ಸಿದ್ಧಾಪುರದಲ್ಲಿ ನಡೆದ ಲಂಚಮರಳಿಸುವ ಪ್ರಹಸನಕ್ಕೆ ಸಾರ್ವಜನಿಕರ ಮೆಚ್ಚುಗೆ!

ಭೂಮಾಪನಾ ಇಲಾಖೆಯಲ್ಲಿ ವ್ಯಕ್ತಿಯೊಬ್ಬರಿಂದ ಪಡೆದಿದ್ದ ಲಂಚದ ಹಣವನ್ನು ಸಾರ್ವಜನಿಕರ ಎದುರು ಸಿಬ್ಬಂದಿಯೊಬ್ಬ ಮರಳಿಸಿದ ನಾಟಕೀಯ ಘಟನೆ ನಡೆದಿದೆ. ಈ ಘಟನೆ ನಡೆದಿದ್ದು ಸಿದ್ಧಾಪುರ ತಾಲೂಕಿನ ಆಡಳಿತ ಸೌಧದಲ್ಲಿ!

ವ್ಯಕ್ತಿಯೊಬ್ಬರ ಭೂಮಿ ಮಾಪನಕ್ಕೆ ಲಂಚ ಪಡೆದಿದ್ದ ಸಿಬ್ಬಂದಿಯೊಬ್ಬ ಹಣವನ್ನೂ ನೀಡದೆ, ಕೆಲಸವನ್ನೂ ಮಾಡಿಕೊಡದೆ ಸತಾಯಿಸುತಿದ್ದ. ಈ ರೀತಿ ಸಾರ್ವಜನಿಕರನ್ನು ಹಿಂಸಿಸುವ ಕೆಲಸ ಸಿದ್ಧಾಪುರದಲ್ಲಿ ಕಳೆದ ಏಳೆಂಟು ವರ್ಷಗಳಿಂದಲೂ ನಿರಾಯಾಸವಾಗಿ ನಡೆಯುತಿತ್ತು. ಪ್ರಭಾವಿಗಳಿಗೆ, ರಾಜಕೀಯ ನಾಯಕರಿಗೆ ಕೆಲಸಮಾಡಿಕೊಡುತಿದ್ದ ಭೂಮಾಪನಾ ಇಲಾಖೆಯ ಸಿಬ್ಬಂದಿಗಳು ಅಸಹಾಯಕರು, ಅಮಾಯಕರಿಗೇ ಸತಾಯಿಸಿ ಕಾಸು ಮಾಡುತಿದ್ದರು. ಈ ಬಗ್ಗೆ ಕೆಲವು ವರ್ಷಗಳಿಂದಲೂ ದೂರುಗಳಿದ್ದರೂ ಕೂಡಾ ಸಾರ್ವಜನಿಕರು ಒಟ್ಟಾಗಿ ಪ್ರತಿಭಟಿಸಿರಲಿಲ್ಲ.

ಇಂದು ಮಧ್ಯಾಹ್ನದ ಸಮಯಕ್ಕೆ ಭೂಮಾಪನಾ ಇಲಾಖೆಯ ನೌಕರರಿಂದ ನೊಂದಿದ್ದ ಕೆಲವರು ಸೇರಿದ್ದರು. ಅವರೊಂದಿಗೆ ಜೊತೆಯಾಗಿದ್ದ ಕೆಲವರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ನೇರವಾಗಿ ಭೂಮಾಪನಾ ಇಲಾಖೆಗೆ ಧಾವಿಸಿದ್ದಾರೆ. ಅಲ್ಲಿದ್ದ ಸಿಬ್ಬಂದಿಗಳು ಒಬ್ಬ ಸಿಬ್ಬಂದಿ ಕಛೇರಿಯಲ್ಲೇ ಇಲ್ಲ, ಹೊರಗಡೆ ಇದ್ದಾರೆ ಎಂದು ಬಚಾವು ಮಾಡುಲು ಮುಂದಾಗಿದ್ದಾರೆ. ಇದರಿಂದ ಕೆರಳಿದ ಸಾರ್ವಜನಿಕರು ತಹಸಿಲ್ಧಾರರ ಮೂಲಕ ಸಿಬ್ಬಂದಿಯನ್ನು ಕರೆಸುವಂತೆ ದುಂಬಾಲು ಬಿದ್ದಿದ್ದಾರೆ.

ಇದೇ ವೇಳೆ ಕೆಲವರು ಪ್ರತಿಭಟನಾ ರೀತಿಯಲ್ಲಿ ಘೋಷಣೆಗಳನ್ನೂ ಕೂಗಿದ್ದಾರೆ. ಕೆಲವು ವರ್ಷಗಳಿಂದ ಅನಾಯಾಸವಾಗಿ ದುಡಿಮೆ ಮಾಡಿಕೊಂಡಿದ್ದ ಈ ನೌಕರರಿಗೆ ಆಡಳಿತ ಪಕ್ಷದವರೇ ವಿರೋಧಿಗಳಾಗಿ ವರ್ತಿಸಿದ್ದು ದಿಗ್ಭ್ರಮೆಯಾಗಿದೆ. ಸಾರ್ವಜನಿಕರ ಪರವಾಗಿ ನೇತೃತ್ವ ವಹಿಸಿದ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರ ಬಗ್ಗೆ ಸ್ಥಳೀಯರ ಮೆಚ್ಚುಗೆ ವ್ಯಕ್ತವಾಗಿದೆ. ಕಛೇರಿಯ ಹೊರಗೆ ಸೇರಿದ್ದ ಸಾರ್ವಜನಿಕರೂ ಕೂಡಾ ಹಲವು ವರ್ಷಗಳಿಂದ ಜಿಡ್ಡುಗಟ್ಟಿದ ಆಡಳಿತಕ್ಕೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸ್ಥಳೀಯ ನಾಯಕರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಕಾರಣ, ಆಧುನಿಕತೆ ಹೆಸರಲ್ಲಿ ಸತಾಯಿಸುವ ಭೂಮಾಪನಾ ಇಲಾಖೆಯ ನೌಕರರು ಬಡವರಿಂದ ಲಂಚ ಪಡೆದು ಕೊಬ್ಬಿದ್ದು ಇಡೀ ಕಛೇರಿಯ ಸಿಬ್ಬಂದಿಗಳನ್ನು ಸಾಮೂಹಿಕವಾಗಿ ವರ್ಗಾಯಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *