ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ

ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ‌ನುಡಿದರು.
ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ ವಿನಾಯಕ ಹಾಗೂ ಲಲಿತಾ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಂಡ‌ ಗಾಯತ್ರೀ ಜಪ ಯಜ್ಞದಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ‌ ನುಡಿದರು.


ಕೊರೋನಾದಂತಹ ಸಮಸ್ಯೆ ಮನುಷ್ಯನಿಗೆ ಕಾಡುತ್ತಿದೆ. ಮರಕ್ಕೆ ಎಲೆ ಚುಕ್ಕೆ ರೋಗ ಬಂದಿದೆ. ಪರಿಹಾರ ಸಿಕ್ಕಿಲ್ಲ. ದೇವರೇ ಕಾಪಾಡಬೇಕು ಎಂಬ ಸ್ಥಿತಿಯಲ್ಲಿದೆ. ಪೂಜಿಸುವ ಗೋವುಗಳಿಗೆ ಚರ್ಮಗಂಟು ರೋಗ ಬಂದಿದೆ. ಅಧರ್ಮ ಹೆಚ್ಚಿದ್ದು ರೋಗಗಳಿಗೆ ಮೂಲ‌ ಕಾರಣ. ಉತ್ತರ ಕಾಣದ ಸಮಸ್ಯೆ, ರೋಗಗಳಿಗೆ ಅಧರ್ಮ ಕಾರಣ. ಇದರ ನಿವಾರಣೆಗೆ ಗಾಯತ್ರೀ ಮಾತೆ ಉಪಾಸನೆ ‌ಮಾಡಬೇಕು ಎಂದರು.
ಅಶುದ್ಧವಾದ ಮನಸ್ಸು ಅನೇಕ‌ ಸಮಸ್ಯೆಗಳಿಗೆ ಕಾರಣ ಆಗುತ್ತಿದೆ. ಕುಟುಂಬ ಕಲಹಗಳು, ಪತಿ ‌ಪತ್ನಿಯರ ವಿರಸಗಳು ಹೆಚ್ಚಾಗುತ್ತಿದೆ. ಪತಿ ಪತ್ನಿಯರೇ ದೂರವಾದರೆ ಕುಟುಂಬ ವ್ಯವಸ್ಥೆಗೇ‌ ಧಕ್ಕೆ ಆಗಲಿದೆ ಹೆಚ್ಚಾಗಿದೆ. ನಮ್ಮ ಮನಸ್ಸು ಶುದ್ದವಾಗಿದ್ದರೆ ಇಂಥ‌ ಕಲಹಗಳು ಇರುವದಿಲ್ಲ. ಮನಸ್ಸು ಶುದ್ದಿಗೆ, ರೋಗ ರುಜಿನೆಗಳ ನಿವಾರಣೆಗೆ, ಆರೋಗ್ಯಕ್ಕೆ, ಭಗವಂತನ ಸಾಕ್ಷಾತ್ಕಾರಕ್ಕೆ ಇಂಥ ಗಾಯತ್ರೀ ಮಾತೆ ಉಪಾಸನೆ ಸದಾ ಆಗಬೇಕು ಎಂದರು.


ಗಾಯತ್ರೀ ಎಂದರೆ ಬ್ರಹ್ಮ ವಿದ್ಯೆ. ಬ್ರಹ್ಮ ಸಾಕ್ಷಾತ್ಕಾರಕ್ಕೆ ಗಾಯತ್ರಿ ಉಪಾಸನೆ ಮಾಡಬೇಕು. ಬ್ರಹ್ಮ ವಿದ್ಯೆಯ ಮೂಲಕ ಬ್ರಹ್ಮ ಸಾಕ್ಷಾತ್ಕಾರ ಮಾಡಿಕೊಳ್ಳಬೇಕು. ಪರಮಾತ್ಮನ ಅನುಭವಕ್ಕೆ ಗಾಯತ್ರೀ ಉಪಾಸನೆ ಮಾಡಬೇಕು ಎಂದರು.
ಗಾಯತ್ರೀ ಉಪಾಸನೆ ನಿತ್ಯವೂ ಆಗಬೇಕಾದ ಅನುಷ್ಠಾನ. ಉಪನೀತರು ಮಾಡಬೇಕಾದ ಮೂಲಭೂತ ಕರ್ತವ್ಯ ಗಾಯತ್ರೀ ಉಪಾಸನೆ ಎಂದು ಹೇಳಿದರು.
ದೇವಸ್ಥಾನದ ಪ್ರಧಾನ ವಿಶ್ವಸ್ಥ ವಿನಾಯಕ ಹೆಗಡೆ ಕಲಗದ್ದೆ, ರಷ್ಮಿ ಹೆಗಡೆ ದಂಪತಿಗಳು ಶ್ರೀಗಳ ಪಾದ ಪೂಜೆ ನಡೆಸಿದರು.
ಈ ವೇಳ ಗಾಯತ್ರೀ‌ ಮಹಾಸತ್ರದ ಎರಡನೇ ದಿನದ ಪೂರ್ಣಾಹುತಿಯಲ್ಲಿ ಶ್ರೀಗಳು ಪಾಲ್ಗೊಂಡರು. ಮಾತೆಯರು ಲಲಿತಾ ಸಹಸ್ರನಾಮ ಅರ್ಚನೆ‌ ನಡೆಯಿತು.

ಗಾಯತ್ರೀ ಅನುಷ್ಠಾನ ಮಾಡುವ ಕ್ರಮ ಮನೆ ಮನೆಗಳಲ್ಲಿ ಹೆಚ್ಚಬೇಕು. ಆ ದಿನಗಳು ಮರಳಿ ಬರಬೇಕು. ಸಂಧ್ಯಾ ವಂದನೆ ಮನೆ ಮನೆಗಳಲ್ಲಿ ನಡೆಯಲಿ. ಕ್ಷೇತ್ರದಲ್ಲಿ ಕೂಡ ಶಕ್ತಿ ಹೆಚ್ಚಲಿ, ಗಾಯತ್ರೀ ಮಹಾ ಸತ್ರದಲ್ಲಿ ಪಾಲ್ಗೊಂಡವರಿಗೂ ದೇವರ ಅನುಗ್ರಹ ಸಿಗಲಿ-ಸ್ವರ್ಣವಲ್ಲಿ ಶ್ರೀ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *