ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!

ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗುಂಗಿನಿಂದ ಹೊರಬರದ ಜನರಿಗೆ ಇಲ್ಲೊಬ್ಬ ಕಲಾವಿದ ಪರಿಸರ ಪೂರಕ ಗಣಪತಿ ಮಾಡುವ ಪರ್ಯಾಯ ವಿಧಾನ ಪರಿಚಯಿಸಿದ್ದಾರೆ.

ಪರಿಸರ ಸ್ನೇಹಿ ಗಣಪ, ಪರಿಸರ ಪೂರಕ ಗೌರಿ-ಗಣೇಶ ಹಬ್ಬ ಎನ್ನುವ ವಿಚಾರಕ್ಕೆ ಈಗ ಹೆಚ್ಚಿನ ಪ್ರಚಾರ ದೊರೆಯುತ್ತಿದೆ. ಹಬ್ಬ,ದೇವರು-ಭಕ್ತಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಪರಿಸರಸ್ನೇಹಿ ಗಣೇಶ ಉತ್ಸವಕ್ಕೆ ಈಗ ಹೆಚ್ಚಿನ ಪ್ರಾಮುಖ್ಯತೆ.ಇಂಥ ಪರಿಸರ ಸ್ನೇಹಿ ಗಣಪನ ಬಗ್ಗೆ ಯೋಚಿಸುವ ಜನರಿಗೆ ಉತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರೊಬ್ಬರು ಸಂತೋಷದ ಸುದ್ದಿ ನೀಡಿದ್ದಾರೆ.
ಸಿದ್ಧಾಪುರದ ಕಲಾವಿದ ಶಿವಕುಮಾರ ಮೂರ್ತಿ ರಚನೆ ಮಾಡುವುದರಲ್ಲಿ ಸಿದ್ಧ ಹಸ್ತರು. ಕೃಷ್ಣ ಮೂರ್ತಿ, ಸರಸ್ವತಿ, ಲಕ್ಷ್ಮೀ, ಗೌರಿ ಗಣೇಶ್ ನ ಮಣ್ಣಿನ ಮೂರ್ತಿ ಮಾಡುವ ಕಲಾವಿದರಾದ ಇವರು ಕೆಲವು ವರ್ಷಗಳಿಂದ ಪ್ಲಾಸ್ಟರ್‌ ಆಫ್‌ ಪ್ಯಾರೀಶ್‌ ಗೆ ಬದಲು ದೇಶೀ ಮಣ್ಣಿನ ಗಣಪನನ್ನು ಮಾಡುತ್ತಾ ಅಬ್ಬರವಿಲ್ಲದೆ ಪರಿಸರಸ್ನೇಹಿ ಹಬ್ಬವನ್ನು ಉತ್ತೇಜಿಸುತಿದ್ದಾರೆ.


ಸ್ಥಳೀಯವಾಗಿ ದೊರೆಯುವ ವಸ್ತುಗಳನ್ನು ಬಳಸಿ, ಪರಿಸರಕ್ಕೆ ಮಾರಕವಾಗದಂತೆ ಎಚ್ಚರವಹಿಸಿ ಶಿವಕುಮಾರ ತಯಾರಿಸುವ ಪರಿಸರಸ್ನೇಹಿ ವಿಗ್ರಹಗಳು ಈಗ ಗಮನ ಸೆಳೆಯುತ್ತಿವೆ.ಕಡಿಮೆ ಪ್ರಮಾಣದ ಮಣ್ಣು, ಉಮಿ(ಜೊಳ್ಳುಭತ್ತ) ಜೊತೆಗೆ ಒಳಗಿದ ಬಿಳಿಹುಲ್ಲು ಬಳಸಿ ಶಿವಕುಮಾರ ಮಾಡಿವ ಪರಿಸರ ಸ್ನೇಹಿ ವಿಗ್ರಹಗಳು ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಪ್ರತಿಮೆಗಳಿಗೆ ಪರ್ಯಾಯವಾಗಿ ಹೆಸರುಮಾಡುತ್ತಿವೆ.

ಸದಾ ಹೊಸತನ್ನು ಯೋಚಿಸುವ ಶಿವಕುಮಾರ್‌ ನಿರ್ಮಿಸುವ ಆಕರ್ಷಕ ಮಣ್ಣಿನ ಮೂರ್ತಿಗಳಿಗೆ ಸ್ಥಳೀಯವಾಗಿ ಹೆಚ್ಚು ಬೇಡಿಕೆ.
ಈಗ ಇವರು ಪರಿಚಯಿಸಿರುವ ಪಿ.ಪಿ.ಗೆ ಪರ್ಯಾಯ ಸ್ಥಳೀಯ ವಿಧಾನದ ಪರಿಸರಸ್ನೇಹಿ ಗಣಪ ಎಲ್ಲರ ಆಕರ್ಷಣೆಯ ಕೇಂದ್ರಗಳಾಗಿವೆ.ಪರಿಸರಕ್ಕೆ ಪೂರಕವಾದ ಮಣ್ಣಿನ ಗಣೇಶ್‌ ವಿಗ್ರಹ ರಚಿಸುವ ಶಿವಕುಮಾರ ಹಬ್ಬ,ದೇವರ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಮಾಡಬಾರದೆನ್ನುವ ತಿಳುವಳಿಕೆ ಈ ಪರಿಸರ ಸ್ನೇಹಿ ಗಣಪನ ಸೃಷ್ಟಿಯ ಹಿಂದಿನ ವಿಶೇಶ ಎನ್ನುತ್ತಾರೆ.ಸರಳವಾಗಿ,ಮರುಬಳಕೆ ಮಾಡಬಹುದಾದ ಪರಿಸರಸ್ನೇಹಿ ಮೂರ್ತಿ ರಚಿಸುವ ಶಿವಕುಮಾರ ಹೊಸ ಕಲಾವಿದರಿಗೆ ಮಾದರಿಯಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *