ಬರ ಪರಿಹಾರವಾಗಿ ರೂ.324 ಕೋಟಿ ಬಿಡುಗಡೆ ಮಾಡಿದ ಸರ್ಕಾರ: ಯಾವ ಜಿಲ್ಲೆಗೆ ಎಷ್ಟು?

ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) 324 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

File photo

ಬೆಂಗಳೂರು: ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) 324 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಎಂದು ಈ ಹಿಂದೆ ರಾಜ್ಯ ಸರ್ಕಾರ (ಘೋಷಣೆ ಮಾಡಿತ್ತು. ಅಲ್ಲದೆ, ಕೇಂದ್ರ ಸರ್ಕಾರದ ಬಳಿ ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಪರಿಹಾರ ನೀಡುವಂತೆಯೂ ಮನವಿ ಮಾಡಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ಒಂದೂ ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸರ್ಕಾರ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರವಾಗಿ 324 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ನಗರ-7.50 ಕೋಟಿ ರೂ., ಬೆಂಗಳೂರು ಗ್ರಾಮಾಂತರ-6 ಕೋಟಿ ರೂ., ರಾಮನಗರ-7.50 ಕೋಟಿ ರೂ., ಕೋಲಾರ-9 ಕೋಟಿ ರೂ., ಚಿಕ್ಕಬಳ್ಳಾಪುರ-9 ಕೋಟಿ ರೂ., ತುಮಕೂರು-15 ಕೋಟಿ ರೂ., ಚಿತ್ರದುರ್ಗ-9 ಕೋಟಿ ರೂ., ದಾವಣಗೆರೆ-9 ಕೋಟಿ ರೂ., ಚಾಮರಾಜನಗರ-7.50 ಕೋಟಿ ರೂ., ಮೈಸೂರು-13.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಮಂಡ್ಯ-10.5 ಕೋಟಿ ರೂ., ಬಳ್ಳಾರಿ-7.50 ಕೋಟಿ ರೂ., ಕೊಪ್ಪಳ-10.50 ಕೋಟಿ ರೂ., ರಾಯಚೂರು-9 ಕೋಟಿ ರೂ., ಕಲಬುರಗಿ-16.50 ಕೋಟಿ ರೂ., ಬೀದರ್-4.50 ಕೋಟಿ ರೂ., ಬೆಳಗಾವಿ-22.50 ಕೋಟಿ ರೂ., ಬಾಗಲಕೋಟೆ-13.50 ಕೋಟಿ ರೂ., ವಿಜಯಪುರ-18 ಕೋಟಿ ರೂ., ಗದಗ-10.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಹಾವೇರಿ-12 ಕೋಟಿ ರೂ., ಧಾರವಾಡ-12 ಕೋಟಿ ರೂ., ಶಿವಮೊಗ್ಗ-10.50 ಕೋಟಿ ರೂ., ಹಾಸನ-12 ಕೋಟಿ ರೂ., ಚಿಕ್ಕಮಗಳೂರು-12 ಕೋಟಿ ರೂ., ಕೊಡಗು-7.50 ಕೋಟಿ ರೂ., ದಕ್ಷಿಣ ಕನ್ನಡ-3 ಕೋಟಿ ರೂ., ಉಡುಪಿ-4.50 ಕೋಟಿ ರೂ., ಉತ್ತರ ಕನ್ನಡ-16.50 ಕೋಟಿ ರೂ., ಯಾದಗಿರಿ-9 ಕೋಟಿ ರೂ. ಹಾಗೂ ವಿಜಯನಗರ ಜಿಲ್ಲೆಗೆ 9 ಕೋಟಿ ರೂ. ಸೇರಿದಂತೆ ಒಟ್ಟು 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಈ ಅನುದಾನವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಪೇಯಿಸ್ ರಸೀದಿ ಮೂಲಕ ಡ್ರಾ ಮಾಡಿ, ತಮ್ಮ ಡಿಡಿಆರ್‍ಎಫ್ ಪಿಡಿ ಖಾತೆಗೆ ಜಮಾ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಜೂನ್‌ನಲ್ಲಿ ರಾಜ್ಯದಲ್ಲಿ ಶೇ.56ರಷ್ಟು ಮಳೆ ಕೊರತೆಯಾಗಿದ್ದು, ಜುಲೈನಲ್ಲಿ ಶೇ.29 ಹಾಗೂ ಆಗಸ್ಟ್‌ನಲ್ಲಿ ಶೇ.73ರಷ್ಟು ಕೊರತೆಯಾಗಿದೆ. ಕರ್ನಾಟಕದಲ್ಲಿ ಕಳೆದ 125 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *