ವಿನಾಕಾರಣ ಸಹಕಾರಿ ಸಂಸ್ಥೆ ಗಳಿಗೆ ತೊಂದರೆ ಕೊಟ್ಟರೆ ಹುಷಾರ್….

ಸಿದ್ದಾಪುರ: ತಾಲೂಕಿನ ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಸೂಪರ್ ಮಾರ್ಕೆಟ್ ಗೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಚಾಲನೆ ನೀಡಿದರು.


ಉದ್ಘಾಟನೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಜಿಲ್ಲೆಯ ಸಹಕಾರಿ ಕ್ಷೇತ್ರ ಇಡೀ ದೇಶಕ್ಕೆ ಮಾದರಿಯಾಗಿದೆ. ಸಹಕಾರಿ ಸಂಘಗಳಿಂದ‌ ರೈತರ ಸ್ವಾವಲಂಭಿ ಬದುಕಿಗೆ ದಾರಿಯಾಗುತ್ತಿದೆ. ಇಲಾಖೆಯ ಅಧಿಕಾರಿಗಳು ಇಲ್ಲದ ಕಾರಣ ಹೇಳಿ ಸಂಘಗಳಿಗೆ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದ ಅವರು, ಕ್ಯಾದಗಿ ಸೊಸೈಟಿಯಿಂದ ಈ ಭಾಗದ ರೈತರಿಗೆ ಹೆಚ್ಚಿನ ಆರ್ಥಿಕ ಸಹಾಯ ದೊರಕಲಿ. ರೈತರ ಬೇಡಿಕೆಗಳನ್ನು ಪೂರೈಸುತ್ತಿರುವ ಸಂಘ ಇನ್ನು ಹೆಚ್ಚಿನ ಅಭಿವೃದ್ಧಿ ಕಾಣಲು ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರ ತುಂಬಾ ಅಗತ್ಯ. ಜಿಲ್ಲೆಯ ಸಹಕಾರಿ ಕ್ಷೇತ್ರ ಪಾರದರ್ಶಕವಾಗಿ ಅತ್ಯುತ್ತಮ ಕೆಲಸ ಮಾಡುತ್ತಿವೆ. ಸಹಕಾರ ಇಲಾಖೆಯ ಅಧಿಕಾರಿಗಳಿಂದ ಸಂಘಗಳಿಗೆ ತೊಂದರೆಯಾದರೆ ಸಹಿಸುವುದಿಲ್ಲ. ಎರಡು ಮೂರು ವರ್ಷಗಳಿಂದ ಬಾಧಿಸುತ್ತಿರುವ ಎಲೆ ಚುಕ್ಕಿ ಹಾಗೂ ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಔಷಧಿ ಕಂಪನಿಗಳ ಮಾಲಕರನ್ನು ಕರೆದು ರೈತರ ತೋಟಕ್ಕೆ ತೆರಳಿ ಅಧ್ಯಯನ ಮಾಡಿ ಸೂಕ್ತ ಔಷಧಿ ನೀಡಿ ಎಂದು ಸೂಚಿಸಿದ್ದೇನೆ. ಆದಷ್ಟು ಬೇಗ ಈ ರೋಗ ನಿವಾರಣೆಗೆ ಔಷಧಿ ಕಂಡು ಹಿಡಿಯಲಾಗುವುದು ಎಂದರು.


ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹಾದ್ರಿಮನೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಈ ವೇಳೆ ಕ್ಯಾದಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಮಕೃಷ್ಣ ನಾಯ್ಕ, ಸೋವಿನಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಾ ಗೌಡ, ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಸೋವಿನಕೊಪ್ಪ ಸೊಸೈಟಿ ಅಧ್ಯಕ್ಷ ಬಿ.ಆರ್.ನಾಯ್ಕ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಕೆ.ಜಿ.ನಾಗರಾಜ, ಕೆ.ಕೆ.ನಾಯ್ಕ ಸುಂಕತ್ತಿ, ಸಹಕಾರಿ ಸಂಘಗಳ ಉಪನಿಬಂಧಕ ಮಂಜುನಾಥ, ಸಂಘದ ನಿರ್ದೇಶಕರಾದ ಪಿ.ಬಿ.ನಾಯ್ಕ, ರವಿ ನಾಯ್ಕ ಹೆಗ್ಗಾರಕೈ, ವಿ.ಕೆ.ಗೌಡ, ಗಣಪತಿ ನಾಯ್ಕ, ಲಕ್ಷ್ಮಣ ನಾಯ್ಕ, ಭಾರತಿ ಭಟ್, ವಿಜಯ ನಾಯ್ಕ, ನಾರಾಯಣ ಹಸ್ಲರ್, ಸುಬ್ರಾಯ ಹೆಗಡೆ, ಕೆ.ಪಿ.ರಘುಪತಿ, ಗೌರ್ಯ ನಾಯ್ಕ, ರಾಮಚಂದ್ರ ಹೆಗಡೆ, ಮುಖ್ಯ ಕಾರ್ಯನಿರ್ವಾಹಕ ಎಂ.ಎನ್.ಗೌಡ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಗಣೇಶ ಭಟ್ ಸ್ವಾಗತಿಸಿದರು. ನಿರ್ದೇಶಕ ಪಿ.ಬಿ.ನಾಯ್ಕ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *