ಕಾಟಾಚಾರಕ್ಕೆ ಸಚಿವರು ಭೇಟಿ ಕೊಟ್ಟು ಹೋಗಿದ್ದಾರೆ, ಅನಗತ್ಯವಾಗಿ ನಮ್ಮ ಮಕ್ಕಳ ಬಂಧನವಾಗಿದೆ: ಶಿವಮೊಗ್ಗದ ರಾಗಿಗುಡ್ಡ ಜನರ ಆಕ್ರೋಶ

ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ.

Madhu Bangarappa

ಶಿವಮೊಗ್ಗ: ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ.

ಮನೆಗಳಿಗೆ ಭೇಟಿ ನೀಡಿ ಸ್ಥಳೀಯರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ಸಂಬಂಧ ಪೊಲೀಸರು ಈವರೆಗೆ 24 ಎಫ್ಐಆರ್​ ದಾಖಲಿಸಿದ್ದಾರೆ ಎಂದರು. 

ಗಲಾಟೆ ಸಂದರ್ಭದಲ್ಲಿ ಗಂಭೀರ ಆಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದರು.

ಸಚಿವರದ್ದು ಕಾಟಾಚಾರ ಭೇಟಿ: ಇನ್ನು ಸಚಿವರು ನಿಜವಾಗಿಯೂ ಹೆಚ್ಚು ಹಾನಿಗೀಡಾದ ಭಾಗಗಳಿಗೆ ಭೇಟಿ ಕೊಟ್ಟಿಲ್ಲ, ಸಣ್ಣ ಪ್ರಮಾಣದಲ್ಲಿ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಜನರನ್ನು ಮಾತನಾಡಿಸಿ ಮಾಧ್ಯಮಗಳಿಗೆ ಫೋಟೋ, ವಿಡಿಯೊಕ್ಕೆ ಫೋಸ್ ನೀಡಿ ಪ್ರಚಾರ ಗಿಟ್ಟಿಸಿ ಕಾಟಚಾರಕ್ಕೆ ಬಂದು ಹೋಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರ ನಮ್ಮ ಕಷ್ಟ ಕೇಳುತ್ತಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ ಎಂದರು.

ರಾಗಿಗುಡ್ಡದಲ್ಲಿ ಮುಸ್ಲಿಂ ಮಹಿಳೆಯರ ತೀವ್ರ ಆಕ್ರೋಶ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ರಾಗಿಗುಡ್ಡದಲ್ಲಿ ಮುಸ್ಲಿಂ ಮಹಿಳೆಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಸಮಸ್ಯೆ ಆಲಿಸುತ್ತಿಲ್ಲ, ಅನಗತ್ಯವಾಗಿ ನಮ್ಮ ಮಕ್ಕಳ ಬಂಧನವಾಗಿದೆ. ಮೆರವಣಿಗೆ ವೇಳೆ ಕಲ್ಲು ತೂರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ. ನಮಗೆ ನ್ಯಾಯ ಬೇಕು, ನಾವೂ ಹಿಂದೂ ಮುಸ್ಲಿ ಎಲ್ಲರೂ ಒಂದೇ. ಗಣೇಶ ಹಬ್ಬಕ್ಕೆ ನಾವೆಲ್ಲರೂ ಸೇರಿ ಒಗ್ಗಟ್ಟಾಗಿ ಹಬ್ಬ ಆಚರಣೆ ಮಾಡ್ತೀವಿ. ವಿಚಾರ ದೊಡ್ಡದಾಗುತ್ತಿದ್ದಂತೆ ನಮ್ಮನ್ನ ಟಾರ್ಗೆಟ್​​ ಮಾಡಲಾಗುತ್ತಿದೆ. ಈ ವೇಳೆ ಸಚಿವರು ಮಧ್ಯ ಪ್ರವೇಶಿಸಿ ನಮ್ಮ ಸಮಸ್ಯೆ ಆಲಿಸಬೇಕಿದೆ ಎಂದು ಮಹಿಳೆಯರು ಆಕ್ರೋಶ ಹೊರ ಹಾಕಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *