ಕಲ್ಲಲ್ಲರಳಿದ ಕಾಡಸುಮ ನಂದಿನಿ…..

ಪ್ರತಿಯೊಬ್ಬ ಸಾಧಕರು ನೆನಪಿಡಬೇಕಾದ ಮೂರು ಅಂಶಗಳೆAದರೆ ‘ಮೊದಲು ಅವಮಾನ, ನಂತರ ಅನುಮಾನ ತದನಂತರವೇ ಸನ್ಮಾನ ‘ ಇವುಗಳನ್ನು ಮನದಲ್ಲಿಟ್ಟುಕೊಂಡು ಮುಂದುವರೆದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ನಿದರ್ಶನವೆಂದರೆ ಇತ್ತೀಚೆಗೆ ಚೀನಾದ ಹಾಂಗ್ ಝೌ ನಲ್ಲಿ ನಡೆದ ಏಷ್ಯಾನ್ ಗೇಮ್ಸ್ ನಲ್ಲಿ ೮೦೦ ಮೀ ಹೆಪ್ಟಾಥ್ಲಾನ್ ನಲ್ಲಿ ಕಂಚಿನ ಪದಕ ಪಡೆದ ಆಟಗಾರ್ತಿ ಬಳ್ಳಾರಿಯ ಹೆಮ್ಮೆಯ ಪುತ್ರಿ ನಂದಿನ ಅಗಸರ.


ಇವರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಸಮೀಪದ ಶ್ರೀನಗರ ಕ್ಯಾಂಪ್ ಎಂಬ ಪುಟ್ಟ ಗ್ರಾಮದಲ್ಲಿ ತಂದೆ ಯಲ್ಲಪ್ಪ ತಾಯಿ ಅಯ್ಯಮ್ಮರ ಮೊದಲ ಮಗಳಾಗಿ ೭ನೇ ಆಗಸ್ಟ್ ೨೦೦೩ ರಲ್ಲಿ ಜನಿಸಿದರು.
ಕಡು ಬಡತನದಲ್ಲಿ ಹುಟ್ಟಿದ ನಂದಿನಿ ಬಾಲ್ಯದ ದಿನಗಳಲ್ಲಿ ತೀವ್ರತರವಾದ ಸಂಕಷ್ಟಗಳನ್ನು ಅನುಭವಿಸಿದ್ದಾರೆ. ತನ್ನ ತಂದೆಯು ಮಾಡಿದ ಸಾಲವನ್ನು ತೀರಿಸಲಾಗದೇ ಹೊಟ್ಟೆಪಾಡಿಗೆಗಾಗಿ ಹೈದ್ರಾಬಾದ್ ಗೆ ದುಡಿಯಲು ೩ ತಿಂಗಳ ನಂದಿನಿಯನ್ನು ಕರೆದುಕೊಂಡು ಇಡೀ ಕುಟುಂಬ ವಲಸೆ ಬರುತ್ತದೆ. ಆರಂಭದಲ್ಲಿ ತಂದೆ ಯಲ್ಲಪ್ಪ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಸುಮಾರು ವರ್ಷಗಳ ಕಾಲ ಕೆಲಸ ಮಾಡುತ್ತಾರೆ. ಆಗ ಅಲ್ಲಿನ ಸಹೃದಯರ ಒಲುಮೆಯಿಂದಾಗಿ ಅಂಗಳದಲ್ಲಿ ಆಟವಾಡುತ್ತಿದ್ದ ೭ ವರ್ಷದ ನಂದಿನಿಯವರನ್ನು ಕರೆದುಕೊಂಡು ಹೋಗಿ ಸೈನಿಕ (ಕೆವಿ ವಿದ್ಯಾಲಯ) ಶಾಲೆಗೆ ಸೇರಿಸುತ್ತಾರೆ. ಅಲ್ಲಿಂದಲೇ ನಂದಿನಿಯವರ ಬಾಳಿನ ಬೆಳಕು ಬೆಳಗಲಾರಂಭಿಸಿತು.


ನಂದಿನಿಯ ಮೊದಲ ಪಿ.ಟಿ.ಟೀಚರ್ ಮುತ್ತಯ್ಯ ರೆಡ್ಡಿ(ಬೊಲಾರಾಮ್) ಮತ್ತು ನಾಗರಾಜ ರವರ ಗರಡಿಯಲ್ಲಿ ೫ನೇ ತರಗತಿಯವರೆಗೂ ಪುಟ್ಬಾಲ್, ೧೦೦ ಮೀ ಓಟ, ಹೈಜಂಪ್, ಲಾಂಗ್ ಜಂಪ್ ಮತ್ತು ಹರ್ಡಲ್ಸ್ ಆಟಗಳಲ್ಲಿ ಪಳಗಿದರು.ಆದರೆ ಹರ್ಡಲ್ಸ್ ಮತ್ತು ಓಟದಲ್ಲಿ ಅತೀವವಾಗಿ ತೋರುತ್ತಿದ್ದ ಆಸಕ್ತಿ ಮತ್ತು ಶ್ರದ್ಧೆಯನ್ನು ಕಂಡು ಇವರನ್ನು ಮತ್ತು ಇವರ ತಂದೆ ತಾಯಿಯನ್ನು ಮನವೊಲಿಸಿ ತೆಲಂಗಾಣದ ಆಥ್ಲೀಟ್ ಹೆಡ್ ಕೋಚ್, ೨೦೧೬ರ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ನಾಗಪುರಿ ರಮೇಶರ ಬಳಿಗೆ ಕರೆತರುತ್ತಾರೆ.
ಈಗಾಗಲೇ ಖ್ಯಾತ ಆಥ್ಲೀಟ್ ಗಳಾದ ಪೂವಮ್ಮ, ದ್ಯುತಿ ಚಂದ್, ಸತ್ತಿಗೀತಾ, ದೀಪ್ತಿ ಮುಂತಾದ ರಾಷ್ಟ್ರದ ಪ್ರಮುಖ ಆಟಗಾರರ ಗುರುವಾಗಿದ್ದ ಇವರು ನಂದಿನಿಯವರ ಕ್ರೀಡಾಸಕ್ತಿಗೆ ಬೆರಗಾಗಿ ಅವರನ್ನು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುವನ್ನಾಗಿಸಲು ಪಣ ತೊಟ್ಟರು. ಅಂತೆಯೇ ಅತ್ತ ಮಗಳು ನಂದಿನಿ ಆಟಕ್ಕಾಗಿ ಹಠ ತೊಟ್ಟರೇ , ಇತ್ತ ಮಗಳ ಒಲಂಪಿಕ್ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ತಂದೆ ಯಲ್ಲಪ್ಪ ಸಿಕಿಂದರಬಾದ್ ನ ಕಪ್ರಾನ್ ನಲ್ಲಿ ಸ್ವಂತ ಟೀ ಅಂಗಡಿಯನ್ನು ತೆರೆದು ಹಗಲಿರುಳು ದುಡಿಯಲು ಮುಂದಾದರು.


ಅಪ್ಪ ಅಮ್ಮನ ಕಷ್ಟಗಳನ್ನು ಕಣ್ಣಾರೆ ಕಂಡ ನಂದಿನಿ ಗುರುಗಳ ಸೂಕ್ತ ಮಾರ್ಗದರ್ಶನದಲ್ಲಿ ವಲಯ, ವಿಭಾಗೀಯ, ರಾಜ್ಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಜಯಭೇರಿಯನ್ನು ಕಾಣುತ್ತಾ ಸಾಗಿದರು. ೨೦೨೦ ರಲ್ಲಿ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ಯುತ್ ಗೇಮ್ಸ್ ಲ್ಲಿ ಭಾಗವಹಿಸಿ ಅಂಡರ್ ೧೭ ರ ಲಾಂಗ್ ಜಂಪ್ ನಲ್ಲಿ ಮತ್ತು ೧೦೦ ಮೀ ಓಟದಲ್ಲಿ ಗೆದ್ದು ತೆಲಂಗಾಣಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟರು.
ಅಲ್ಲಿಂದ ಎಲ್ಲಿಯೂ ನಿಲ್ಲದ ನಂದಿನಿ ೨೦೨೧ರ ಜೂನ್ ನಲ್ಲಿ ನಡೆದ ಪಟಿಯಾಲದ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದರು.ಅಲ್ಲದೇ ಮರುವರ್ಷ ೨೦೨೨ ರ ಆಗಸ್ಟ್ ನಲ್ಲಿ ಪ್ಯಾಸ್ಕುವಲ್ ಗೆರೆರೋ ಸ್ಟೇಡಿಯಂ, ಕ್ಯಾಲಿ, ಕೊಲಂಬಿಯಾದಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ U೨೦ ಚಾಂಪಿಯನ್ ಶಿಪ್ ನಲ್ಲಿ ೧೦೦ ಮೀ ಹರ್ಡಲ್ಸ್ ನಲ್ಲಿ ಏಳನೇ ಸ್ಥಾನ ಪಡೆದರು. ಇನ್ನು ಉತ್ತಮ ಪ್ರಯತ್ನದೊಂದಿಗೆ ೨೦೨೨ ರ ಅಕ್ಟೋಬರ್ ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ೧೦೦ ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಗೆದ್ದರು. ಹಠ ಬಿಡದ ನಂದಿನಿ ೨೦೨೩ ರ ಸೆಪ್ಟೆಂಬರ್ ೩೦ ರಂದು ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ೨೦೨೨ ರ ಏಷ್ಯನ್ ಗೇಮ್ಸ್ ನಲ್ಲಿ ೮೦೦ಮೀ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿ ಕಂಚಿನ ಪದಕ ಪಡೆಯುವ ಮೂಲಕ ಇಡೀ ದೇಶದ ಕೀರ್ತಿ ಪತಾಕೆಯನ್ನು ವಿಶ್ವದೆಲ್ಲೆಡೆ ಹಾರುವಂತೆ ಮಾಡಿದ್ದಾರೆ.


ನಂದಿನಿಯವರ ಈ ಯಶೋಗಾಥೆಯ ಹಿಂದೆಯೂ ಎಷ್ಟೋ ಸಾರಿ ಉತ್ತಮವಾದ ಶೂಗಳಿಲ್ಲದೇ ಬರಿಗಾಲಲ್ಲಿ ಪ್ರಾಕ್ಟಿಸ್ ಮಾಡಿದ್ದು, ಇವರ ಕಷ್ಟ ನೋಡದೆ ಕೆಲವು ಸಲ ಗುರುಗಳು ಶೂ ಕೊಡಿಸಿದ ಉದಾಹರಣೆ ಹಾಗೂ ಮಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ನೋಡುವ ಇಚ್ಛೆಯಿಂದ ಮನೆಯಲ್ಲಿನ ಚೂರುಪಾರು ಬಂಗಾರವನ್ನೆಲ್ಲಾ ಒತ್ತೆ ಇಟ್ಟಿದ್ದು, ಕುಟುಂಬಸ್ಥರೆಲ್ಲಾ ಎಷ್ಟೋ ಸಲ ಉಪವಾಸ ಮಲಗಿದ್ದು ಹೀಗೆ ಅನೇಕ ಸಂಕಷ್ಟಗಳ ಸರಮಾಲೆಗಳಿರುವುದನ್ನು ಕೇವಲ ಒಡನಾಡಿಗಳು (ಯಲ್ಲಪ್ಪ ಮಡಿವಾಳ,ಪ್ರವೀಣ್,ನಾಗರಾಜ) ಮಾತ್ರ ಅರಿತಿದ್ದಾರೆ.
ಇಂದಿಗೂ ತೆಲಂಗಾಣವನ್ನು ಪ್ರತಿನಿಧಿಸಿ ಆಟವಾಡುವ ನಂದಿನಿ ಅಗಸರ ಮತ್ತು ಅವರ ಕುಟುಂಬದವರು ತುಂಬಾ ಅಚ್ಚುಕಟ್ಟಾಗಿ ಕನ್ನಡವನ್ನು ಮಾತಾನಾಡುತ್ತಿದ್ದಾರೆ. ಅಲ್ಲದೇ ಹಬ್ಬ ಹರಿದಿನಗಳಲ್ಲಿ ರಾರಾವಿಯ ಯಲ್ಲಮ್ಮನ ಜಾತ್ರೆಗೆ ಕುಟುಂಬಸ್ಥರೆಲ್ಲಾ ಬರುವುದನ್ನು ಬಿಟ್ಟಿಲ್ಲ. ಹೀಗೆ ಅನೇಕ ಕಷ್ಟ ಕಾರ್ಪಣ್ಯದ ನಡುವೆ ಕಾಡಿನ ಸುಮವೊಂದು ನಾಡು ತಲುಪಿ ಅಲ್ಲಿನ ಅದಿ ದೇವತೆ ಕ್ರೀಡಾಮಾತೆಯ ಕೊರಳ ಹಾರ ಆದ ಈ ಸಾಧಕಿಯ ಕಥೆ ಮುಂದಿನ ಯುವ ಪೀಳಿಗೆಯ ಬಾಳಿನಲ್ಲಿ ಸ್ಪೂರ್ತಿ ತುಂಬಲಿ , ಉತ್ತಮ ಪ್ರತಿಭೆಗಳಿಗೆ ಸರ್ಕಾರದ ಸೂಕ್ತ ಸೌಲಭ್ಯಗಳು ಸಿಗಲಿ ಎಂಬುದೇ ನನ್ನೀ ಲೇಖನದ ಆಶಯ.

ಆರ್.ಪಿ.ಮಂಜುನಾಥ್. ಬಿ.ಜಿ.ದಿನ್ನೆ

ಕವಿತೆಗಳ ಮೌಲ್ಯ ಕೆ.ಬಿ. ವೀರಲಿಂಗನಗೌಡ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *