ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ.

Siddaramaiah And b k hariprasad

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮುಖ್ಯಮಂತ್ರಿ ಸ್ಥಾನ ವಂಚಿತರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ, ಸಚಿವ ಸ್ಥಾನ ಕೈ ತಪ್ಪಿದವರನ್ನು ಒಟ್ಟುಗೂಡಿಸುವ ಮೂಲಕ ಅವರು ಕಾಂಗ್ರೆಸ್‌ನೊಳಗೆ ಸಿದ್ದರಾಮಯ್ಯ ವಿರೋಧಿ ಪಾಳೆಯವನ್ನು ಮುನ್ನಡೆಸಬಹುದು ಎಂದು ರಾಜಕೀಯ ವೀಕ್ಷಕರು ಹೇಳಿದ್ದಾರೆ.

ಅಹಿಂದ ಚಳವಳಿಯ ಮೂಲಕ ಹಿಂದುಳಿದ ವರ್ಗಗಳ ಹಿತವನ್ನು ಪ್ರತಿಪಾದಿಸುವ ಸಿದ್ದರಾಮಯ್ಯನವರನ್ನು ಎದುರಿಸಲು  ಶಕ್ತಿ ನೀಡಿದ್ದು, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ವ್ಯಾಪಕ ಪ್ರಚಾರ ಮಾಡಿದ ಕರಾವಳಿ ಪ್ರದೇಶದ ಸಮುದಾಯದೊಂದಿಗೆ ನಿಕಟ ಸಂಪರ್ಕ ಸಾಧಿಸಿದ್ದಾರೆ.

ಆದರೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅಥವಾ ಮಾಜಿ ಲೋಕಸಭಾ ಸದಸ್ಯ ದಿವಂಗತ ಆರ್ ಎಲ್ ಜಾಲಪ್ಪ ಅವರಂತಹ ನಾಯಕರಿಲ್ಲದ ಈಡಿಗ ಸಮುದಾಯದ ಪ್ರಮುಖ ನಾಯಕರಾಗಿ 68 ವರ್ಷದ ಹರಿಪ್ರಸಾದ್ ಹೊರಹೊಮ್ಮುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಿದ್ದರಾಮಯ್ಯ ವಿರುದ್ಧದ ಹೇಳಿಕೆಯಿಂದ ಹರಿಪ್ರಸಾದ್ ಅವರನ್ನು ಸಮುದಾಯದ ಪ್ರಣವಾನಂದ ಸ್ವಾಮಿಗಳು ಬೆಂಬಲಿಸುತ್ತಿದ್ದಾರೆ, ಅವರ ಪ್ರಭಾವವು ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಾದ್ಯಂತ ವ್ಯಾಪಿಸಿದೆ, ಏಕೆಂದರೆ ಸಮುದಾಯದ ಸಾಕಷ್ಟು ಜನಸಂಖ್ಯೆಯು ಕೇರಳದಲ್ಲೂ ಉಳಿದಿದೆ.

ಆದರೆ ಹರಿಪ್ರಸಾದ್ ಅವರಿಗೆ ಚುನಾವಣೆಯಲ್ಲಿ ಗೆದ್ದ ಇತಿಹಾಸ ಇಲ್ಲದಿರುವುದರಿಂದ ಆ ಶಕ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಇರಬಹುದು ಎಂದು ರಾಜಕೀಯ ಪಂಡಿತರು ಹೇಳಿದ್ದಾರೆ.

ಅವರು 1983 ರಲ್ಲಿ ಬೆಂಗಳೂರಿನ ಗಾಂಧಿ ನಗರದಿಂದ ಸೋತರು ಮತ್ತು 2019 ರಲ್ಲಿ ಬೆಂಗಳೂರು ದಕ್ಷಿಣದಿಂದ ನಡೆದ ಚುನಾವಣೆ ಸೇರಿದಂತೆ ಎರಡು ಲೋಕಸಭಾ ಚುನಾವಣೆಗಳನ್ನು ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ. ಐದು ಬಾರಿ ರಾಜ್ಯಸಭೆ ಸದಸ್ಯರಾಗಿದ್ದ ಹರಿಪ್ರಸಾದ್ ಇತ್ತೀಚೆಗೆ ರಾಜ್ಯ ರಾಜಕೀಯಕ್ಕೆ ಶಿಫ್ಟ್ ಆಗಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅವರಿಗೆ ಸಚಿವ ಸ್ಥಾನ ನಿರಾಕರಿಸುವ ಮೂಲಕ ಅವರನ್ನು ದೂರವಿಡಲಾಗಿದೆ. ಇದು ಅವರ ಯುಗ ಮುಗಿದು ಹೋಗಿದೆ ಎಂಬುದರ ಸೂಚನೆಯಾಗಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಆದರೆ ಹರಿಪ್ರಸಾದ್ ಅವರು ಮುಂಬರುವ ದಿನಗಳಲ್ಲಿ ಪರಿಸ್ಥಿತಿಗಳು ಹೇಗೆ ಹೋಗುತ್ತವೆ ಎಂಬುದನ್ನು ನಿರೀಕ್ಷಿಸಿ ಮತ್ತು ವೀಕ್ಷಿಸಿ ಎಂದು ಸಂದೇಶ ನೀಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *