ವಾಜಗದ್ದೆಯಲ್ಲಿ ೩೬ ಅಲ್ಲ ೬೩ ನಾಟಕ ಪ್ರದರ್ಶನ


ಸಿದ್ದಾಪುರ
ರಂಗಭೂಮಿಯ ಹಿರಿಮೆ ಬಹುದೊಡ್ಡದು. ರಂಗಸಂಸ್ಥೆಯನ್ನು ಸಂಘಟಿಸಿ, ಅದರ ಮೂಲಕ ನಾಟಕ ಪ್ರದರ್ಶಿಸುವದು ಸುಲಭದ ಕಾರ್ಯವಲ್ಲ. ಗ್ರಾಮೀಣ ಪ್ರದೇಶದಲ್ಲಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ರಂಗಭೂಮಿಯನ್ನು ಎಲ್ಲೆಡೆ ಪಸರಿಸುವ ರಂಗ ಸೌಗಂಧದ ಕಾರ್ಯ ನಿಜಕ್ಕೂ ಶಾಘ್ಲನೀಯ ಎಂದು ಸಾಂಸ್ಕೃತಿಕ ಚಿಂತಕ ಗೋಪಾಲ ಹೆಗಡೆ ಹುಲೀಮನೆ ಹೇಳಿದರು.
ಅವರು ತಾಲೂಕಿನ ವಾಜಗದ್ದೆಯ ಶ್ರೀ ದುರ್ಗಾವಿನಾಯಕ ದೇವಾಲಯ ಆಡಳಿತ ಮಂಡಳಿ, ಶ್ರೀ ದುರ್ಗಾ ವಿನಾಯಕ ಕೃಷಿಕ ಯುವಕ ಸಂಘ, ಶ್ರೀ ದುರ್ಗಾವಿನಾಯಕ ಯಕ್ಷಮಿತ್ರ ಮಂಡಳಿ ಹಾಗೂ ಗ್ರಾಮಸ್ಥರ ಸಹಕಾರದಲ್ಲಿ ಸೆ.೮ರಂದು ಆಯೋಜಿಸಿದ ರಂಗ ಸೌಗಂಧ ತಂಡದ ೨೦೨೩-೨೪ನೇ ಸಾಲಿನಲ್ಲಿ ರಂಗಸಂಚಾರಕ್ಕಾಗಿ ಸಿದ್ಧಪಡಿಸಿದ ೩೬ ಅಲ್ಲ ೬೩ ಎನ್ನುವ ಹವ್ಯಕ ನಗೆ ನಾಟಕ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ಕರ್ನಾಟಕದ ರಂಗಭೂಮಿಯಲ್ಲಿ ದಂತ ಕಥೆಯಾಗಿರುವವರು ದಿ|ಹುಲಿಮನೆ ಸೀತಾರಾಮ ಶಾಸ್ತಿçಗಳು. ಅವರ ಕುಟುಂಬದ ಗಣಪತಿ ಹೆಗಡೆ ರಂಗ ಸೌಗಂಧ ರಂಗಸಂಸ್ಥೆಯ ಮೂಲಕ ರಂಗಭೂಮಿಯನ್ನು ಸಕ್ರೀಯಗೊಳಿಸುತ್ತಿರುವದು ಸಂತಸದ ಸಂಗತಿ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ದುರ್ಗಾವಿನಾಯಕ ದೇವಾಲಯದ ಮೋಕ್ತೇಸರ ಶ್ರೀಧರ ಎಂ.ಹೆಗಡೆ ಪೇಟೆಸರ ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ಪ್ರದೇಶ ಸದಾ ಕ್ರಿಯಾಶೀಲವಾಗಿದೆ. ಇಲ್ಲಿನ ಪ್ರೇಕ್ಷಕರೂ ಸ್ಪಂದಿಸುತ್ತಾರೆ. ಇಂಥ ಚಟುವಟಿಕೆಗಳಿಗೆ ಎಲ್ಲರ ಸಹಕಾರವೂ ದೊರೆಯುತ್ತದೆ. ಹವ್ಯಕ ಕನ್ನಡದ ಈ ನಾಟಕವನ್ನು ಇಲ್ಲಿ ಪ್ರದರ್ಶನಮಾಡುವಲ್ಲಿ ಎಲ್ಲರ ಸಹಕಾರ ದೊರಕಿದೆ ಎಂದರು.
ಅತಿಥಿಗಳಾದ ಹಿರಿಯ ಕೃಷಿಕ, ಸಾಂಸ್ಕೃತಿಕ ಪ್ರೋತ್ಸಾಹಕ ಸುಬ್ರಾಯ ಹೆಗಡೆ ಮತ್ತೀಗಾರ ಮಾತನಾಡಿ ರಂಗ ಸೌಗಂಧ ತಂಡ ಪ್ರತಿವರ್ಷವೂ ಹೊಸಬಗೆಯ ನಾಟಕಗಳನ್ನು ಸಿದ್ಧಗೊಳಿಸಿ ಪ್ರದರ್ಶಿಸಿ ಎಲ್ಲೆಡೆಗೂ ಪ್ರದರ್ಶಿಸುತ್ತಿದೆ. ನಾವೆಲ್ಲ ಅವರಿಗೆ ಸಹಕರಿಸಬೇಕು ಎಂದರು.
ರಂಗ ಸೌಗಂಧ ತಂಡದ ಮುಖ್ಯಸ್ಥ ಗಣಪತಿ ಹೆಗಡೆ ಹುಲೀಮನೆ ಪ್ರಾಸ್ತಾವಿಕ ಮಾತನಾಡಿದರು. ವಿನಾಯಕ ಹೆಗಡೆ ಪೇಟೆಸರ ಸ್ವಾಗತಿಸಿ ವಂದಿಸಿದರು.
ನಂತರ ನಾಟಕ ಪ್ರದರ್ಶನಗೊಂಡಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *