ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಹಿರಿಯ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಎಡ ಬುದ್ಧಿಜೀವಿಗಳ ಕಪಿಮುಷ್ಠಿಯಲ್ಲಿದ್ದಾರೆ ಎಂದು ಮಂಗಳವಾರ ಆರೋಪಿಸಿದರು.

senior BJP leader Vishweshwara Hegde Kageri

ಹುಬ್ಬಳ್ಳಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಹಿರಿಯ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಎಡ ಬುದ್ಧಿಜೀವಿಗಳ ಕಪಿಮುಷ್ಠಿಯಲ್ಲಿದ್ದಾರೆ ಎಂದು ಮಂಗಳವಾರ ಆರೋಪಿಸಿದರು.

ನಗರದಲ್ಲಿ ಪೀಪಲ್ಸ್‌ ಫೋರಂ ಫಾರ್‌ ಕರ್ನಾಟಕ ಎಜ್ಯುಕೇಷನ್‌ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ಪರ್ಧಾತ್ಮಕ ಜಗತ್ತಿಗೆ ನಮ್ಮ ವಿದ್ಯಾರ್ಥಿಗಳು ಸಿದ್ಧರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸಿದ್ದರು. ಇದನ್ನು ರಾಜಕೀಯ ಕಾರಣಕ್ಕಾಗಿ ವಿರೋಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಎಸ್‌ಇಪಿ ಜಾರಿಗೊಳಿಸುವುದಾಗಿ ಹೇಳುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌ ಮುಖಂಡರ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿಗೊಳಿಸಲಿ’ ಎಂದು ಹೇಳಿದರು.

‘ಬಡವರು ಹಾಗೂ ಸಾಮಾನ್ಯ ವರ್ಗದ ಮಕ್ಕಳು ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧರಾಗಬಾರದು ಎನ್ನುವ ಕಾರಣದಿಂದ ಕಾಂಗ್ರೆಸ್‌ ಸರ್ಕಾರ ಷಡ್ಯಂತ್ರ ರಚಿಸಿದೆ. ಸರ್ಕಾರಿ ಶಾಲೆಗಳಲ್ಲಿ ಎನ್‌ಇಪಿ ಜಾರಿಗೆ ಅವಕಾಶ ನೀಡುತ್ತಿಲ್ಲ. ಎನ್‌ಇಪಿಯಲ್ಲಿ ಯಾವ ಅಂಶ ಸರಿಯಿಲ್ಲ ಎನ್ನುವುದನ್ನು ಅವರು ಹೇಳುತ್ತಿಲ್ಲ. ಮೋದಿ ಸರ್ಕಾರ ರೂಪಿಸಿದೆ ಎನ್ನುವ ಒಂದೇ ಕಾರಣಕ್ಕಾಗಿ ಅದನ್ನು ತೆಗೆದುಹಾಕಲು ಹೊರಟಿದ್ದಾರೆ. ಹಾಗಾದರೆ, ಇವರು ಜಾರಿಗೆ ತರಲು ಹೊರಟಿರುವ ಎಸ್‌ಇಪಿ– ಸೋನಿಯಾ ಶಿಕ್ಷಣ ನೀತಿಯೇ’ ಎಂದು ಪ್ರಶ್ನಿಸಿದರು.

‘ನಮ್ಮಲ್ಲಿ ಕೀಳರಿಮೆ ಮೂಡಿಸುವಂತಹ, ಯಾರೋ ಬರೆದಿದ್ದ ಪಾಠಗಳನ್ನು ನಾವು ಓದಬೇಕಾಗಿಲ್ಲ. ನಮ್ಮ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಮೂಡಿಸುವ ಶಿಕ್ಷಣ ಬೇಕು. ಹಿಂದಿನ ನಮ್ಮ (ಬಿಜೆಪಿ) ಸರ್ಕಾರದಲ್ಲಿ ಅಳವಡಿಸಲಾಗಿದ್ದ ಹೆಗ್ಗಡೆವಾರ್‌, ಚಕ್ರವರ್ತಿ ಸೂಲಿಬೆಲೆ, ಗಣೇಶ ಅವರ ಪಾಠಗಳನ್ನು ರಾಜ್ಯ ಸರ್ಕಾರ ತೆಗೆದುಹಾಕಿದೆ. ಯಾವುದೇ ಸಿದ್ಧತೆ ಮಾಡಿಕೊಳ್ಳದೆ ಪಠ್ಯಕ್ರಮ ಪರಿಷ್ಕರಣೆ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿರುವುದು ದುರಂತ. ಇದರ ವಿರುದ್ಧ ವಿದ್ಯಾರ್ಥಿಗಳ ಆಂದೋಲನ ರೂಪಿಸುತ್ತೇವೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಅವರು ಎಡಪಂಥೀಯ ಬುದ್ಧಿಜೀವಿಗಳ ಕಪಿಮುಷ್ಟಿಯಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಬಯಕೆಯಂತೆ ಪಠ್ಯಕ್ರಮ ಬದಲಾಯಿಸಿದ್ದಾರೆ. ಶಿಕ್ಷಣ ತಜ್ಞರ ಸಲಹೆ ಪಡೆಯದೇ, ಪಾಲಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಆಲಿಸದೆ ಪಠ್ಯಗಳನ್ನು ಬದಲಾಯಿಸಿದ್ದಾರೆ. ಈ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ದುರಂತ’ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *