ಬಿ.ಜೆ.ಪಿ.ಯವರು ನಮ್ಮ ಸೋಲು ನೋಡಿ ಆನಂದಿಸುವವರು!

ಬಿಜೆಪಿಯ ಕೆಲ ಮುಖಂಡರ ಬಗ್ಗೆ ಬೇಸರವಿದೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಕಾಲ ನಿರ್ಣಯವಾಗಿಲ್ಲ: ಶಿವರಾಮ್ ಹೆಬ್ಬಾರ್

ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ಭಾರೀ ಸದ್ದು ಮಾಡುತ್ತಿದೆ. 2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ವಲಸಿಗ ಶಾಸಕರು, ಬಾಂಬೆ ಬಾಯ್ಸ್ ಎಂದು ಮಾಧ್ಯಮಗಳಿಂದ ಕರೆಸಿಕೊಳ್ಳುತ್ತಿರುವವರು ಮತ್ತೆ ಘರ್ ವಾಪಸ್ ಆಗುತ್ತಾರಾ? ಬಿಜೆಪಿಗೆ ಬಿಗ್ ಶಾಕ್ ನೀಡುತ್ತಾರಾ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

Shivaram Hebbar

ಬೆಂಗಳೂರು/ಯಲ್ಲಾಪುರ: ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ಭಾರೀ ಸದ್ದು ಮಾಡುತ್ತಿದೆ. 2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ವಲಸಿಗ ಶಾಸಕರು, ಬಾಂಬೆ ಬಾಯ್ಸ್ ಎಂದು ಮಾಧ್ಯಮಗಳಿಂದ ಕರೆಸಿಕೊಳ್ಳುತ್ತಿರುವವರು ಮತ್ತೆ ಘರ್ ವಾಪಸ್ ಆಗುತ್ತಾರಾ? ಬಿಜೆಪಿಗೆ ಬಿಗ್ ಶಾಕ್ ನೀಡುತ್ತಾರಾ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಜನಪ್ರಿಯರಾಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಲಸಿಗ ಶಾಸಕರಿಗೆ ಗಾಳ ಹಾಕುತ್ತಿದ್ದು, ನಿನ್ನೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಭಾಗವಹಿಸಿ ನಂತರ ಮಾಧ್ಯಮ ಪ್ರತಿನಿಧಿಗಳ ಮುಂದೆ ಡಿ ಕೆ ಟಾಸ್ಕ್ ನೀಡಿದ್ದಾರೆ ಎಂದು ಹೇಳಿರುವುದು ಭಾರೀ ಸುದ್ದಿ ಮಾಡುತ್ತಿದೆ. ಬಿಜೆಪಿಯಲ್ಲಿ ಶಾಸಕರನ್ನು ಪಕ್ಷ ಬಿಟ್ಟು ಹೋಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಾಯಕರಿಗೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು ಜೋರಾಗಿದೆ. ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಅನುಮಾನ ದಟ್ಟವಾಗಿದ್ದು ನಿನ್ನೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದರು. ಇಂದು ಕೂಡ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಭೆಯಲ್ಲಿ ಬೆಂಬಲಿಗರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಬೆಂಗಳೂರಿಗೆ ಹೋಗಿ ತೀರ್ಮಾನ ಮಾಡುತ್ತೇನೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಆಪ್ತ ವಲಯದ ಮುಖಂಡರ ಜೊತೆ ಚರ್ಚಿಸುತ್ತೇನೆ ಎಂದಿದ್ದಾರೆ. 

ಬಿಜೆಪಿ ತೊರೆಯುವ ವಿಚಾರವಾಗಿ ಸುದ್ದಿಗಾರರು ಕೇಳಿದಾಗ, ಬಿಜೆಪಿಯ ಕೆಲ ಮುಖಂಡರ ಮೇಲೆ ನನಗೆ ಅಸಮಾಧಾನವಿದೆ. ಚುನಾವಣೆ ಸಂದರ್ಭದಲ್ಲಿ ಅವರು ನಡೆದುಕೊಂಡ ರೀತಿ ಸರಿ ಎನಿಸಲಿಲ್ಲ. ನನ್ನ ಸೋಲನ್ನು ಸಂಭ್ರಮಿಸುವ ತಯಾರಿ ನಡೆಸಿದ್ದರು. ಯಾರೂ ಹಿಂದೆ ಸಪೋರ್ಟ್ ಇಲ್ಲದೆ ಈ ರೀತಿ ಮಾಡುವುದಿಲ್ಲ.

ಬಿಜೆಪಿಯ ಕೆಲ ಮುಖಂಡರ ಬಗ್ಗೆ ಬೇಸರವಿದೆ. ಕೆಲ ಮುಖಂಡರ ಪಟ್ಟಿಯನ್ನು ಕೊಟ್ಟಿದ್ದೇನೆ. ಅವರ ಮೇಲೆ ಕ್ರಮ ಆಗಬೇಕು. ಕ್ರಮವಾಗದಿದ್ದರೆ ಪಕ್ಷ ಅರಗಿಸಿಕೊಳ್ಳಲಾಗದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಸಂದೇಶ ರವಾನಿಸುವುದರ ಜೊತೆ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಕಾಲ ನಿರ್ಣಯವಾಗಿಲ್ಲ ಎಂದು ಹೇಳಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *