ಇಲ್ಲೂ ಮುಂದುವರಿದ ಪ್ರದೀಪ್‌ ಈಶ್ವರ್‌ ಡ್ರಾಮಾ….!

ದೊಡ್ಮನೆಯಿಂದ ಪ್ರದೀಪ್ ಈಶ್ವರ್ ಔಟ್: ಬಿಗ್ ಬಾಸ್ ಗೆ ತೆರಳಿದ್ದಕ್ಕೆ ಶಾಸಕರನ್ನು ವಜಾಗೊಳಿಸುವಂತೆ ದೂರು!

ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್

Pradeep Eshwar

ಬೆಂಗಳೂರು: ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್.  ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಹೋದದ್ದು ಅತಿಥಿಯಾಗಿ ಎನ್ನುವುದು ಈಗ ಗೊತ್ತಾಗಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಎರಡನೇ ದಿನ ಎಲ್ಲರಿಗೂ ಬಿಗ್‌ ಸರ್‌ಪ್ರೈಸ್‌ ಒಂದು ಕಾದಿತ್ತು. ಅಲ್ಲೊಬ್ಬ ಹೊಸ ವ್ಯಕ್ತಿಯ ಆಗಮನವಾಗಿತ್ತು. ಎಲ್ಲರೂ ಅವರು ಸಹ ಬಿಗ್‌ ಬಾಸ್‌ ಸ್ಪರ್ಧಿಯೇ ಎಂದು ಭಾವಿಸಿದ್ದರು. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿ ಮಾಡಿತ್ತು.

ಪ್ರದೀಪ್‌ ಈಶ್ವರ್‌ ಮನೆಗೆ ಬಂದು, ಸ್ಪರ್ಧಿಗಳ ಜೊತೆ ಮಾತನಾಡುತ್ತಿದ್ದರು. ಎಲ್ಲರನ್ನೂ ತಾವು ಸ್ಪರ್ಧಿ ಎಂದೇ ನಂಬಿಸಿದ್ದರು. ಆದರೆ ಕೆಲ ಹೊತ್ತಿನ ಬಳಿಕ ಬಿಗ್‌ ಬಾಸ್‌ ಮಾತನಾಡಿದರು. ಪ್ರದೀಪ್‌ ಈ ಸೀಸನ್‌ನ ಮೊದಲ ಅತಿಥಿ ಎಂದು ತಿಳಿಸಿದರು.

ಆ ಬಳಿಕ ಶಾಸಕ ಪ್ರದೀಪ್‌ ಈಶ್ವರ್‌ ಸ್ಪರ್ಧಿಗಳಿಗೆಂದು ಸಿಹಿ ತಂದಿದ್ದರು. ಆದರೆ ಅದನ್ನು ಪಡೆಯಲು ಕಂಟೆಸ್ಟಂಟ್ಸ್‌ ಗೆ ಟಾಸ್ಕ್‌ ಒಂದನ್ನು ಆಡಿಸಿದರು. ಆ ಬಳಿಕ ಸ್ಪರ್ಧಿಗಳಿಗೆ ಸಿಹಿ ನೀಡಿದರು. ನಂತರ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ ಆದೇಶದಂತೆ ಮನೆಯಿಂದ ಹೊರಬಂದರು.

ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿದ್ದರ ಹಿನ್ನೆಲೆಯಲ್ಲಿ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್​ಗೆ ದೂರು ನೀಡಿದೆ. ಪ್ರದೀಪ್‌ ಈಶ್ವರ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಸೇವಾ ಸಂಸ್ಥೆಯು ಆಗ್ರಹಿಸಿದೆ. (kpc)


https://samajamukhi.net/2020/06/27/crab-story-of-kannesh/?fbclid=IwAR11aU1pJlUxaRabRrKL6Rus0Xgmz6r92fuXJJXCRkjSKRG2RtdP9jphM2Q

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *