

ಶೋಭಾ ಕರಂದ್ಲಾಜೆ ಬಾಯಿ ಅದುಮಿ ಹಿಡಿದಿರುವವರು ಯಾರು? ವಿಟ್ಲ ದಲಿತ ಬಾಲಕಿ ಅತ್ಯಾಚಾರದ ಬಗ್ಗೆ ಮೌನವೇಕೆ?
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.


ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ”ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟಗೆ ತೆಗದುಕೊಂಡಿದೆ.
”ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ ವಿಟ್ಲದಲ್ಲಿಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಮೌನವೇಕೆ?, ಆ ದಲಿತ ಬಾಲಕಿ ಹಿಂದೂ ಅಲ್ಲವೇ?, ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ?” ಎಂದು ಕಾಂಗ್ರೆಸ್ ಕಿಡಿಕಾರಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
