ಸರ್ವಋತು ಜಲಪಾತವಾಗಲಿದೆಯೆ ಹುಸೂರು ಜಲಾಗಾರ!

ಮಲೆನಾಡಿನ ಮಳೆ, ಜಲಪಾತಗಳ ವೈಭವ ವರ್ಣಿಸಲಸದಳ ಉತ್ತರ ಕನ್ನಡ ಜಿಲ್ಲೆಯಲ್ಲಿ ತುಸು ಬಿಡುವು ನೀಡಿರುವ ಮಳೆ ಪ್ರವಾಸಿಗರಿಗೆ ಅನುಕೂಲ ಮಾಡಿಕೊಟ್ಟಿದೆ. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಸ್ವರ್ಗ ಎನ್ನಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಜೋಗ ಜಲಪಾತ ಸೇರಿ ಇಲ್ಲಿ ಪ್ರತಿ ತಾಲೂಕಿನಲ್ಲೂ ಜಲಪಾತಗಳ ಸೊಬಗು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಹುಸೂರು ಜಲಪಾತ ಇಂಥ ಆಕರ್ಷಕ ಜಲಪಾತಗಳಲ್ಲೊಂದು ಜೋಗದಿಂದ ಹದಿನೈದು ಕಿಲೋ ಮೀಟರ್‌ ದೂರದ ಈ ಜಲಪಾತ ಈಗ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದೆ.


ಹುಸೂರಿನಲ್ಲಿರುವ ಆಣೆಕಟ್ಟು (ಜಲಾಗಾರ) ವರ್ಷದ ಆರು ತಿಂಗಳು ತುಂಬಿರುತ್ತದೆ. ಇನ್ನುಳಿದ ಆರು ತಿಂಗಳಲ್ಲಿ ಈ  ಆಣೆಕಟ್ಟೆಯಲ್ಲಿ ನೀರಿಲ್ಲದಿರುವುದರಿಂದ ಹುಸೂರು ಜಲಪಾತ ಬಡವಾಗುತ್ತದೆ. ಈ ವರ್ಷ ವಿಳಂಬವಾಗಿ ಸುರಿದಿರುವ ಮಳೆ ಈಗ ಎಲ್ಲಾ ಜಲಪಾತಗಳನ್ನು ಮೈದುಂಬಿಸಿದೆ. ಈ ಜಲಪಾತದ ಹುಸೂರಿನ ಆಣೆಕಟ್ಟೆಯ ನೀರು ವರ್ಷಂಪ್ರತಿ ಇಲ್ಲದಿರುವುದರಿಂದ ಹುಸೂರು ಜಲಪಾತ ಕೇವಲ ಆರು ತಿಂಗಳು ಮಾತ್ರ ಮೈತುಂಬಿಕೊಂಡಿರುತ್ತದೆ. ಇದೇ ಆಣೆಕಟ್ಟೆಗೆ ಸಾಗರದ ಲಿಂಗನಮಕ್ಕಿ ಜಲಾಶಯದ ನೀರು ಹರಿಸುವುದರಿಂದ ಈ ಜಲಪಾತವನ್ನು ಸರ್ವಋತು ಜಲಪಾತವನ್ನಾಗಿ ಅಭಿವೃದ್ಧಿ ಪಡಿಸಬಹುದು ಎನ್ನುವ ಅಭಿಪ್ರಾಯವಿದೆ.


ಸಿದ್ಧಾಪುರ ತಾಲೂಕಿಗೆ ಲಿಂಗನಮಕ್ಕಿಯಿಂದ ಹಿನ್ನೀರನ್ನು ತರಲು ಯೋಜನೆ ಸಿದ್ಧವಾಗಿದೆ. ಈ ಯೋಜನೆಯನ್ನು ತುಸು ಬದಲಿಸಿ ಹುಸೂರುಜಲಾಶಯಕ್ಕೆ ಲಿಂಗನಮಕ್ಕಿ ಹಿನ್ನೀರನ್ನು ಹರಿಸಿ ಅದರಿಂದ ಹುಸೂರಿನ ಜಲಪಾತವನ್ನು ವರ್ಷವಿಡೀ ಜೀವಂತವಿಡಬಹುದು ಎನ್ನುವ ಅಭಿಪ್ರಾಯ ಸ್ಥಳೀಯರದ್ದು. ಹುಸೂರಿನ ರಮಣೀಯ ಪರಿಸರದ ಜಲಪಾತ ಈಗ ಎಲ್ಲರನ್ನೂ ಆಕರ್ಷಿಸುತ್ತಿದೆ. ಈ ವೈಭವವನ್ನು ವರ್ಷವಿಡೀ ವಿಸ್ತರಿಸಲು ಸ್ಥಳೀಯ ಆಡಳಿತ ಪ್ರಯತ್ನಿಸಿದರೆ ಸಿದ್ಧಾಪುರಕ್ಕೆ ವರ್ಷವಿಡೀ ಕುಡಿಯುವ ನೀರಿನ ಜೊತೆಗೆ ತಾಲೂಕಿನ ಪ್ರವಾಸೋದ್ಯಮವನ್ನೂ ಅಭಿವೃದ್ಧಿಪಡಿಸಬಹುದೆನ್ನುವ ಆಶಯ ಈಗ ಸಾರ್ವಜನಿಕ ಅಭಿಪ್ರಾಯವಾಗುತ್ತಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *