ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಕ್ಕೆ ನೌಕರರ ಸಹಕಾರ ಕೋರಿದ ಭೀಮಣ್ಣ

‌ಸಿದ್ದಾಪುರ: ಸರ್ಕಾರದ ಕಾರ್ಯಕ್ರಮ ಹಾಗೂ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕೆಂದರೆ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿದ್ದಾಪುರ ಶಾಖೆ ವತಿಯಿಂದ ಪಟ್ಟಣದ ರಾಘವೇಂದ್ರ ಮಠದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಕಾರ್ಯಕ್ರಮ ಸರಿಯಾಗಿ ಅನುಷ್ಠಾನಕ್ಕೆ ಬರಲು ನೌಕರರ ಪಾತ್ರ ದೊಡ್ಡದಿದೆ. ನಿಮ್ಮ ಅವಧಿಯಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ. ಏಳನೆ ವೇತನ ಆಯೋಗದ ಅನುಷ್ಠಾನ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಸರ್ಕಾರದ ಕೆಲಸವನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಮಾಡುವ ಮೂಲಕ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದ ಅವರು, ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಮಸ್ತ ನೌಕರರು ಸಹಕಾರ ನೀಡುವಂತೆ ಸೂಚಿಸಿದರು.


ಸಂಘದ ಅಧ್ಯಕ್ಷ ರಾಜೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿ, ಸರ್ಕಾರಿ ನೌಕರರ ಏಳನೆ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸರ್ಕಾರದ ಗಮನಕ್ಕೆ ತಂದು ಜಾರಿಗೆ ಪ್ರಯತ್ನಿಸಬೇಕು ಎಂದ ಅವರು, ಎನ್.ಪಿ.ಎಸ್ ರದ್ಧುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ನೂತನ ಶಾಸಕರಾದ ಭೀಮಣ್ಣ ನಾಯ್ಕ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಹಾಗೂ ನಿವೃತ್ತ ನೌಕರರನ್ನು ಸಂಘದ ಪರವಾಗಿ ಅಭಿನಂದಿಸಲಾಯಿತು. ಎಸ್.ಎಸ್.ಎಲ್.ಸಿಯಲ್ಲಿ 95% ಕ್ಕಿಂತ ಅಧಿಕ ಹಾಗೂ ಪಿಯುಸಿಯಲ್ಲಿ 90% ಕ್ಕಿಂತ ಅಧಿಕ ಅಂಕ ಗಳಿಸಿದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಮಾತನಾಡಿದರು. ಈ ವೇಳೆ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಪ್ರಶಾಂತ ಜಿ.ಎಸ್., ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜಪ್ಪ ಉಪಸ್ಥಿತರಿದ್ದರು.
ಸರ್ಕಾರಿ ನೌಕರರ ಸಂಘದ ಖಜಾಂಚಿ ತೇಜಸ್ವಿ ನಾಯ್ಕ ಸ್ವಾಗತಿಸಿದರು. ಭೂಮಾಪನ ಇಲಾಖೆಯ ಉಷಾ ಪ್ರಶಾಂತ ನಾಯ್ಕ ನಿರೂಪಿಸಿದರು. ಪರಶುರಾಮ ನಾಯ್ಕ ಕಡಕೇರಿ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *