ಮಳೆ ಕೊರತೆ, ಬೆಳೆಹಾನಿ ಭೀತಿ ಹೆಬ್ಬತ್ತಿ ರೈತ ಆತ್ಮಹತ್ಯೆ

ಶಿರಸಿ: ಬೆಳೆ ಹಾನಿ ಭೀತಿ, ಸಾಲ ಮರುಪಾವತಿಸಲಾಗದೆ 65 ವರ್ಷದ ರೈತ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಬ್ಬುತಿ ಗ್ರಾಮದಲ್ಲಿ ರೈತರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಜಗದೀಶ ಚೆನಪ್ಪ (65) ಎಂದು ಗುರುತಿಸಲಾಗಿದ್ದು, ಅಂಡಗಿ ಗ್ರಾಮದ ಸಹಕಾರಿ ಬ್ಯಾಂಕ್‌ನಲ್ಲಿ ಪಡೆದಿದ್ದ 3 ಲಕ್ಷ ಸಾಲ ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Representative Image

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಬ್ಬತ್ತಿ ಗ್ರಾಮದಲ್ಲಿ ರೈತರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮೃತರನ್ನು ಜಗದೀಶ ಚೆನಪ್ಪ (65) ಎಂದು ಗುರುತಿಸಲಾಗಿದ್ದು, ಅಂಡಗಿ ಗ್ರಾಮದ ಸಹಕಾರಿ ಬ್ಯಾಂಕ್‌ನಲ್ಲಿ ಪಡೆದಿದ್ದ 3 ಲಕ್ಷ ಸಾಲ ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಕೃಷಿ ಇಲಾಖೆ ಉಪನಿರ್ದೇಶಕ ನಟರಾಜ್ ಮಾತನಾಡಿ, ಚೆನಪ್ಪ ಅವರು ಸಾಲ ಮಾಡಿ ಒಂದು ಎಕರೆ 34 ಗುಂಟೆ ಜಮೀನಿನಲ್ಲಿ ಭತ್ತ ಹಾಗೂ ಅಡಿಕೆ ಬೆಳೆದಿದ್ದರು ಎಂದಿದ್ದಾರೆ.

ಮುಂಡಗೋಡಿನಲ್ಲಿ ಇದೇ ರೀತಿಯ ಘಟನೆ ನಂತರ ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಎರಡನೇ ಸಾವು ಇದಾಗಿದೆ. ‘ಅಲ್ಪ ಮಳೆಯ ಹಿನ್ನೆಲೆಯಲ್ಲಿ, ಮಳೆ ಕೊರತೆ ಮತ್ತು ಬೆಳೆ ಹಾನಿಯನ್ನು ನಿರ್ಣಯಿಸಲು ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ಆದೇಶಿಸಿದೆ. ನಾವು ಅದನ್ನು ಮಾಡುತ್ತಿದ್ದೇವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ನೇರವಾದ ವೀಕ್ಷಣೆ ಮತ್ತು ಮಾಪನದಿಂದ ಒದಗಿಸಲಾದ ನೈಜ ಅಥವಾ ಸತ್ಯ ಮಾಹಿತಿಯನ್ನು ಸರ್ಕಾರಕ್ಕೆ ಒದಗಿಸಬೇಕಿದೆ. ಅಚ್ಚರಿ ಎಂದರೆ ಈವರೆಗೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಮಳೆಯಾಗಿದೆ.

‘ಇಂತಹ ತೀವ್ರ ಮಳೆ ಕೊರತೆ ದಾಖಲಾಗಿರುವುದು ಇದೇ ಮೊದಲು. ಜುಲೈನಲ್ಲಿ ಹೆಚ್ಚಿನ ಮಳೆಯಾಯಿತು. ಆದರೆ, ಆಗಸ್ಟ್‌ನಲ್ಲಿ ಪರಿಸ್ಥಿತಿ ಬದಲಾಯಿತು. ಆಗಸ್ಟ್‌ನಲ್ಲಿ ಶೇ 62 ಮತ್ತು ಸೆಪ್ಟೆಂಬರ್‌ನಲ್ಲಿ ಇದುವರೆಗೆ ಶೇ 50 ರಷ್ಟು ಮಳೆ ಕೊರತೆ ದಾಖಲಾಗಿದೆ’ ಎಂದು ಅವರು ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *