ಭಟ್ಟರ ಮಂತ್ರಕ್ಕೆ ಸಿದ್ಧರಾಮಯ್ಯನವರೂ ಉದುರಿ ಬಿದ್ದರೆ….!?

ವಿಶ್ವೇಶ್ವರ ಭಟ್ಟರ ವಿಶ್ವಾಸಕ್ಕೆ ಪಾತ್ರರಾಗಿ ವಿಲನ್‌ ಗಳಾದ ಕನ್ನಡದ ಅನೇಕ ಪ್ರಮುಖರ ಪಟ್ಟಿಯೇ ಇದೆ. ಇತ್ತೀಚೆಗೆ ಭಟ್ಟರ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಹೋಗಲಿದ್ದಾರೆ ಎನ್ನುವ ವಿಚಾರ ಬಹುಚರ್ಚೆಯ ವಿಷಯವಾಗಿದೆ.

ವಿಶ್ವೇ ಶ್ವರ ಭಟ್ಟರು ಮನುವಾದಿಗಳು ಎನ್ನುವ ವಿಚಾರದಲ್ಲಿ ಎರಡು ಮಾತುಗಳಿಲ್ಲ. ಅವರ ಹಿನ್ನೆಲೆ, ಅವರು ಬೆಳೆದು ಬಂದ ಪರಿಸರ, ಅವರ ಒಡನಾಟ ಇವೆಲ್ಲವುಗಳಿಗಿಂತ ಹೆಚ್ಚಾಗಿ ಭಟ್ಟರು ಬಿ.ಜೆ.ಪಿ. ಭಟರಾಗಿ ಬಹುಸಂಖ್ಯಾತರ ಭಾವನೆ,ಧೋರಣೆಗಳಿಗೆ ವಿರುದ್ಧವಾಗಿದ್ದರು ಎನ್ನುವುದು ಇಶ್ಯು.

ನಮ್ಮ ಪ್ರಗತಿ ಪರ ಸ್ನೇಹಿತರೆಲ್ಲಾ ಭಟ್ಟರ ಸ್ನೇಹಿತರನ್ನು ಸೈದ್ಧಾಂತಿಕ ಹಿನ್ನೆಲೆಯಿಂದ ಮಾತ್ರ ವಿಮರ್ಶಿಸಿದರೆ, ವಿರೋಧಿಸಿದರೆ ಅದನ್ನು ತಪ್ಪು ಎಂದು ಹೇಳಲಾದೀತೆ? ಅದೇನೇ ಇರಲಿ, ಮೊನ್ನೆ ಕೃಷ್ಣಪ್ರಸಾದ ಬರೆದ ಪ್ರಜಾವಾಣಿಯ ಅಂಕಣ ಈ ಭಟ್ಟರ ಪರಿವಾರ ಕನ್ನಡಿಗರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು ಎನ್ನುವುದನ್ನು ಒಪ್ಪುವ,ಬೆಂಬಲಿಸುವ ಕೆಲವೇ ಬರಹಗಾರರಲ್ಲಿ ನಾನೂ ಒಬ್ಬ.

ವಿಚಾರ ಏನಪ್ಪಾ ಅಂದ್ರೆ ನಮ್ಮ ಭಾಗದ ಹೋರಿ ಸ್ವಾಮಿ ತನ್ನ ಘನ ಕಾರ್ಯಕ್ಕೆ ಬಂಧನಕ್ಕೊಳಗಾಗಬೇಕಿದ್ದ ಸಮಯದಲ್ಲಿ ಈ ಭಾರತೀಯ ಬಹುಜನವಿರೋಧಿ ಪರಿವಾರದ ಮನುವಾದಿಗಳು ಸಿದ್ಧರಾಮಯ್ಯನವರೊಂದಿಗೆ ಸಲುಗೆ ಬಳಸಿ ಹೋರಿ ಸ್ವಾಮಿಯನ್ನು ಬಚಾವು ಮಾಡಿಸಿದರು! ಎನ್ನುವುದು.

ಹೋರಿ ಸ್ವಾಮಿಯಿರಲಿ, ತಿರುಪತಿ, ಕಾಂಚಿ, ಕಾಮಕೋಟಿ,ಪೇಜಾವರ ಯಾರೂ ಈ ನೆಲದ ಕಾನೂನಿಗೆ ಅತೀತರಲ್ಲ. ಇವರನ್ನು ಸಿದ್ಧರಾಮಯ್ಯನವರಂಥ ಸಮಾಜವಾದಿ ರಕ್ಷಿಸಿದರು ಎನ್ನುವುದು ನಂಬಲರ್ಹ ಸುದ್ದಿಯೂ ಅಲ್ಲ. ಆದರೆ ಅದಕ್ಕೆ ದಾಖಲೆಗಳಿವೆ. ಸಿದ್ಧರಾಮಯ್ಯ ಯಾವ ಜಾತಿ, ಧರ್ಮ,ಮತಗಳ ಸಂಕುಚಿತತೆಗೆ ಸಿಲುಕದ ಸಿಡುಕಿನ ಸಮಾಜವಾದಿ. ಅಂಥವರನ್ನು ಮನುವಾದಿಗಳು ಬಳಸಿಕೊಳ್ಳುತ್ತಾರೆ ಎನ್ನುವುದರಲ್ಲಿ ಮನುವಾದಿಗಳ ಸಮಯಸಾಧಕತನ,ಹಿಪೊಕ್ರಶಿ ಕಾಣಬಹುದು. ಕೆಲವು ಸಂದರ್ಭಗಳಲ್ಲಿ ಇದು ಸಿದ್ಧರಾಮಯ್ಯನವರ ಹೃದಯವೈಶಾಲ್ಯ,ಉದಾರತೆ ಕೂಡಾ ಎನ್ನಬಹುದು! ಆದರೆ ಈಗ ರಾಜ್ಯದ ರಾಜಕೀಯ ವಿದ್ಯಮಾನ, ಅವಕಾಶ, ಅಧಿಕಾರಗಳ ಹಿನ್ನೆಲೆಯೊಂದಿಗೆ ಚರ್ಚಿಸುವುದಾದರೆ ಈ ನೆಲಮೂಲದ ಭಾರತೀಯ ಬಹುಸಂಖ್ಯಾತರ ಶೋಷಕರು, ವಿರೋಧಿಗಳಾದ ಮನುವಾದಿಗಳು ರಾಜ್ಯಮಟ್ಟದಲ್ಲಿ ಈಡಿಗರು ಸೇರಿದಂತೆ ಎಲ್ಲಾ ಅಹಿಂದ್ ಗಳನ್ನು ಹುಡುಹುಡುಕಿ ವಿರೋಧ, ವಿಮರ್ಶೆ, ಟೀಕೆ ಮಾಡುವ ಸಂದರ್ಭದಲ್ಲಿ ಮತಾಂಧ ಮೋದಿ ಪರಿವಾರದ ಆಪ್ತರಾದ ಈ ಗುಂಪನ್ನು ಸಿದ್ಧರಾಮಯ್ಯ ಬೆಂಬಲಿಸುವ ಮೂಲಕ ಯಾವ ಸಂದೇಶ ಕೊಡಲು ಹೊರಟಿದ್ದಾರೆ ಎನ್ನುವ ಪ್ರಶ್ನೆ ಎದ್ದಿದೆ.

ಮನುವಾದಿಗಳು ಅಹಿಂದ್‌ ವಿರೋಧಿಗಳು ಅವರು ಹರಿಪ್ರಸಾದ್‌ ರಂಥ ಸೈದ್ದಾಂತಿಕ ಬದ್ದತೆಯ ಕಟ್ಟರ್‌ ಕಾಂಗ್ರೆಸ್ಸಿಗರನ್ನು ವಿರೋಧಿಸುವ ಸಂದರ್ಭದಲ್ಲಿ ಅವರ ವಿರೋಧ ಕಾಂಗ್ರೆಸ್‌ ಮತ್ತು ಸೋನಿಯಾ, ರಾಹುಲ್‌ ರತ್ತ ಎನ್ನುವುದು ಸ್ಪಸ್ಟ. ಸಿದ್ಧರಾಮಯ್ಯ ಮನುವಾದಿಗಳನ್ನು ಓಲೈಸುತ್ತಾ, ಹೋರಿಸ್ವಾಮಿಯಂಥವರನ್ನು ರಕ್ಷಿಸುತ್ತಾ ಯಾವ ಕಾಂಗ್ರೆಸ್‌, ಜಾತ್ಯಾತೀತತೆ ಕಟ್ಟಬಲ್ಲರು ಎನ್ನುವುದು ಪ್ರಶ್ನೆ?

ಭಾರತದ ಬಹುಸಂಖ್ಯಾತರ ಬೆವರನ್ನು ನಿಂದಿಸುವ ಮತೀಯವಾದಿ ಮನುವಾದಿ ಸಮಯಸಾಧಕರು ಸಿದ್ಧರಾಮಯ್ಯನಂಥವರನ್ನೂ ಬಳಸಿಕೊಂಡು ತಮ್ಮ ದುಷ್ಟಪರಿವಾರವನ್ನು ರಕ್ಷಿಸತೊಡಗಿದರೆ ಬೇಲಿಯೇ ಎದ್ದು ಹೊಲ ಮೇದಂತಾಗುವುದಿಲ್ಲವೆ? ನಮ್ಮ ನೆಚ್ಚಿನ ಸಿದ್ಧರಾಮಣ್ಣ , ಕಾಂಗ್ರೆಸ್‌, ಭಾರತೀಯ ಬಹುಸಂಖ್ಯಾತ ಮೂಲನಿವಾಸಿ ಅಹಿಂದ್‌ ವಿರೋಧಿಗಳೂ, ಸನಾತನ ವೈದಿಕ ವಂಚಕರೂ ಆದ ಮನುವಾದಿ ಪರಿವಾರ ನಿಮಗೂ ಎರಡು ಬಗೆಯುವ ಅವಕಾಶವಾದಿ ದೇಶದ್ರೋಹಿಗಳ ಗುಂಪು ಎನ್ನುವುದನ್ನು ನಿಮಗೆ ಮತ್ತೊಮ್ಮೆ ನೆನಪಿಸುವ ಕೆಲಸವನ್ನು ಈಗ ನಿಮಗೆ ಟೀಕಾಕಾರರಾದವರು ಮಾಡುತಿದ್ದಾರೆ ಎನ್ನಬಹುದಷ್ಟೇ….

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *