದಂತಾಗಿದ್ದಾರೆ. ಇದೇ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಭಜರಂಗಿ ಪ್ರಹಸನ ಶುರುವಾಗಿದೆ.

ಇಂಥ ಸಂಘಿ ಕುತಂತ್ರಗಳ ಫಲವಾಗಿ ಕಳೆದ ವಾರ ಸಿದ್ಧಾಪುರ ಪೊಲೀಸರು ಮೂರು ಜನರನ್ನು ಜಾನುವಾರು ಸಾಗಾಟದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ಈ ಬಂಧಿತ ಆರೋಪಿಗಳಲ್ಲಿ ಒಬ್ಬ ಬಕ್ರೀದ್‌ ಮತ್ತು ಹೆಂಡತಿ ತುಂಬು ಗರ್ಭಿಣಿ ಎನ್ನುವ ಕಾರಣಕ್ಕೆ ಪರಾರಿಯಾಗಿದ್ದ. ಈ ಪರಾರಿ ನಂತರ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಅದೇ ದಿನ ಬಂಧಿಸಿದ್ದಾರೆ. ಈ ಪ್ರಕರಣ ಇಷ್ಟಕ್ಕೇ ಮುಗಿದು ಹೋಗಿದ್ದರೆ ಯಾವ ಸುದ್ದಿ-ವಿಶ್ಲೇಷಣೆಗಳಾಗುತ್ತಿರಲಿಲ್ಲ.

ದುರಂತವೆಂದರೆ… ಈ ಪ್ರಕರಣದ ನಂತರ ಪರಾರಿ ವೇಳೆ ಕರ್ತವ್ಯದಲ್ಲಿದ್ದ ಮೂರು ಜನ ಪೊಲೀಸರನ್ನು ಅಮಾನತ್ತು ಮಾಡಲಾಯಿತು. ಮೂರು ಜನ ಪೊಲೀಸರ ಅಮಾನತ್ತಿಗೆ ಕಾರಣ ಕರ್ತವ್ಯನಿರ್ಲಕ್ಷ!

ವಿರೇಶ್‌ ಚಲವಾದಿ,ಉದಯ ಮೇಸ್ತ,ಪ್ರಸನ್ನಕುಮಾರ್‌ ಎಂಬ ಮೂರು ಜನ ಪೊಲೀಸರನ್ನು ಅಮಾನತ್ತು ಮಾಡುತ್ತಲೇ ಪ್ರಕರಣದ ವಿಚಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಬಳಿ ಹೋಗಿದೆ. ನಿರೀಕ್ಷೆಯಂತೆ ಈ ಪ್ರಕರಣ ಹಿರಿಯ ಪೊಲೀಸ್‌ ಅಧಿಕಾರಿಗಳ ತಲೆಬಿಸಿಗೆ ಕಾರಣವಾಗಿದೆ. ಈ ಪ್ರಕರಣದ ದುಷ್ಪರಿಣಾಮ ಎನ್ನುವಂತೆ ಹಿರಿಯ ಅಧಿಕಾರಿಗಳು ಆದ ಲೋಪಕ್ಕೆ ಸಾಮಾನ್ಯ ಪೇದೆಗಳ ಮೇಲೇಕೆ ಬ್ರಹ್ಮಾಸ್ತ್ರ ಎಂದು ಪ್ರಶ್ನಿಸಿ ಪಿ.ಎಸ್.ಐ. ತಲೆ ದಂಡ ಕೇಳಿದ್ದಾರೆ. ಹೀಗೆ ಸಂಘಿ ಕಳ್ಳ ದಳದವರಿಂದ ಪ್ರಾರಂಭವಾದ ಬೆಂಕಿಯ ಜ್ವಾಲೆ ಅಮಾಯಕ ಪೊಲೀಸರನ್ನು ಬಲಿ ಪಡೆದಿದೆ.

ಈ ಪ್ರಕರಣದಲ್ಲಿ ಬಾಧಿತರಾದವರೆಲ್ಲ ಬಹುತೇಕ ದಲಿತರು ಎನ್ನುವುದು ವಾಸ್ತವ. ಧರ್ಮ, ದೇವರು,ಗೋಪ್ರೇಮದ ಹೆಸರಿನ ಸಮಯಸಾಧಕ ಸಂಘಿಗಳ ಉದ್ದೇಶ ಅಂತಿಮವಾಗಿ ದಲಿತರು, ಹಿಂದುಳಿದವರು. ಈ ಸಂಘಿ ಕಾರ್ಯಾಚರಣೆಯ ಬಲಿಪಶುಗಳು ಅಮಾಯಕರು. ಸಂಘಿಗಳ ರಾಜಕೀಯ ಕಪಟನಾಟಕದ ಬಲಿಪಶುಗಳು ಎಂದಿನಂತೆ ಈಗ ಕೂಡಾ ಅಮಾಯಕರೆ.

ಸಿದ್ಧಾಪುರ ಪೊಲೀಸರ ಮೇಲಿನ ಈ ಕ್ರಮ ಅರ್ಥವಾದರೆ ಶಿರಸಿ ಸಂಘಿ ನಾಟಕದ ಸೂತ್ರ ಅರ್ಥವಾಗುತ್ತದೆ. ಕವಿ ಬ್ರೆಕ್ಟ್‌ ಹೇಳಿದಂತೆ ಪಟ್ಟಬದ್ರರ ಹುಡುಗಾಟಕ್ಕೆ ಸಿಗುವವರು ಅಮಾಯಕರಾದರೆ ನ್ಯಾಯ ಸಿಗಲು ಸಾಧ್ಯವೆ?

ಸರಳ,ಸಂಭಾವಿತ ಮಾನತಪ್ಪ ಕುಂಬಾರ ಮತ್ತು ಅಮಾಯಕ ಪೊಲೀಸರಿಗೆ ನ್ಯಾಯ ಸಿಗುವಂತಾಗಲಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *