bedkani vss- ಸಂಘದ ಮಾಜಿ ಅಧ್ಯಕ್ಷರು ಮತ್ತವರ ಕುಟುಂಬವರ್ಗಕ್ಕೆ ಸನ್ಮಾನ

ಸಿದ್ದಾಪುರ: ಇಲ್ಲಿಯ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ಬುಧವಾರ ನಡೆದ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧರಣಾ ಸಭೆಯಲ್ಲಿ ಹಿಂದಿನ ಅಧ್ಯಕ್ಷರು ಹಾಗೂ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು.
ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಕನ್ನ ಕನ್ನ ನಾಯ್ಕ ಬೇಡ್ಕಣಿ, ಕರಿಯಜ್ಜ ಬಿಳಿಯಾ ನಾಯ್ಕ, ಶಿವರಾಮ ಮಡಿವಾಳ, ಕನ್ನ ಗೌರ್ಯ ನಾಯ್ಕ, ದ್ಯಾವಾ ತಿಮ್ಮ ನಾಯ್ಕ, ಹನುಮಂತ ನಾಯ್ಕ ಕುಂಬ್ರಿಗದ್ದೆ, ಉಮೇಶ ನಾಯ್ಕ ಬೇಡ್ಕಣಿ, ಗೋವಿಂದ ಗಣಪತಿ ನಾಯ್ಕ ಕಡಕೇರಿ, ಮಂಜುನಾಥ ಹೆಗಡೆ, ಎನ್.ಐ.ನಾಯ್ಕ
ಇವರ ಕುಟುಂಬಸ್ಥರಿಗೆ ಸನ್ಮಾನಿಸಲಾಯಿತು.


ಸನ್ಮಾನಿತರ ಪರವಾಗಿ ಚಂದ್ರಶೇಖರ ಕುಂಬ್ರಿಗದ್ದೆ ಮಾತನಾಡಿ, ಸಂಘ ರೈತರ ಹಿತದೃಷ್ಟಿಯಿಂದ ಒಳ್ಳೆಯ ಕಾರ್ಯಕ್ರಮ ಹಾಕಿಕೊಳ್ಳಬೇಕು‌. ಉತ್ತಮವಾಗಿ ವ್ಯವಹಾರ ನಡೆಸುತ್ತಿರುವ ಸದಸ್ಯರನ್ನು ಗೌರವಿಸಬೇಕು ಎಂದರು.


ಸಂಘದ ಅಧ್ಯಕ್ಷ ಪ್ರಶಾಂತ ನಾಯ್ಕ ಪ್ರಾಸ್ತಾವಿಕ ಮಾತನಾಡಿ, ಸಂಘದಲ್ಲಿ 967 ಜನ ಸದಸ್ಯರಿದ್ದಾರೆ. ಅನೇಕ ಮಹನೀಯರ ಅವಿರತ ಶ್ರಮದಿಂದ 1.46 ಕೋಟಿ ಶೇರು ಹೊಂದಿದ್ದು ಪ್ರಸಕ್ತ ಆರ್ಥಿಕ ವರ್ಷದಲ್ಲಿ 18 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಕಂಪ್ಯೂಟರಿಕೃತ ಪಾಸ್ ಬುಕ್ ನೀಡಲಾಗುತ್ತಿದೆ‌. ಪ್ರಸಕ್ತ ವರ್ಷ 760 ರೈತರಿಗೆ 4 ಕೋಟಿ ಬೆಳೆ ಸಾಲ ನೀಡಲಾಗಿದೆ‌. ಸಂಘದಿಂದ ನೀಡಲಾದ ಎಲ್ಲಾ ವಿಧದ ಸಾಲ ಸಂಪೂರ್ಣ ಭರಣವಾಗಿದೆ ಎಂದರು.


ಸಂಘದ ಸದಸ್ಯ ವಿ.ಎನ್‌.ನಾಯ್ಕ ಮಾತನಾಡಿ, ಸಂಸ್ಥೆಯ ಸದಸ್ಯರ ಶೇರನ್ನು ಕಡಿಮೆ ಮಾಡುವುದು ಸಂಘದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಇದು ಸಹಕಾರಿ ತತ್ವಕ್ಕೆ ವಿರುದ್ಧವಾಗಿದೆ ಎಂದರು.
ಉಮೇಶ ನಾಯ್ಕ ಕಡಕೇರಿ ಮಾತನಾಡಿ, ಸದಸ್ಯರಿಗೆ 9% ಡಿವಿಡೆಂಟ್ ಕೊಡಿ ಎಂದು ಒತ್ತಾಯಿಸಿದರು.


ಈ ವೇಳೆ ಸಂಘದ ಉಪಾಧ್ಯಕ್ಷ ಬಾಬು ನಾಯ್ಕ ಕಡಕೇರಿ, ಸದಸ್ಯರಾದ ಕೆ.ಟಿ.ನಾಯ್ಕ ಕಡಕೇರಿ, ಅನಂತ ಗೌಡ, ಅಬ್ದುಲ್ ಖಾದರ್ ಸಾಬ್, ಗಣಪತಿ ನಾಯ್ಕ ಬೇಡ್ಕಣಿ, ಮಹಾಲಕ್ಷ್ಮೀ ನಾಯ್ಕ, ಕೆ‌‌‌.ಟಿ.ನಾಯ್ಕ ಬೇಡ್ಕಣಿ, ಗೀತಾ ಹೆಗಡೆ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಶಶಿಧರ ಜಿ.ಕೆ. ಸಭೆ ನಡೆಸಿಕೊಟ್ಟರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *