ವಾಲಿಮೋಕ್ಷ ತಾಳಮದ್ದಳೆ ಸಂಪನ್ನ

ಭಕ್ತಿ ಭಾವವನ್ನು ಪ್ರಚುರ ಪಡಿಸುವ ಕಲೆಯಾಗಿ ಯಕ್ಷಗಾನ ತಾಳಮದ್ದಳೆಯು ನಮ್ಮ ನಡುವೆ ಬೆಳೆದು ಬಂದ ಒಂದು ಜೀವಂತ ಕಲೆ. ಮಾತಿನ ಮೂಲಕವಾಗಿಯೇ ನಾಟಕವನ್ನು ಕಟ್ಟುವ ಶಕ್ತಿ ಇದ್ದಕ್ಕಿದೆ. ಸಮಾಜದ ಕೆಡುಕುಗಳನ್ನು ತಿದ್ದುವಲ್ಲಿ ಇದರ ಪಾತ್ರ ಬಹು ದೊಡ್ಡದು. ಎಂದು ಐಸೂರು ವೀರಭದ್ರ ಸಹಿತ ಗೌರಿ ಶಂಕರ ದೇವಾಲಯದ ಮೊಕ್ತೇಸರರಾದ ರಾಮನಾಥ ಹೆಗಡೆ ತಲೆಕೇರಿ ಹೇಳಿದರು. ಶರನ್ನವರಾತ್ರಿಯ ಸಂದರ್ಭದಲ್ಲಿ ಇಟಗಿಯ ಕಲಾಭಾಸ್ಕರದವರು ಹಮ್ನಿಕೊಂಡ ತಾಳಮದ್ದಳೆ  ಪಂಚಕ-2023ರ ಅಂಗವಾಗಿ ಎರಡನೇ ದಿನದ ಸಭಾ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಲೆಯನ್ನು ನಮ್ಮ ಬದುಕಿನ ಅಂಗವಾಗಿ ಸ್ವೀಕರಿಸಿ ಮುನ್ನಡೆಯೋಣ ಎಂದೂ ಅಭಿಪ್ರಾಯ ಒಟ್ಟರು. ವಾಜಗೋಡು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಮ್.ಆಯ್.ನಾಯ್ಕ ಕೆಳಗಿನಸಸಿ, ಈರ ನರಸ ಗೌಡ ಕೆಸವಿನಮನೆ, ಗಜಾನನ ಭಟ್ಟ ದಾನಮಾವು ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಇಟಗಿ ಮಹಾಬಲೇಶ್ವರ  ಭಟ್ಟ ಸ್ವಾಗತಿಸಿದರು. ನಂತರ ಕವಿ ಪಾರ್ತಿಸುಬ್ಬ ವಿರಚಿತ “ವಾಲಿಮೋಕ್ಷ” ಎಂಬ ತಾಳಮದ್ದಳೆ ಪ್ರದರ್ಶನವು ನಡೆಯಿತು. ಸೃಜನ ಗಣೇಶ ಹೆಗಡೆ (ಭಾಗವತಿಕೆ), ಮಂಜುನಾಥ ಹೆಗಡೆ ಕಂಚಿಮನೆ (ಮದ್ದಳೆ), ನಾಗಭೂಷಣ ರಾವ್ ಹೆಗ್ಗೋಡು (ಚಂಡೆ) ಹಿಮ್ಮೇದಳಲ್ಲಿ ರಂಜಿಸಿದರು. ವಾಲಿಯಾಗಿ ರಾಧಾಕೃಷ್ಣ ಕಲ್ಚಾರ್, ಸುಗ್ರೀವನಾಗಿ ಸರ್ಪಂಗಳ ಈಶ್ವರ ಭಟ್ಟ, ಶ್ರೀರಾಮನಾಗಿ ಪವನ್ ಕಿರಣ್ಕೆರೆ, ತಾರೆಯಾಗಿ ಇಟಗಿ ಮಹಾಬಲೇಶ್ವರ ಭಟ್ ಪ್ರಸಂಗವನ್ನು ಕಳೆಗಟ್ಟಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *