ಶಿವರಾಮ್‌ ಹೆಬ್ಬಾರ್‌, ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಪಕ್ಕಾ…

ಬಿಜೆಪಿ ಸಭೆಗೆ ಚಕ್ಕರ್, ಕಾಂಗ್ರೆಸ್ ಔತಣಕೂಟಕ್ಕೆ ಹಾಜರ್: ‘ಕೈ’ ಹಿಡಿಯಲು ಸೋಮಶೇಖರ್, ಹೆಬ್ಬಾರ್ ಸಜ್ಜು!

ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯಾಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ST Somashekar And Shivaram hebbar

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯಾಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್‌ ಅವರು ಭಾಗವಹಿಸಿದರು. ಈಗಾಗಲೇ ಬಿಜೆಪಿ ಸಭೆಗಳಿಂದ ದೂರ ಉಳಿದಿರುವ ಅವರು, ಮತ್ತೆ ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ.

ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೇಳುವ ನೆಪದಲ್ಲಿ ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಈ ಇಬ್ಬರೂ ಶಾಸಕರು, ಬುಧವಾರ ರಾತ್ರಿ ಪಕ್ಷದ ಶಾಸಕರ ಜೊತೆ ಭೋಜನಕೂಟದಲ್ಲಿ ಭಾಗವಹಿಸಿದರು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಅದಕ್ಕೂ ಮೊದಲು ಕಾಂಗ್ರೆಸ್‌ ಶಾಸಕರ ಸಭೆ ನಡೆಯಿತು. ವಿಧಾನಸಭೆ ತಡವಾಗಿ ಮುಕ್ತಾಯವಾದ ಕಾರಣ ಎಲ್ಲ ಶಾಸಕರು ಬಂದು ಸೇರುವುದು ವಿಳಂಬವಾಯಿತು. ಹೀಗಾಗಿ ವಿಳಂಬವಾಗಿ ಸಭೆ ಆರಂಭವಾಯಿತು. ಸಭೆಯಲ್ಲಿ ಸೋಮಶೇಖರ್‌ ಮತ್ತು ಹೆಬ್ಬಾರ್‌ ಭಾಗವಹಿಸಲಿಲ್ಲ. ಆದರೆ, ಭೋಜನದಲ್ಲಿ ಎಲ್ಲರ ಜೊತೆ ಭಾಗವಹಿಸಿದರು ಎಂದೂ ಮೂಲಗಳು ಹೇಳಿವೆ.

ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲ ರೀತಿಯಲ್ಲೂ ಸಿದ್ಧರಾಗುವಂತೆ ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಲಾಯಿತು. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಘೋಷಿಸಿದ ‘ಗ್ಯಾರಂಟಿ’ ಯೋಜನೆಗಳು ಯಶಸ್ವಿಯಾಗಿವೆ. ಈ ಯೋಜನೆಗಳ ಬಗ್ಗೆ ಜನವರಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮತ್ತು ವಿಧಾನ ಸಭಾ ಕ್ಷೇತ್ರವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ‘ಗ್ಯಾರಂಟಿ’ ಯೋಜನೆಗಳ ಪ್ರಯೋಜನ ಪಡೆದ ಫಲಾನುಭವಿಗಳನ್ನು ಒಂದೆಡೆ ಸೇರಿಸಬೇಕು. ಆ ಮೂಲಕ, ಲೋಕಸಭಾ ಚುನಾವಣೆಗೆ ಸಜ್ಜಾಗಬೇಕು ಎಂದು ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಲಾಗಿದೆ.

ಬಿಜೆಪಿಯಲ್ಲಿ ಅಸಮಾಧನಗೊಂಡಿರುವ ಎಸ್‌ ಟಿ ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಬಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *