ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರ ಟ್ರಸ್ಟನ ರಜತ ರಜತಮಹೋತ್ಸವ


ಸಿದ್ದಾಪುರ.
ತಾಲೂಕಿನ ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರ ಟ್ರಸ್ಟನ ರಜತ ಮಹೋತ್ಸವ, ನೂತನ ಕಾರ್ಯಾಲಯ,ಸಭಾಭವನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ರಜತಮಹೋತ್ಸವ ಉದ್ಘಾಟಿಸಿದ ನಬಾರ್ಡ ಬೆಂಗಳುರಿನ ಸಿ.ಜಿ.ಎಂ.ಟಿರಮೇಶ ಮಾತನಾಡಿ ಗ್ರಾಮೀಣ ಭಾಗದಲ್ಲಿ ಉತ್ತಮ ರೀತಿಯ ಸಂಘಟನೆಯನ್ನು ಮಾಡಿ ೨೫ ವರ್ಷಗಳ ಕಾಲ ಕ್ರಿಯಾಶೀಲವಾಗಿ,ಸಕ್ರೀಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಈ ಸಂಸ್ಥೆಯ ಬಗ್ಗೆ ಸಂತೋಷವೆನ್ನಿಸುತ್ತದೆ.ಕಳೆದ ೨೦ ವರ್ಷಗಳಿಂದ ಈ ಸಂಸ್ಥೆಯ ಪರಿಚಯವಿದ್ದು ತನ್ನ ಕಾರ್ಯಸಾಧನೆಗಾಗಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಶಸ್ತಿಯನ್ನು ಈ ಸಂಸ್ಥೆ ಪಡೆದಿರುವದು ಶಾಘ್ಲನೀಯ ಎಂದರು.


ಸಭಾಭವನ ಉದ್ಘಾಟಿಸಿದ ಬೆಂಗಳೂರಿನ ನಾಬ್‌ಫೀನ್ಸ ಸಂಸ್ಥೆ ಎಂ.ಡಿ. ಡಾ|ದಿವಾಕರ ಹೆಗಡೆ ನಬಾರ್ಡ ಗುರುತಿಸಿದ ನಮ್ಮ ಸಂಸ್ಥೆಗೆ ಈ ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಭೇಟಿ ನೀಡಿ ಅಂದಿನಿಂದ ನಿರಂತರವಾಗಿ ನಮ್ಮ ಕಚೇರಿಯೊಡನೆ ಸಂಪರ್ಕ ಇರಿಸಿಕೊಂಡು ವ್ಯವಹರಿಸುತ್ತ ಬಂದಿರುವದು ಪ್ರಶಂಸನೀಯ ಎಂದರು.ಕೆನರಾ ಬ್ಯಾಕ್ ಎ.ಜಿ.ಎಮ್.ನಂದಕಿಶೋರ ಹಾಗೂ ನಿವೃತ್ತ ಡಿ.ಜಿ.ಎಮ್.ಎಂ.ಎಸ್.ಅರುಣಕುಮಾರ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಮಾಜಿ ಮಂಡಲ ಪ್ರಧಾನ ಶಂಕರಭಟ್ಟ ಮಸ್ಗುತ್ತಿ ವಹಿಸಿದ್ದರು.


ಈ ಸಂದರ್ಭದಲ್ಲಿ ಉತ್ತಮ ಕೃಷಿಕ ವೆಂಕಟರಮಣ ಐ.ಜೋಶಿ ಕಂಚ್ಗುಳಿ, ಸಂರ್ಸತೆಯ ಹಿಂದಿನ ಪದಾಧಿಕಾರಿಳನ್ನು,ಸಾಧಕ ಸದಸ್ಯರನ್ನು ಅಭಿನಂದಿಸಲಾಯಿತು. ರಶ್ಮಿ ಹೆಗಡೆ ಗಣಪತಿ ಸ್ತುತಿಯನ್ನು,ರೈತಗೀತೆಯನ್ನುಎಂ.ಆರ್.ಹೆಗಡೆ ಹೊಸ್ಮನೆ, ರಜತಗೀತೆಯನ್ನು ರಾಮಚಂದ್ರ ಹೆಗಡೆ ತಂಗರ‍್ಮನೆ ಹಾಡಿದರು.
ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಬಾಳೇಸರ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.ಅಶೋಕ ಹೆಗಡೆ ಶಮೇಮನೆ ವರದಿವಾಚಿಸಿದರು. ಟ್ರಸ್ಟಿ ಜಿ.ಪಿ.ಹೆಗಡೆ ಕಲ್ಮನೆ ವಂದಿಸಿದರು.


ರಜತಮಹೋತ್ಸವ ಸಮಾರೋಪ
ಸಿದ್ದಾಪುರ
ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರದ ರಜತ ಮಹೋತ್ಸವ,ಸೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಸಮಾರೋಪ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಎಂ.ಹೆಗಡೆ ಚಿಟಮಾಂವ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸೀತಾರಾಮ ಹೆಗಡೆ ನಿರ್ನಳ್ಳಿ,ಸುಬ್ರಾಯ ಮತ್ತಿಹಳ್ಳಿ,ಸಿ.ಎನ್.ಹೆಗಡೆ ತಂಗರ‍್ಮನೆ ಪಾಲ್ಗೊಂಡಿದ್ದರು.
ಸಂಜೆ ಶಿರಸಿಯ ಯಕ್ಷಕಲಾ ಸಂಗಮ ತಂಡದವರಿಂದ ವೀರವರ್ಮ ವಿಜಯ ಯಕ್ಷಗಾನ ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ಹಲೋ ನಮ್ಮೂರ್ ಮೊಬೈಲ್ ಕ್ಯಾಲೆಂಡರ್ ನ್ನು ಬಿ.ಎಸ್.ಎನ್.ಎಲ್.ಜಿ.ಟಿ.ಓ.ಶಿವಪ್ರಸಾದ ಭಟ್ಟ ಬಿಡುಗಡೆಗೊಳಿಸಿದರು.ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಜಿ.ಎಮ್.ಹೆಗಡೆ ಬಾಳೇಸರ ಅವರನ್ನು ಸನ್ಮಾನಿಸಲಾಯಿತು.


ಮಧ್ಯಾಹ್ನ ನಡೆದ ವಿಚಾರ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ|ಬಿ.ಪಿಸತೀಶ,ಸೀತಾರಾಮ ಹೆಗಡೆ ನಿರ್ನಳ್ಳಿ,ಮಹಾಬಲೇಶ್ವರ ಬಿ.ಎಸ್.ಪಾಲ್ಗೊಂಡಿದ್ದರು. ಅತಿಥಿಗಳಾಗಿ ಕೆಡಿಸಿಸಿ ಬ್ಯಾಂಕ್ ಎಂ.ಡಿ.ಆರ್.ಜಿ.ಭಾಗ್ವತ್,ಟಿ.ಎಂ.ಎಸ್.ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ,ಕೆ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತಿç,ಎ.ಡಿ.ಸೊಸೈಟಿ ಅಧ್ಯಕ್ಷ ಭಾಸ್ಕರ ಹೆಗಡೆ,ಅಘನಾಶಿನಿ ಸ್ಫೈಸಿಸ್ ಪ್ರೊಡ್ಯೂಸ್ ಕಂಪನಿ ಇಓ ಎಸ್.ಆರ್.ಹೆಗಡೆ ಕುಂಬಾರಕುಳಿ,ಬಿ.ಎಸ್.ಎನ್.ಎಲ್.ಜಿ.ಟಿ.ಒ.ಶಿವಪ್ರಸಾದ ಭಟ್ಟ,ಊರಿನ ಹಿರಿಯ ಎನ್.ಎಂ.ಹೆಗಡೆ ಬಾಳೇಸರ ಪಾಲ್ಗೊಂಡಿದ್ದರು.‌

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *