bedkani vss- ಸಂಘದ ಮಾಜಿ ಅಧ್ಯಕ್ಷರು ಮತ್ತವರ ಕುಟುಂಬವರ್ಗಕ್ಕೆ ಸನ್ಮಾನ

ಸಿದ್ದಾಪುರ: ಇಲ್ಲಿಯ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ಬುಧವಾರ ನಡೆದ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧರಣಾ ಸಭೆಯಲ್ಲಿ ಹಿಂದಿನ ಅಧ್ಯಕ್ಷರು ಹಾಗೂ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು.
ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಕನ್ನ ಕನ್ನ ನಾಯ್ಕ ಬೇಡ್ಕಣಿ, ಕರಿಯಜ್ಜ ಬಿಳಿಯಾ ನಾಯ್ಕ, ಶಿವರಾಮ ಮಡಿವಾಳ, ಕನ್ನ ಗೌರ್ಯ ನಾಯ್ಕ, ದ್ಯಾವಾ ತಿಮ್ಮ ನಾಯ್ಕ, ಹನುಮಂತ ನಾಯ್ಕ ಕುಂಬ್ರಿಗದ್ದೆ, ಉಮೇಶ ನಾಯ್ಕ ಬೇಡ್ಕಣಿ, ಗೋವಿಂದ ಗಣಪತಿ ನಾಯ್ಕ ಕಡಕೇರಿ, ಮಂಜುನಾಥ ಹೆಗಡೆ, ಎನ್.ಐ.ನಾಯ್ಕ
ಇವರ ಕುಟುಂಬಸ್ಥರಿಗೆ ಸನ್ಮಾನಿಸಲಾಯಿತು.


ಸನ್ಮಾನಿತರ ಪರವಾಗಿ ಚಂದ್ರಶೇಖರ ಕುಂಬ್ರಿಗದ್ದೆ ಮಾತನಾಡಿ, ಸಂಘ ರೈತರ ಹಿತದೃಷ್ಟಿಯಿಂದ ಒಳ್ಳೆಯ ಕಾರ್ಯಕ್ರಮ ಹಾಕಿಕೊಳ್ಳಬೇಕು‌. ಉತ್ತಮವಾಗಿ ವ್ಯವಹಾರ ನಡೆಸುತ್ತಿರುವ ಸದಸ್ಯರನ್ನು ಗೌರವಿಸಬೇಕು ಎಂದರು.


ಸಂಘದ ಅಧ್ಯಕ್ಷ ಪ್ರಶಾಂತ ನಾಯ್ಕ ಪ್ರಾಸ್ತಾವಿಕ ಮಾತನಾಡಿ, ಸಂಘದಲ್ಲಿ 967 ಜನ ಸದಸ್ಯರಿದ್ದಾರೆ. ಅನೇಕ ಮಹನೀಯರ ಅವಿರತ ಶ್ರಮದಿಂದ 1.46 ಕೋಟಿ ಶೇರು ಹೊಂದಿದ್ದು ಪ್ರಸಕ್ತ ಆರ್ಥಿಕ ವರ್ಷದಲ್ಲಿ 18 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಕಂಪ್ಯೂಟರಿಕೃತ ಪಾಸ್ ಬುಕ್ ನೀಡಲಾಗುತ್ತಿದೆ‌. ಪ್ರಸಕ್ತ ವರ್ಷ 760 ರೈತರಿಗೆ 4 ಕೋಟಿ ಬೆಳೆ ಸಾಲ ನೀಡಲಾಗಿದೆ‌. ಸಂಘದಿಂದ ನೀಡಲಾದ ಎಲ್ಲಾ ವಿಧದ ಸಾಲ ಸಂಪೂರ್ಣ ಭರಣವಾಗಿದೆ ಎಂದರು.


ಸಂಘದ ಸದಸ್ಯ ವಿ.ಎನ್‌.ನಾಯ್ಕ ಮಾತನಾಡಿ, ಸಂಸ್ಥೆಯ ಸದಸ್ಯರ ಶೇರನ್ನು ಕಡಿಮೆ ಮಾಡುವುದು ಸಂಘದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಇದು ಸಹಕಾರಿ ತತ್ವಕ್ಕೆ ವಿರುದ್ಧವಾಗಿದೆ ಎಂದರು.
ಉಮೇಶ ನಾಯ್ಕ ಕಡಕೇರಿ ಮಾತನಾಡಿ, ಸದಸ್ಯರಿಗೆ 9% ಡಿವಿಡೆಂಟ್ ಕೊಡಿ ಎಂದು ಒತ್ತಾಯಿಸಿದರು.


ಈ ವೇಳೆ ಸಂಘದ ಉಪಾಧ್ಯಕ್ಷ ಬಾಬು ನಾಯ್ಕ ಕಡಕೇರಿ, ಸದಸ್ಯರಾದ ಕೆ.ಟಿ.ನಾಯ್ಕ ಕಡಕೇರಿ, ಅನಂತ ಗೌಡ, ಅಬ್ದುಲ್ ಖಾದರ್ ಸಾಬ್, ಗಣಪತಿ ನಾಯ್ಕ ಬೇಡ್ಕಣಿ, ಮಹಾಲಕ್ಷ್ಮೀ ನಾಯ್ಕ, ಕೆ‌‌‌.ಟಿ.ನಾಯ್ಕ ಬೇಡ್ಕಣಿ, ಗೀತಾ ಹೆಗಡೆ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಶಶಿಧರ ಜಿ.ಕೆ. ಸಭೆ ನಡೆಸಿಕೊಟ್ಟರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *