ದಿನೇಶ್‌ ಅಮ್ಮಿನಮಟ್ಟು ಸೇರಿ ೬೮ ಜನರಿಗೆ ರಾಜ್ಯೋತ್ಸವ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.

Soamanath, Bank janardhan And dingri nagaraj

ಬೆಂಗಳೂರು: ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.

ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಫೈನಲ್ ಮಾಡಲಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ಪುರಸ್ಕೃತರು ಮತ್ತು ಪ್ರಶಸ್ತಿ  ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.

ಮಂಗಳವಾರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರವು ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆ, ಯಕ್ಷಗಾನದಲ್ಲಿ ಕೆ.ಲೀಲಾವತಿ ಬೈಪಾಡಿತ್ತಾಯ, ಸಿನಿಮಾ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ, ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ.ನಾಗಣ್ಣ, ಸುಬ್ಬು ಹೊಲೆಯಾರ್, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‌ಮಟ್ಟು, ಮಾಯಾ ಶರ್ಮ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ.

ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಭೂಮಿ ದಾನ ನೀಡಿದ್ದ ಕುಣಿಕೇರಿ ಗ್ರಾಮದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಅರ್ಜಿ ಹಾಕದಿದ್ದರೂ ಸರ್ಕಾರ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದು ಅಜ್ಜಿಯ ಬೆಟ್ಟದಷ್ಟು ಖುಷಿಗೆ ಕಾರಣವಾಗಿದ್ದು ’ಮಾಧ್ಯಮದವರು ಹೇಳಿದ ಮೇಲೆ ಪ್ರಶಸ್ತಿ ಬಂದ ವಿಚಾರ ನಂಗೆ ತಿಳಿಯಿತು. ಸರ್ಕಾರವೇ ಗುರುತಿಸಿ ಪ್ರಶಸ್ತಿ ಕೊಡುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಹಳಷ್ಟು ಸಂತೋಷವಾಗಿದೆ. ಈ ಪ್ರಶಸ್ತಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಅರ್ಪಿಸುತ್ತೇನೆ’ ಎಂದು ಹೇಳುವಾಗ ಅಜ್ಜಿಯ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

ಶಿವಮೊಗ್ಗದ ಕರ್ನಾಟಕ ಸಂಘ, ಬೆಂಗಳೂರಿನ ಮಿಥಿಕ್ ಸೊಸೈಟಿ, ದಾವಣಗೆರೆಯ ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ ಸೇರಿದಂತೆ ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆಯಾಗಿದೆ.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆಗಳಿಗೆ ಈ ವರ್ಷ ಹೆಚ್ಚುವರಿಯಾಗಿ ಪ್ರಶಸ್ತಿ ನೀಡಲು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ತೀರ್ಮಾನಿಸಿದೆ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ನು ಇಸ್ರೋ ಸಂಸ್ಥೆ ಚೇರ್ಮನ್ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ 12 ಮಹಿಳೆಯರು, ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತದೆ. ಇನ್ನುಳಿದಂತೆ ಸಿನಿಮಾ ಕ್ಷೇತ್ರದಿಂದ ಹಿರಿಯ ಪೋಷಕ ನಟರಾದ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ್ ಅವರಿಗೆ ಹಾಗೂ ನ್ಯಾಯಾಂಗ ಕ್ಷೇತ್ರದಿಂದ ಜಸ್ಟೀಸ್ ವಿ. ಗೋಪಾಲಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *