ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರ ಟ್ರಸ್ಟನ ರಜತ ರಜತಮಹೋತ್ಸವ


ಸಿದ್ದಾಪುರ.
ತಾಲೂಕಿನ ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರ ಟ್ರಸ್ಟನ ರಜತ ಮಹೋತ್ಸವ, ನೂತನ ಕಾರ್ಯಾಲಯ,ಸಭಾಭವನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ರಜತಮಹೋತ್ಸವ ಉದ್ಘಾಟಿಸಿದ ನಬಾರ್ಡ ಬೆಂಗಳುರಿನ ಸಿ.ಜಿ.ಎಂ.ಟಿರಮೇಶ ಮಾತನಾಡಿ ಗ್ರಾಮೀಣ ಭಾಗದಲ್ಲಿ ಉತ್ತಮ ರೀತಿಯ ಸಂಘಟನೆಯನ್ನು ಮಾಡಿ ೨೫ ವರ್ಷಗಳ ಕಾಲ ಕ್ರಿಯಾಶೀಲವಾಗಿ,ಸಕ್ರೀಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಈ ಸಂಸ್ಥೆಯ ಬಗ್ಗೆ ಸಂತೋಷವೆನ್ನಿಸುತ್ತದೆ.ಕಳೆದ ೨೦ ವರ್ಷಗಳಿಂದ ಈ ಸಂಸ್ಥೆಯ ಪರಿಚಯವಿದ್ದು ತನ್ನ ಕಾರ್ಯಸಾಧನೆಗಾಗಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಶಸ್ತಿಯನ್ನು ಈ ಸಂಸ್ಥೆ ಪಡೆದಿರುವದು ಶಾಘ್ಲನೀಯ ಎಂದರು.


ಸಭಾಭವನ ಉದ್ಘಾಟಿಸಿದ ಬೆಂಗಳೂರಿನ ನಾಬ್‌ಫೀನ್ಸ ಸಂಸ್ಥೆ ಎಂ.ಡಿ. ಡಾ|ದಿವಾಕರ ಹೆಗಡೆ ನಬಾರ್ಡ ಗುರುತಿಸಿದ ನಮ್ಮ ಸಂಸ್ಥೆಗೆ ಈ ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಭೇಟಿ ನೀಡಿ ಅಂದಿನಿಂದ ನಿರಂತರವಾಗಿ ನಮ್ಮ ಕಚೇರಿಯೊಡನೆ ಸಂಪರ್ಕ ಇರಿಸಿಕೊಂಡು ವ್ಯವಹರಿಸುತ್ತ ಬಂದಿರುವದು ಪ್ರಶಂಸನೀಯ ಎಂದರು.ಕೆನರಾ ಬ್ಯಾಕ್ ಎ.ಜಿ.ಎಮ್.ನಂದಕಿಶೋರ ಹಾಗೂ ನಿವೃತ್ತ ಡಿ.ಜಿ.ಎಮ್.ಎಂ.ಎಸ್.ಅರುಣಕುಮಾರ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಮಾಜಿ ಮಂಡಲ ಪ್ರಧಾನ ಶಂಕರಭಟ್ಟ ಮಸ್ಗುತ್ತಿ ವಹಿಸಿದ್ದರು.


ಈ ಸಂದರ್ಭದಲ್ಲಿ ಉತ್ತಮ ಕೃಷಿಕ ವೆಂಕಟರಮಣ ಐ.ಜೋಶಿ ಕಂಚ್ಗುಳಿ, ಸಂರ್ಸತೆಯ ಹಿಂದಿನ ಪದಾಧಿಕಾರಿಳನ್ನು,ಸಾಧಕ ಸದಸ್ಯರನ್ನು ಅಭಿನಂದಿಸಲಾಯಿತು. ರಶ್ಮಿ ಹೆಗಡೆ ಗಣಪತಿ ಸ್ತುತಿಯನ್ನು,ರೈತಗೀತೆಯನ್ನುಎಂ.ಆರ್.ಹೆಗಡೆ ಹೊಸ್ಮನೆ, ರಜತಗೀತೆಯನ್ನು ರಾಮಚಂದ್ರ ಹೆಗಡೆ ತಂಗರ‍್ಮನೆ ಹಾಡಿದರು.
ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಬಾಳೇಸರ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.ಅಶೋಕ ಹೆಗಡೆ ಶಮೇಮನೆ ವರದಿವಾಚಿಸಿದರು. ಟ್ರಸ್ಟಿ ಜಿ.ಪಿ.ಹೆಗಡೆ ಕಲ್ಮನೆ ವಂದಿಸಿದರು.


ರಜತಮಹೋತ್ಸವ ಸಮಾರೋಪ
ಸಿದ್ದಾಪುರ
ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರದ ರಜತ ಮಹೋತ್ಸವ,ಸೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಸಮಾರೋಪ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಎಂ.ಹೆಗಡೆ ಚಿಟಮಾಂವ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸೀತಾರಾಮ ಹೆಗಡೆ ನಿರ್ನಳ್ಳಿ,ಸುಬ್ರಾಯ ಮತ್ತಿಹಳ್ಳಿ,ಸಿ.ಎನ್.ಹೆಗಡೆ ತಂಗರ‍್ಮನೆ ಪಾಲ್ಗೊಂಡಿದ್ದರು.
ಸಂಜೆ ಶಿರಸಿಯ ಯಕ್ಷಕಲಾ ಸಂಗಮ ತಂಡದವರಿಂದ ವೀರವರ್ಮ ವಿಜಯ ಯಕ್ಷಗಾನ ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ಹಲೋ ನಮ್ಮೂರ್ ಮೊಬೈಲ್ ಕ್ಯಾಲೆಂಡರ್ ನ್ನು ಬಿ.ಎಸ್.ಎನ್.ಎಲ್.ಜಿ.ಟಿ.ಓ.ಶಿವಪ್ರಸಾದ ಭಟ್ಟ ಬಿಡುಗಡೆಗೊಳಿಸಿದರು.ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಜಿ.ಎಮ್.ಹೆಗಡೆ ಬಾಳೇಸರ ಅವರನ್ನು ಸನ್ಮಾನಿಸಲಾಯಿತು.


ಮಧ್ಯಾಹ್ನ ನಡೆದ ವಿಚಾರ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ|ಬಿ.ಪಿಸತೀಶ,ಸೀತಾರಾಮ ಹೆಗಡೆ ನಿರ್ನಳ್ಳಿ,ಮಹಾಬಲೇಶ್ವರ ಬಿ.ಎಸ್.ಪಾಲ್ಗೊಂಡಿದ್ದರು. ಅತಿಥಿಗಳಾಗಿ ಕೆಡಿಸಿಸಿ ಬ್ಯಾಂಕ್ ಎಂ.ಡಿ.ಆರ್.ಜಿ.ಭಾಗ್ವತ್,ಟಿ.ಎಂ.ಎಸ್.ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ,ಕೆ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತಿç,ಎ.ಡಿ.ಸೊಸೈಟಿ ಅಧ್ಯಕ್ಷ ಭಾಸ್ಕರ ಹೆಗಡೆ,ಅಘನಾಶಿನಿ ಸ್ಫೈಸಿಸ್ ಪ್ರೊಡ್ಯೂಸ್ ಕಂಪನಿ ಇಓ ಎಸ್.ಆರ್.ಹೆಗಡೆ ಕುಂಬಾರಕುಳಿ,ಬಿ.ಎಸ್.ಎನ್.ಎಲ್.ಜಿ.ಟಿ.ಒ.ಶಿವಪ್ರಸಾದ ಭಟ್ಟ,ಊರಿನ ಹಿರಿಯ ಎನ್.ಎಂ.ಹೆಗಡೆ ಬಾಳೇಸರ ಪಾಲ್ಗೊಂಡಿದ್ದರು.‌

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *