ಮೂವರಿಗೆ ಸಿಗದ ಬೇಲ್‌ & ಮೂವರಿಗೆ ಜಾಮೀನು ಮಂಜೂರಿ!

ಉತ್ತರ ಕನ್ನಡ ಜಿಲ್ಲೆಯಾದ್ಯಂತ ದೊಡ್ಡ ಸುದ್ದಿ ಮಾಡಿದ್ದ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಿಯಾಗಿದ್ದು ಇನ್ನೊಂದು ಪ್ರಕರಣದ ಮೂವರು ಆರೋಪಿಗಳಿಗೆ ಜೈಲಿನ ಊಟ ಖಾತ್ರಿಯಾಗಿದೆ.

ಒಂದು ವಾರದ ಈಚೆಗೆ ಕನ್ನಡ ಪರ ಹೋರಾಟಗಾರ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕಿಯೆಂದು ಅನುಮಾನಾಸ್ಪದವಾಗಿ ವ್ಯವಹರಿಸುತಿದ್ದ ಇಬ್ಬರೊಂದಿಗೆ ಒಬ್ಬ ಮಹಿಳೆ ಸೇರಿ ಒಟ್ಟೂ ಮೂವರನ್ನು ಬಂಧಿಸಲಾಗಿತ್ತು.

ಈ ಮೂವರಲ್ಲಿ ಒಬ್ಬ ಹೊಸ ಆರೋಪಿಯಾಗಿದ್ದರೆ ಇಬ್ಬರು ಆರೋಪ, ಅಪರಾಧಗಳ ಹಿನ್ನೆಲೆಯವರು ಎನ್ನಲಾಗಿತ್ತು. ಈ ಮೂವರಿಗೆ ಒಂದು ವಾರ ಕಳೆದರೂ ನ್ಯಾಯಾಲಯ ಜಾಮೀನು ನೀಡಿಲ್ಲ ಎನ್ನಲಾಗಿದೆ.

ಈ ಪ್ರಕರಣದ ನಂತರ ಮತ್ತೊಂದು ಅನುಮಾನಾಸ್ಫದ ಘಟನೆಯಲ್ಲಿ ಬಯಲುಸೀಮೆಯ ಮೂವರನ್ನು ಬಂಧಿಸಲಾಗಿತ್ತು. ಇದರಲ್ಲಿ ಚತುರ ವ್ಯಕ್ತಿಯೊಬ್ಬ ಇಬ್ಬರು ವ್ಯಕ್ತಿಗಳಿಗೆ ಸೇನೆಯ ಸಮವಸ್ತ್ರ ಹಾಕಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಾ ಸಿದ್ಧಾಪುರ ಪೊಲೀಸರಿಗೆ ಸೆರೆಯಾಗಿದ್ದರು. ಈ ಪ್ರಕರಣ ಕುತೂಹಲಕರವಾಗಿದ್ದು ಮೃತ ಸೈನಿಕನ ಮನೆಗೆ ಹೋಗಿ ಅವರ ಸ್ಮಾರಕದ ಚಿತ್ರ ತೆಗೆದು ಸೇನೆಯವರಂತೆ ನಟಿಸಿದ ವ್ಯಕ್ತಿ ಓರ್ವ ಮಹಿಳೆ ಸೇರಿ ಇಬ್ಬರನ್ನು ಸೇನೆಯ ಸಮವಸ್ತ್ರದಲ್ಲಿ ಕರೆತಂದಿದ್ದ!

ಮೊದಲ ಪ್ರಕರಣದಲ್ಲಿ ವೇಷಧಾರಿಗಳು ಮಾಡುವ ಕೆಲಸ, ಉದ್ದೇಶ ಸ್ಫಷ್ಟವಿದ್ದುದಲ್ಲದೆ ಆ ತಂಡವನ್ನು ಸಾರ್ವಜನಿಕರೇ ಮುಂದೆ ನಿಂತು ಪೊಲೀಸರಿಗೆ ಒಪ್ಪಿಸಿದ್ದರು. ಎರಡನೇ ಪ್ರಕರಣದಲ್ಲಿ ಮೂವರ ಉದ್ದೇಶ ಏನೆಂಬುದೇ ಸ್ಪಷ್ಟವಿಲ್ಲದೆ ಮಾಜಿ ಸೈನಿಕರು ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *