ಸೋಲಿಗೂ ಹೆದರಿಲ್ಲ… ಗೆಲುವಿಗೂ ಬೀಗಿಲ್ಲ…. mla sirsi bheemanna naik interview

ಶಾಸಕರು,ಜನಪ್ರತಿನಿಧಿಯಾಗುವುದು ವಿರಳ ಅವಕಾಶ ಅಂಥ ಅವಕಾಶ ಪಡೆಯುವವರು ಅಸಾಮಾನ್ಯರಾಗಿರುವುದು ಸಾಮಾನ್ಯ. ಇಂಥ ವಿಶೇಶ ಶಾಸಕರಲ್ಲಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಭೀಮಣ್ಣ ನಾಯ್ಕ ಒಬ್ಬರು.

ಭಾವ ಎಸ್‌ ಬಂಗಾರಪ್ಪನವರ ರಾಜಕೀಯ ಗರಡಿಯಲ್ಲಿ ಬೆಳೆದುಬಂದಿರುವ ಶಾಸಕ ಭೀಮಣ್ಣ ನಾಯ್ಕ ಕಳೆದ ೪೦ ವರ್ಷಗಳಿಂದ ಉತ್ತರ ಕನ್ನಡ ರಾಜಕಾರಣದಲ್ಲಿದ್ದಾರೆ.


ನಾಲ್ಕೈದು ದಶಕಗಳ ರಾಜಕೀಯ ಅನಭವದ ಭೀಮಣ್ಣ ನಾಯ್ಕ ಈ ವಿಧಾನಸಭೆಯನ್ನು ಮೊಟ್ಟಮೊದಲಿಗೆ ಪ್ರವೇಶಿಸಿದ್ದಾರೆ. ವಯಸ್ಸು ೬೦ ದಾಟಿದರೂ ಉತ್ತಮ ದೈಹಿಕ ಸದೃಢತೆ ಕಾಪಾಡಿಕೊಂಡಿರುವ ಭೀಮಣ್ಣ ಉತ್ತರ ಕನ್ನಡ ಜಿಲ್ಲೆಯ ಯಶಸ್ವಿ ಉದ್ಯಮಿ, ಅನೇಕ ಹೋಟೆಲ್‌ ಗಳು ಸಂಸ್ಥೆಗಳನ್ನು ಹೊಂದಿರುವ ಇವರ ಆಸಕ್ತಿಯ ಕ್ಷೇತ್ರ ಕೃಷಿ. ಜಿಲ್ಲೆಯ ದೊಡ್ಡ ಅಡಿಕೆ ಬೆಲೆಗಾರರಾಗಿರುವ ಬೀಮಣ್ಣ ನಾಯ್ಕ ರಾಜಕೀಯ,ಉದ್ಯಮಗಳ ಜೊತೆಗೆ ಪ್ರತಿದಿನ ತೋಟದ ಕೆಲಸ ನೋಡಿಕೊಳ್ಳುವ ಪ್ರಗತಿಪರ ಕೃಷಿಕ.


ಎಲ್ಲದಕ್ಕೂ ಶಾಸಕರ ಭಾವ ಮಾಜಿ ಮುಖ್ಯಮಂತ್ರಿ ಎಸ್.‌ ಬಂಗಾರಪ್ಪ ಸ್ಫೂರ್ತಿ ಮತ್ತು ಪ್ರೇರಣೆ ಎನ್ನುವ ಶಾಸಕರು ಶಿರಸಿಯ ಪ್ರತಿಷ್ಠಿತ ಸಂಸ್ಥೆ ಟಿ.ಎಸ್.ಎಸ್.ನ ನಂ೧ ವಿಕ್ರಿದಾರರು ಶಿರಸಿ ಎಂ.ಇ.ಎಸ್.‌ ಶಿವಮೊಗ್ಗ ಶರಾವತಿ ಡೆಂಟಲ್‌ ಕಾಲೇಜು,ಶಕುಂತಲಾ ಶಿಕ್ಷಣ ಸಂಸ್ಥೆಗಳ ಪ್ರಮುಖರು.
ಕೃಷಿಯಲ್ಲಿ ಮಿಶ್ರಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡಿರುವ ಇವರು ನೂರಾರು ಎಕರೆಯಲ್ಲಿ ಅಡಿಕೆ ಬೆಳೆಯುತ್ತಾರೆ. ಎಂಥಾ ಒತ್ತಡದ ನಡುವೆಯೂ ಪ್ರತಿದಿನ ಜಮೀನು ತೋಟಕ್ಕೆ ತಪ್ಪದೆ ಹೋಗುವ ಇವರ ತೋಟದಲ್ಲಿ ಸಾಂಬಾರ ಬೆಳೆಗಳಾದ ವೆನಿಲ್ಲಾ, ಕಾಳುಮೆಣಸು,ವಿಳ್ಯದೆಲೆಗಳು ನಳನಳಿಸುತ್ತವೆ. ಸಾಂಪ್ರದಾಯಿಕ ಕೃಷಿ ಕುಟುಂಬದ ಇವರಿಗೆ ಅಪ್ಪನಿಂದ ಬಂದ ಆಸ್ತಿ ಎಂದರೆ ಕೃಷಿ ಜಮೀನು ಮತ್ತು ಕೃಷಿ ಆಸಕ್ತಿ.


ರಾಜಕೀಯ, ಉದ್ಯಮ ಕ್ಷೇತ್ರದ ಜೊತೆಗೆ ಕೃಷಿಗೆ ವಿಶೇಶ ಸಮಯ ನೀಡುವ ಇವರು ತಮ್ಮ ಅನುಭವದಿಂದ ಕೃಷಿ ತಜ್ಞರಾಗಿ ಹೆಸರುಮಾಡಿದ್ದಾರೆ. ರಾಜ್ಯ ವಿಧಾನಸಭೆಯ ಸದಸ್ಯರಲ್ಲಿ ಕೃಷಿ ಸಾಧನೆ ಮೂಲಕ ಗುರುತಿಸಿಕೊಂಡ ಬೆರಳೆಣಿಕೆಯ ಜನರಲ್ಲಿ ಇವರ ಹೆಸರು ಮೊದಲೆಂದರೆ ಆಶ್ಚರ್ಯವಲ್ಲ.ಕಳೆದ ನಾಲ್ವತ್ತು ವರ್ಷಗಳಿಂದ ರಾಜಕೀಯ, ಉದ್ಯಮ, ಕೃಷಿ ಕ್ಷೇತ್ರಗಳಲ್ಲಿ ಛಾಪು ಮೂಡಿಸಿರುವ ಶಿರಸಿ ಶಾಸಕರು ರೈತ ಪರ ಎನ್ನುವುದೂ ಅವರ ವೈಶಿಷ್ಟ್ಯವೇ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *