ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!

ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗುಂಗಿನಿಂದ ಹೊರಬರದ ಜನರಿಗೆ ಇಲ್ಲೊಬ್ಬ ಕಲಾವಿದ ಪರಿಸರ ಪೂರಕ ಗಣಪತಿ ಮಾಡುವ ಪರ್ಯಾಯ ವಿಧಾನ ಪರಿಚಯಿಸಿದ್ದಾರೆ.

ಪರಿಸರ ಸ್ನೇಹಿ ಗಣಪ, ಪರಿಸರ ಪೂರಕ ಗೌರಿ-ಗಣೇಶ ಹಬ್ಬ ಎನ್ನುವ ವಿಚಾರಕ್ಕೆ ಈಗ ಹೆಚ್ಚಿನ ಪ್ರಚಾರ ದೊರೆಯುತ್ತಿದೆ. ಹಬ್ಬ,ದೇವರು-ಭಕ್ತಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಪರಿಸರಸ್ನೇಹಿ ಗಣೇಶ ಉತ್ಸವಕ್ಕೆ ಈಗ ಹೆಚ್ಚಿನ ಪ್ರಾಮುಖ್ಯತೆ.ಇಂಥ ಪರಿಸರ ಸ್ನೇಹಿ ಗಣಪನ ಬಗ್ಗೆ ಯೋಚಿಸುವ ಜನರಿಗೆ ಉತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರೊಬ್ಬರು ಸಂತೋಷದ ಸುದ್ದಿ ನೀಡಿದ್ದಾರೆ.
ಸಿದ್ಧಾಪುರದ ಕಲಾವಿದ ಶಿವಕುಮಾರ ಮೂರ್ತಿ ರಚನೆ ಮಾಡುವುದರಲ್ಲಿ ಸಿದ್ಧ ಹಸ್ತರು. ಕೃಷ್ಣ ಮೂರ್ತಿ, ಸರಸ್ವತಿ, ಲಕ್ಷ್ಮೀ, ಗೌರಿ ಗಣೇಶ್ ನ ಮಣ್ಣಿನ ಮೂರ್ತಿ ಮಾಡುವ ಕಲಾವಿದರಾದ ಇವರು ಕೆಲವು ವರ್ಷಗಳಿಂದ ಪ್ಲಾಸ್ಟರ್‌ ಆಫ್‌ ಪ್ಯಾರೀಶ್‌ ಗೆ ಬದಲು ದೇಶೀ ಮಣ್ಣಿನ ಗಣಪನನ್ನು ಮಾಡುತ್ತಾ ಅಬ್ಬರವಿಲ್ಲದೆ ಪರಿಸರಸ್ನೇಹಿ ಹಬ್ಬವನ್ನು ಉತ್ತೇಜಿಸುತಿದ್ದಾರೆ.


ಸ್ಥಳೀಯವಾಗಿ ದೊರೆಯುವ ವಸ್ತುಗಳನ್ನು ಬಳಸಿ, ಪರಿಸರಕ್ಕೆ ಮಾರಕವಾಗದಂತೆ ಎಚ್ಚರವಹಿಸಿ ಶಿವಕುಮಾರ ತಯಾರಿಸುವ ಪರಿಸರಸ್ನೇಹಿ ವಿಗ್ರಹಗಳು ಈಗ ಗಮನ ಸೆಳೆಯುತ್ತಿವೆ.ಕಡಿಮೆ ಪ್ರಮಾಣದ ಮಣ್ಣು, ಉಮಿ(ಜೊಳ್ಳುಭತ್ತ) ಜೊತೆಗೆ ಒಳಗಿದ ಬಿಳಿಹುಲ್ಲು ಬಳಸಿ ಶಿವಕುಮಾರ ಮಾಡಿವ ಪರಿಸರ ಸ್ನೇಹಿ ವಿಗ್ರಹಗಳು ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಪ್ರತಿಮೆಗಳಿಗೆ ಪರ್ಯಾಯವಾಗಿ ಹೆಸರುಮಾಡುತ್ತಿವೆ.

ಸದಾ ಹೊಸತನ್ನು ಯೋಚಿಸುವ ಶಿವಕುಮಾರ್‌ ನಿರ್ಮಿಸುವ ಆಕರ್ಷಕ ಮಣ್ಣಿನ ಮೂರ್ತಿಗಳಿಗೆ ಸ್ಥಳೀಯವಾಗಿ ಹೆಚ್ಚು ಬೇಡಿಕೆ.
ಈಗ ಇವರು ಪರಿಚಯಿಸಿರುವ ಪಿ.ಪಿ.ಗೆ ಪರ್ಯಾಯ ಸ್ಥಳೀಯ ವಿಧಾನದ ಪರಿಸರಸ್ನೇಹಿ ಗಣಪ ಎಲ್ಲರ ಆಕರ್ಷಣೆಯ ಕೇಂದ್ರಗಳಾಗಿವೆ.ಪರಿಸರಕ್ಕೆ ಪೂರಕವಾದ ಮಣ್ಣಿನ ಗಣೇಶ್‌ ವಿಗ್ರಹ ರಚಿಸುವ ಶಿವಕುಮಾರ ಹಬ್ಬ,ದೇವರ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಮಾಡಬಾರದೆನ್ನುವ ತಿಳುವಳಿಕೆ ಈ ಪರಿಸರ ಸ್ನೇಹಿ ಗಣಪನ ಸೃಷ್ಟಿಯ ಹಿಂದಿನ ವಿಶೇಶ ಎನ್ನುತ್ತಾರೆ.ಸರಳವಾಗಿ,ಮರುಬಳಕೆ ಮಾಡಬಹುದಾದ ಪರಿಸರಸ್ನೇಹಿ ಮೂರ್ತಿ ರಚಿಸುವ ಶಿವಕುಮಾರ ಹೊಸ ಕಲಾವಿದರಿಗೆ ಮಾದರಿಯಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *